ಬೆಂಗಳೂರು: ನಾಯಕತ್ವ ಬದಲಾವಣೆ ಡ್ರಾಮಾ ಅಷ್ಟೇ ಎಂದು ಗೃಹಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.
ನಾಯಕತ್ವದ ಬದಲಾವಣೆ ಚರ್ಚೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಮಾಧ್ಯಮಗಳು ವಿಶ್ಲೇಷಣೆ ಮಾಡಿದಂತೆ ಇದೊಂದು ಡ್ರಾಮಾ. ನಿಮ್ಮ ಹೇಳಿಕೆಯನ್ನು ನಾನು ಒಪ್ಪಬೇಕಾಗುತ್ತೆ. ಪದೇ ಪದೇ ಇದರ ಬಗ್ಗೆ ಚರ್ಚೆ ಆಗುವುದು, ಅವರೊಂದು ಹೇಳಿಕೆ ಕೊಡುವುದು ನಾನೊಂದು ಹೇಳೋದು, ಮತ್ತೊಬ್ಬರು ಒಂದು ಹೇಳೋದು ಆಗಬಾರದು ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ
ಆಡಳಿತದಲ್ಲಿ ಯಾವುದೇ ರೀತಿ ತೊಂದರೆ ಇಲ್ಲ. ಮುಖ್ಯಮಂತ್ರಿಗಳು (CM Siddaramaiah) ಆಡಳಿತ ಮಾಡುತ್ತಿದ್ದಾರೆ. ಸುಮ್ಮನೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ನಂಗೆ ಇಷ್ಟವಿಲ್ಲ ಎಂದಿದ್ದಾರೆ.
ನಾಯಕತ್ವದ ಬದಲಾವಣೆ ವಿಚಾರದ ಅಭಿಪ್ರಾಯಗಳನ್ನು ಗೌರವಿಸುತ್ತೇವೆ ಎಂಬ ಸುರ್ಜೇವಾಲಾ (Randeep Surjewala) ಹೇಳಿಕೆ ವಿಚಾರವಾಗಿ, ಇದು ನನಗೆ ಗೊತ್ತಿಲ್ಲ. ಒಬ್ಬೊಬ್ಬರು ಒಂದೊಂದು ರೀತಿ ವಿಶ್ಲೇಷಣೆ ಮಾಡ್ತಾರೆ. ನಾನು ಸ್ಮೂತ್ ಆಗೇ ಇರೋದು, ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟ ಇಲ್ಲ. ಅದನ್ನ ಬಿಟ್ಟುಬಿಡೋಣ, ನಮ್ಮ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಾರೆ. ಸಂದರ್ಭ ಬಂದಾಗ ತೀರ್ಮಾನ ಮಾಡುತ್ತಾರೆ. ಈಗ ಅಂತ ಸಂದರ್ಭ ಇದೆಯಾ ಅಂತ ನಾನು ಹೇಳೋಕೆ ಹೋಗಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಜಕೀಯ ನಿವೃತ್ತಿ ಬಳಿಕ ಕೃಷಿಯಲ್ಲಿ ತೊಡಗಿಕೊಳ್ತೀನಿ: ಅಮಿತ್ ಶಾ