Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಅತೃಪ್ತ ಶಾಸಕರು ಪಕ್ಷ ಬಿಡುತ್ತಾರೆ ಅನಿಸ್ತಿದೆ: ಜಿ.ಪರಮೇಶ್ವರ್

Public TV
Last updated: February 9, 2019 9:00 pm
Public TV
Share
3 Min Read
G PARAMESHWAR
SHARE

– ಜಿ.ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಶ್ರೀಲಂಕಾ ಮಾಜಿ ರಾಷ್ಟ್ರಪತಿ

ಬೆಂಗಳೂರು: ಅತೃಪ್ತ ಶಾಸಕರು ಕಳೆದ ಮೂರು ಸಿಎಲ್‍ಪಿ ಸಭೆಗೂ ಹಾಜರಾಗಲಿಲ್ಲ. ಹೀಗಾಗಿ ಅವರು ಪಕ್ಷ ಬಿಡುತ್ತಾರೆ ಅಂತ ಅನಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.

ಇಲ್ಲಿನ ಸದಾಶಿವನಗರದ ನಿವಾಸದಲ್ಲಿ ಶ್ರೀಲಂಕಾ ಮಾಜಿ ರಾಷ್ಟ್ರಪತಿ ಮಹಿಂದಾ ರಾಜಪಕ್ಸೆ ಅವರನ್ನು ಭೇಟಿಯಾಗಿ ಬಳಿಕ ಮಾತನಾಡಿದ ಅವರು, ಸಿಎಲ್‍ಪಿ ಸಭೆಗೆ ಗೈರಾದ ಶಾಸಕರ ಅನರ್ಹತೆ ಮಾಡುವ ಕುರಿತು ಈಗಾಗಲೇ ತೀರ್ಮಾನ ಮಾಡಲಾಗಿದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಅವರನ್ನು ಹೊರತುಪಡಿಸಿ ಬೇರೆ ಶಾಸಕರು ಪಕ್ಷವನ್ನು ಬಿಡುವುದಿಲ್ಲ ಎಂದು ತಿಳಿಸಿದರು.

Ramesh Mahesh Umesh Nagendra 1 1

ಅತೃಪ್ತ ಶಾಸಕರನ್ನು ಹೊರತಾಗಿ ನಮ್ಮ ಪಕ್ಷದ ಬೇರೆ ಶಾಸಕರ ಜೊತೆಗೆ ಬಿಜೆಪಿಯವರು ಮಾತನಾಡಿರಬಹುದು. ಆದರೆ ಅವರಲ್ಲಿ ಪಕ್ಷಬಿಡುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಅತೃಪ್ತರ ಬಗ್ಗೆ ಚರ್ಚೆ ನಡೆಸಿದ್ದಾರೆ. ಅವರು ಬೆಂಗಳೂರಿಗೆ ವಾಪಸ್ ಬಂದು ಏನು ಕ್ರಮ ಕೈಗೊಳ್ಳಬೇಕು ಅಂತ ತಿಳಿಸಲಿದ್ದಾರೆ ಎಂದರು.

ಶ್ರೀಲಂಕಾ ಮಾಜಿ ಅಧ್ಯಕ್ಷರ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಡಿಸಿಎಂ, ಮಹಿಂದಾ ರಾಜಪಕ್ಸೆ ಅವರು ಐಟಿ ಹಾಗೂ ಸ್ಟಾರ್ಟ್ ಅಪ್‍ಗಳ ಬಗ್ಗೆ ಮಾಹಿತಿ ಪಡೆದರು. ಇದನ್ನು ಬಿಟ್ಟು ಬೇರೆ ಯಾವುದೇ ರಾಜಕೀಯ ಅಥವಾ ಒಪ್ಪಂದಗಳ ಕುರಿತು ಚರ್ಚೆ ಮಾಡಲಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲಾದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಭಾರತದೊಂದಿಗೆ ಶ್ರೀಲಂಕಾ ಕೂಡ ವೇಗವಾಗಿ ಬೆಳವಣಿಗೆ ಹೊಂದಬೇಕು ಎನ್ನುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ ಎಂದರು.

G. Parameshwar Mahinda Rajapaksa

ನನ್ನ ಅಧಿಕಾರ ಅವಧಿಯಲ್ಲಿ ಹಲವು ಯೋಜನೆ ಜಾರಿಗೆ ತಂದಿದ್ದೆ. ಆದರೆ ಈಗ ದೇಶದ ಅಭಿವೃದ್ಧಿ ಕುಂಠಿತವಾಗಿದೆ ಅಂತ ಮಹಿಂದಾ ರಾಜಪಕ್ಸೆ ಬೇಸರ ವ್ಯಕ್ತಪಡಿಸಿದರು. ಅವರು ಮತ್ತೆ ಅಧಿಕಾರಕ್ಕೆ ಬರಬಹುದು ಎನ್ನುವ ವಿಶ್ವಾಸವಿದೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

ಹೆಬ್ಬಾಳ ಪ್ಲೈ ಓವರ್ ನಿರ್ಮಾಣ ಯೋಜನೆಯಲ್ಲಿ ಸ್ವಲ್ಪ ಬದಲಾವಣೆ ಮಾಡುತ್ತಿದ್ದೇವೆ. ಪ್ಲಾನ್ ಸಿದ್ಧವಾದ ಮೇಲೆ ಸಾರ್ವಜನಿಕರು ಹಾಗೂ ಆ ಭಾಗದ ಜನರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಕೆಲವರು ವಿರೋಧ ಮಾಡುತ್ತಾರೆ ಅಂದ್ರೆ ಯೋಜನೆಯನ್ನು ಬಿಡುವುದಕ್ಕೆ ಆಗಲ್ಲ. ಯೋಜನೆಯಲ್ಲಿ ಲೋಪ ಇದ್ದರೆ ಹೇಳಲಿ ಸರಿಪಡಿಸುತ್ತೇವೆ. ಈ ಯೋಜನೆಯನ್ನು ಅನೇಕರು ಸ್ಟೀಲ್ ಬ್ರಿಡ್ಜ್ ಅಂತ ಕರೆಯುತ್ತಿದಾರೆ. ಆದರೆ ಅದು ಸ್ಟೀಲ್ ಬ್ರೀಡ್ಜ್ ಅಲ್ಲ. ಚಾಲುಕ್ಯ ಸರ್ಕಲ್‍ನಿಂದ ಹೆಬ್ಬಾಳ ಸಂಪರ್ಕಿಸುವ ಪ್ಲೈ ಓವರ್ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

G. Parameshwar Mahinda Rajapaksa 1

ಬಜೆಟ್ ಬಗ್ಗೆ ಬಿಸಿ ಪಾಟೀಲ್ ಅಸಮಧಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜಿ.ಪರಮೇಶ್ವರ್ ಅವರು, ನಾವು ಬಜೆಟ್‍ನಲ್ಲಿ 224 ಕ್ಷೇತ್ರಕ್ಕೂ ಯೋಜನೆ ಹಂಚುವುದಿಲ್ಲ. ಕಾರ್ಯಕ್ರಮ ಘೋಷಿಸುತ್ತೇವೆ ಅವರ ಕ್ಷೇತ್ರಕ್ಕೆ ಅನ್ವಯವಾಗುತ್ತದೆ. ರಸ್ತೆ ಕೆರೆ ಅಭಿವೃದ್ಧಿಗೆ ಹಲವು ಕಾರ್ಯಕ್ರಮ ಘೋಷಿಸಿದ್ದಾರೆ. ಅದು ಅವರ ಕ್ಷೇತ್ರಕ್ಕೂ ಅನ್ವಯವಾಗಲಿದೆ. ಎಲ್ಲನ್ನೂ ಬಜೆಟ್‍ನಲ್ಲೇ ಘೋಷಿಸಬೇಕಂತ ಏನು ಇಲ್ಲ. ಯಾವುದೇ ಶಾಸಕರಿಗೆ ಅಸಮಧಾನವಿದ್ದರೆ ನಮಗೆ ಹೇಳಲಿ. ಅವರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಕೊಡುವುದಕ್ಕೆ ಸಂಪ್ಲಿಮೆಂಟರಿ ಬಜೆಟ್‍ನಲ್ಲಿ ಅವಕಾಶವಿದೆ ಎಂದು ತಿಳಿಸಿದರು.

G. Parameshwar

ಎನ್‍ಜಿಟಿ ಬಫರ್ ಜೋನ್ ವಿಚಾರವಾಗಿ ಮಾತನಾಡಿ ಅವರು, ಎನ್‍ಜಿಟಿ ಆದೇಶ ಪಾಲಿಸುವುದು ಕಷ್ಟ. ಕೆರೆ ಹಾಗೂ ರಾಜಕಾಲುವೆಯಿಂದ 75 ಮೀಟರ್ ಜಾಗ ಬಿಟ್ಟು ಮನೆ ಕಟ್ಟಿಕೋಬೇಕು. ಇಡೀ ದೇಶದಲ್ಲಿ ಬೆಂಗಳೂರಿಗೆ ಮಾತ್ರ ಎನ್‍ಜಿಟಿ ಆದೇಶ ನೀಡಲಾಗಿದ್ದು, ಇದರಿಂದಾಗಿ 36 ಸಾವಿರ ಮನೆಗಳನ್ನು ಒಡೆಯಬೇಕಾಗುತ್ತದೆ. ಆದೇಶ ಪಾಲನೆ ಮಾಡಿದರೆ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.

ಬಫರ್ ಜೋನ್ ನಿಯಮ ಬದಲಾಯಿಸುವ ಅಗತ್ಯವಿದೆ. ಕೆರೆಗಳಿಗೆ ಹಾಗೂ ರಾಜಕಾಲುವೆಗೆ ಬೇರೆ ಬೇರೆ ನಿಯಮ ಮಾಡುವ ಅಗತ್ಯವಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿರುವೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:clp meetingcongressdissatisfied MLAsFormer PresidentG ParameshwarMahinda RajapaksaPublic TVSri Lankaಅತೃಪ್ತ ಶಾಸಕರುಕಾಂಗ್ರೆಸ್ಜಿ.ಪರಮೇಶ್ವರ್ಪಬ್ಲಿಕ್ ಟಿವಿಮಹಿಂದಾ ರಾಜಪಕ್ಸೆಮಾಜಿ ರಾಷ್ಟ್ರಪತಿಶ್ರೀಲಂಕಾಸಿಎಲ್‍ಪಿ ಸಭೆ
Share This Article
Facebook Whatsapp Whatsapp Telegram

You Might Also Like

Jamun
Bengaluru City

ಫಸ್ಟ್‌ ಟೈಂ ಲಂಡನ್‌ಗೆ ಕರ್ನಾಟಕದ ನೇರಳೆ ಹಣ್ಣು ರಫ್ತು

Public TV
By Public TV
1 minute ago
mysuru central jail
Latest

ಕೈದಿಗಳು 6 ಸಾವಿರ ಕೊಟ್ರೆ ಕೀ ಪ್ಯಾಡ್ ಫೋನ್, 15,000ಕ್ಕೆ ಆ್ಯಂಡ್ರಾಯ್ಡ್‌ ಫೋನ್ – ಮೈಸೂರು ಕೇಂದ್ರ ಕಾರಾಗೃಹದ ಸ್ಥಿತಿ ಬಿಚ್ಚಿಟ್ಟ ಸರ್ಕಾರಿ ಸದಸ್ಯ

Public TV
By Public TV
45 seconds ago
karwar accident
Latest

ಪ್ರಪಾತದ ಬಳಿ ಬಸ್ ಪಲ್ಟಿ – ಪ್ರಾಣಾಪಾಯದಿಂದ 25 ಪ್ರಯಾಣಿಕರು ಪಾರು

Public TV
By Public TV
26 minutes ago
Young man Kills his Lover in Mandya
Crime

ಬೆಳಗ್ಗೆ ಜಾಲಿ ರೈಡ್, ಸಂಜೆ ಆಭರಣ ದೋಚಿ ವಿವಾಹಿತ ಪ್ರಿಯತಮೆಯ ಮರ್ಡರ್!

Public TV
By Public TV
39 minutes ago
Shiggaon contractor murder case 1
Crime

ಗುತ್ತಿಗೆದಾರನ ಹತ್ಯೆ ಕೇಸ್ – ಆರೋಪಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕುಟುಂಬಸ್ಥರು

Public TV
By Public TV
1 hour ago
Shubhanshu Shukla 3
Latest

ಇಂದು ಮಧ್ಯಾಹ್ನ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?