ವಿಜಯನಗರ: ಹಂಪಿಯಲ್ಲಿ ನಡೆದ ಜಿ20 ಶೆರ್ಪಾ ಸಭೆ (G20 Summit) ಯಶಸ್ವಿಯಾಗಿದೆ. ಈ ಸಭೆಯಲ್ಲಿ ಭಾಗವಹಿಸಿದ ಶೆರ್ಪಾಗಳಿಗೆ ಅಭೂತಪೂರ್ವ ಅನುಭವವಾಗಿದೆ ಎಂದು ಭಾರತದ ಶೆರ್ಪಾ ಅಮಿತಾಬ್ ಕಾಂತ್ (Amitabh Kant) ತಿಳಿಸಿದ್ದಾರೆ.
ಹಂಪಿಯ (Hampi) ಎವಾಲ್ವ್ ಬ್ಯಾಕ್ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಂಪಿಯನ್ನು ಸ್ವಚ್ಛವಾಗಿ ಹಾಗೂ ಸುಂದರವಾಗಿ ಕಾಣುವಂತೆ ಮಾಡಿದ ಪ್ರವಾಸೋದ್ಯಮ ಹಾಗೂ ಪುರಾತತ್ವ ಇಲಾಖೆಗಳ ಅಧಿಕಾರಿಗಳು ಅಭಿನಂದನಾರ್ಹರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರು ಹಾಗೂ ಮಕ್ಕಳ ಪ್ರದರ್ಶನ ಚೆನ್ನಾಗಿತ್ತು. ಹಂಪಿ ಬೈ ನೈಟ್ ಬಹಳ ಒಳ್ಳೆಯ ಅನುಭವ ನೀಡಿದೆ. ಹಂಪಿ ಭಿನ್ನವಾಗಿ ಸುಂದರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ
ಮೂರನೇ ಜಿ20 ಶೃಂಗಸಭೆಗೆ ಹಂಪಿ ಸಾಕ್ಷಿಯಾಗಿದೆ. ಈ ಸಭೆಯಲ್ಲಿ ಯಾವುದಕ್ಕೆ ಭಾರತದ ಪ್ರಾಮುಖ್ಯತೆ ಎನ್ನುವುದನ್ನು ಮನವರಿಕೆ ಮಾಡಿಕೊಡಲಾಗಿದೆ. ಸಭೆಯಲ್ಲಿ ಜಿ20 ರಾಷ್ಟ್ರಗಳು ಯಶಸ್ವಿಯಾಗಿ ಭಾಗವಹಿಸಿವೆ. ಅಲ್ಲದೇ ಪ್ರಾಪಂಚಿಕ ಅಭಿವೃದ್ಧಿಪರ ವಿಚಾರಗಳು ಚರ್ಚೆಯಾಗಿದ್ದು, ತಾಂತ್ರಿಕತೆಯ ಕೊಂಡುಕೊಳ್ಳುವಿಕೆ ಮತ್ತು ವಿನಿಮಯ ಮಾಡಿಕೊಳ್ಳಲು ಒಪ್ಪಂದವಾಗಿದೆ. ಪ್ರಮುಖವಾಗಿ ಆಫ್ರಿಕನ್ ಒಕ್ಕೂಟಗಳಿಗೆ ಜಿ20 ಸದಸ್ಯತ್ವ ನೀಡಲು ಒತ್ತಾಯಿಸಲಾಗಿದೆ. ಇದಕ್ಕೆ ಉಳಿದ ದೇಶಗಳು ಸಹಮತ ಸೂಚಿಸಿವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕಾವೇರಿ ನೀರಿಗೆ ತಮಿಳುನಾಡು ಬೇಡಿಕೆ – ಯಾವ ತಿಂಗಳು ಎಷ್ಟು ನೀರು ಬಿಡಬೇಕು?
ಈ ಬಾರಿಯ ಜಿ20 ಶೃಂಗಸಭೆಯು ಜುಲೈ 9ರಿಂದ 16ರವರೆಗೆ ಹಂಪಿಯಲ್ಲಿ ನಡೆದಿದ್ದು, ಭಾರತ ಅಧ್ಯಕ್ಷೀಯ ರಾಷ್ಟ್ರವಾಗಿತ್ತು. ಶೃಂಗಸಭೆಗೆ 20 ದೇಶಗಳ ಪೈಕಿ 19 ದೇಶಗಳ 30 ಪ್ರತಿನಿಧಿಗಳು, 9 ಆಹ್ವಾನಿತ ದೇಶಗಳ 16 ಪ್ರತಿನಿಧಿಗಳು ಸೇರಿದಂತೆ ಒಟ್ಟು 52 ಗಣ್ಯರು ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಆಯುಷ್ಮಾನ್, ಆರೋಗ್ಯ ಕರ್ನಾಟಕಕ್ಕೆ ಕೇಂದ್ರ 60% ನೆರವು ನೀಡಲಿ – ದಿನೇಶ್ ಗುಂಡೂರಾವ್ ಮನವಿ
Web Stories