– ರಿಕ್ಕಿ ರೈ ಮೇಲೆ ಶೂಟೌಟ್ ಕೇಸ್; ಔಟ್ ಆಫ್ ಡೇಂಜರ್ ಎಂದ ಗೃಹಸಚಿವ
ಬೆಂಗಳೂರು: ಜನಿವಾರ ತೆಗೆಸಿ ಪರೀಕ್ಷೆ ಬರೆಸಿರುವುದು ಬಹಳ ದೊಡ್ಡ ತಪ್ಪು. ನಾನು ಕೂಡ ಇದನ್ನು ಖಂಡಿಸುತ್ತೇನೆ ಎಂದು ಗೃಹಸಚಿವ ಜಿ.ಪರಮೇಶ್ವರ್ (J Parameshwar) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನಾವು ಪರೀಕ್ಷೆ ಮಾಡುವ ಸಂದರ್ಭದಲ್ಲಿ ನಿಯಮ ಪಾಲನೆ ಮಾಡಲು ಹೇಳುತ್ತಾರೆ. ಈ ತರಹ ಪಾಲನೆ ಮಾಡಲು ಹೇಳಿರಲ್ಲ. ಅಧಿಕಾರಿಗಳು ಎಲ್ಲವನ್ನೂ ಸರಿಪಡಿಸುತ್ತಾರೆ ಎಂದು ಭರವಸೆಯ ಮಾತುಗಳನ್ನಾಡಿದರು. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಕೂರಿಸದ ಪ್ರಕರಣ – ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ FIR
ರಿಕ್ಕಿ ರೈ ಮೇಲೆ ಗುಂಡಿನ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿ, ನನಗೆ ವಿಷಯ ಗೊತ್ತಾಗಿದೆ. ನಾನು ಮಾಹಿತಿ ಕೇಳಿದ್ದೇನೆ. ರಾತ್ರಿ 1 ಗಂಟೆಗೆ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ಕೇಳಿದ್ದೇನೆ. ಔಟ್ ಆಫ್ ಡೇಂಜರ್ ಅಂತ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮುತ್ತಪ್ಪ ರೈ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ: ಪ್ರಕಾಶ್ ರೈ
ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಎಲ್ಲಾ ಪ್ಯಾರಾ ಮೀಟರ್ಸ್ ಹೇಳುತ್ತಿವೆ. ಕ್ರೈಂ ಪ್ರಕರಣಗಳು ಕಡಿಮೆಯಾಗಿವೆ. ಪೊಲೀಸ್ ಕಮಿಷನರ್ ಬ್ರೀಫ್ ಮಾಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆಯಾಗಿದೆ. ಸೈಬರ್ ಕೇಸ್ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಎಲ್ಲಾ ಸರಿಯಾಗಿದೆ ಎಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು. ಇದನ್ನೂ ಓದಿ: ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್ ಮಾಡಿದ್ದು ಏಕೆ?
ಒಳಮೀಸಲಾತಿಗೆ ಜಾತಿಗಣತಿ ವರದಿ ಬಳಸುವ ಚರ್ಚೆ ವಿಚಾರವಾಗಿ ಮಾತನಾಡಿ, ನ್ಯಾ. ನಾಗಮೋಹನ್ ದಾಸ್ (Nagamohan Das) ಅವರಿಗೆ ಈಗಾಗಲೇ ಕೊಟ್ಟಿದ್ದೇವೆ. ಈ ಜಾತಿಗಣತಿ ವರದಿಯನ್ನು ಅದರೊಂದಿಗೆ ಹೋಲಿಸುತ್ತಾರೆ. ಡಬಲ್ ಆದರೆ ಒಳ್ಳೆಯದಲ್ವಾ. ಕಮಿಷನ್ ಡಾಟಾ ಕಲೆಕ್ಟ್ ಮಾಡಲು ಶುರು ಮಾಡಿದೆ. ಈಗ ನಿಲ್ಲಿಸಿ ಅಂತ ಹೇಳೋದು ಸರಿಯಲ್ಲ ಎಂದು ಹೇಳಿದರು.