Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PublicTV Explainer: ಆರ್ಥಿಕವಾಗಿ ಕಂಗೆಟ್ಟಿರುವ ವಿಶ್ವಕ್ಕೆ ಜಿ20 ಶೃಂಗಸಭೆಯಲ್ಲಿ ಸಿಗುತ್ತಾ ಬೂಸ್ಟರ್‌ ಡೋಸ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Explainer | PublicTV Explainer: ಆರ್ಥಿಕವಾಗಿ ಕಂಗೆಟ್ಟಿರುವ ವಿಶ್ವಕ್ಕೆ ಜಿ20 ಶೃಂಗಸಭೆಯಲ್ಲಿ ಸಿಗುತ್ತಾ ಬೂಸ್ಟರ್‌ ಡೋಸ್‌?

Explainer

PublicTV Explainer: ಆರ್ಥಿಕವಾಗಿ ಕಂಗೆಟ್ಟಿರುವ ವಿಶ್ವಕ್ಕೆ ಜಿ20 ಶೃಂಗಸಭೆಯಲ್ಲಿ ಸಿಗುತ್ತಾ ಬೂಸ್ಟರ್‌ ಡೋಸ್‌?

Public TV
Last updated: February 18, 2023 5:17 pm
Public TV
Share
3 Min Read
G20 summit 2022
SHARE

ವಿಶ್ವದ 20 ಪ್ರಮುಖ ಮುಂದುವರಿದ ಮತ್ತು ಉದಯೋನ್ಮುಖ ಆರ್ಥಿಕತೆಯ ರಾಷ್ಟ್ರಗಳು ಇಂಡೋನೇಷ್ಯಾದ (Indonesia) ಬಾಲಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಶೃಂಗಸಭೆಯಲ್ಲಿ (G20 Summit) ಪಾಲ್ಗೊಂಡಿವೆ. ಇದು 17ನೇ ವಾರ್ಷಿಕ ಶೃಂಗಸಭೆಯಾಗಿದೆ. ಸಭೆಯ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿನಿಧಿಸುವ ಭಾರತವು ಜಿ20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ. ಮುಂದಿನ ವರ್ಷ ಭಾರತದಲ್ಲಿ (India) 18ನೇ ಶೃಂಗಸಭೆ ನಡೆಯಲಿದೆ.

2022ರ ಶೃಂಗಸಭೆಯ ಅಜೆಂಡಾದಲ್ಲಿ ಏನಿದೆ?
ಜಾಗತಿಕ ಬೆಳವಣಿಗೆ, ಆಹಾರ ಮತ್ತು ಇಂಧನ ಭದ್ರತೆ, ಪರಿಸರ, ಆರೋಗ್ಯ ಮತ್ತು ಡಿಜಿಟಲ್‌ ರೂಪಾಂತರ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತ ಚರ್ಚೆಗೂ ಸಭೆ ವೇದಿಕೆ ಕಲ್ಪಿಸಲಿದೆ. ಇದನ್ನೂ ಓದಿ: ಜಿ20 ಶೃಂಗಸಭೆಯಲ್ಲಿ ಮೊದಲ ಬಾರಿಗೆ ರಿಷಿ ಸುನಾಕ್‌ ಭೇಟಿಯಾದ ಮೋದಿ

G20 modi

ಆರ್ಥಿಕ ಸಂಕಷ್ಟದಲ್ಲಿ ಜಿ20 ದೇಶಗಳು
ಅಕ್ಟೋಬರ್ 2021 ರಲ್ಲಿ ರೋಮ್‌ನಲ್ಲಿ ಶೃಂಗಸಭೆ ನಡೆದ ನಂತರ, ಜಾಗತಿಕ ಆರ್ಥಿಕತೆಯ ಭವಿಷ್ಯ ಹದಗೆಟ್ಟಿದೆ. G20 ದೇಶಗಳು ವಿಶ್ವದ ಜನಸಂಖ್ಯೆಯ ಶೇ.60, ವಿಶ್ವದ GDPಯ ಶೇ.80 ಮತ್ತು ವಿಶ್ವದ ರಫ್ತುಗಳಲ್ಲಿ ಶೇ.75 ರಷ್ಟನ್ನು ಹೊಂದಿವೆ. ಅಂತೆಯೇ ಅವು ಜಾಗತಿಕ ಬೆಳವಣಿಗೆಯ ಎಂಜಿನ್‌ ಎಂದೇ ಗುರುತಿಸಿಕೊಂಡಿವೆ.

ಆದಾಗ್ಯೂ, ಜಿ20 ದೇಶಗಳ ಕುರಿತಾದ ಅಂತರರಾಷ್ಟ್ರೀಯ ಹಣಕಾಸು ನಿಧಿಯ ಇತ್ತೀಚಿನ ವರದಿಯಂತೆ, ಕೋವಿಡ್-19 ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ ಜಿ20 ದೇಶಗಳು ಗಮನಾರ್ಹ ಉತ್ಪಾದನಾ ನಷ್ಟವನ್ನು ಅನುಭವಿಸಿವೆ. ಭಾರತವು ತನ್ನ ಒಟ್ಟು ಉತ್ಪಾದನೆಯ ಸುಮಾರು ಶೇ.14 ರಷ್ಟನ್ನು ಕಳೆದುಕೊಂಡಿದೆ. ಎಲ್ಲಾ G20 ದೇಶಗಳಲ್ಲಿ ಅತಿ ಹೆಚ್ಚು ನಷ್ಟವಾಗಿದೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಕದನ ವಿರಾಮ, ರಾಜತಾಂತ್ರಿಕತೆ ಮಾರ್ಗ ಕಂಡುಕೊಳ್ಳಬೇಕಿದೆ – ಜಿ20 ಶೃಂಗಸಭೆಯಲ್ಲಿ ಮೋದಿ ಮಾತು

corona covid

ಪರಿಸ್ಥಿತಿ ಏಕೆ ಹದಗೆಟ್ಟಿದೆ?
ಜಾಗತಿಕ ಬೆಳವಣಿಗೆ ಮತ್ತು ಜಾಗತೀಕರಣದ ಭರವಸೆ ತೀವ್ರ ಹಿನ್ನಡೆಯನ್ನು ಅನುಭವಿಸುವುದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ಉಕ್ರೇನ್ (Ukraine) ಮೇಲಿನ ರಷ್ಯಾ (Russia) ಆಕ್ರಮಣವು ಭೌಗೋಳಿಕ ರಾಜಕೀಯ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಅಲ್ಲದೇ ಜಾಗತಿಕ ಹಣದುಬ್ಬರ ಹೆಚ್ಚಿಸಿದೆ. ಪಾಶ್ಚಿಮಾತ್ಯ ರಾಷ್ಟ್ರಗಳಿಂದ ವಿಧಿಸಿದ ನಿರ್ಬಂಧಗಳು ಸಹ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ.

ಎರಡನೆಯದಾಗಿ, ಹಣದುಬ್ಬರ ಪರಿಣಾಮವಾಗಿ ಕೇಂದ್ರೀಯ ಬ್ಯಾಂಕುಗಳು ಬಡ್ಡಿದರಗಳನ್ನು ಹೆಚ್ಚಿಸಿವೆ. ಇದು ಆರ್ಥಿಕ ಚಟುವಟಿಕೆಯನ್ನು ಮತ್ತಷ್ಟು ಕುಂಠಿತಗೊಳಿಸಿದೆ. ಪ್ರಮುಖ ಆರ್ಥಿಕತೆ ಕೇಂದ್ರಗಳಾದ US ಮತ್ತು UK ರಾಷ್ಟ್ರಗಳೇ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿವೆ.

Ukraine Russia War

ಮೂರನೆಯದಾಗಿ, ಜಾಗತಿಕ ಬೆಳವಣಿಗೆಯ ಪ್ರಮುಖ ಎಂಜಿನ್‌ಗಳಲ್ಲಿ ಒಂದಾದ ಚೀನಾ, ರಿಯಲ್ ಎಸ್ಟೇಟ್ ಬಿಕ್ಕಟ್ಟಿನ ವಿರುದ್ಧ ಹೋರಾಡುತ್ತಿರುವುದು ಹಿನ್ನಡೆಗೆ ಪ್ರಮುಖ ಕಾರಣವಾಗಿದೆ. ಇದನ್ನೂ ಓದಿ: ಅಶ್ವಾರೋಹಣ ಸ್ಪರ್ಧೆಗೆ ಅಭ್ಯಾಸ ನಡೆಸುತ್ತಿದ್ದ ಬಿಎಸ್‌ಎಫ್ ಯೋಧನಿಗೆ ಕುದುರೆ ತುಳಿದು ಸಾವು

ಕೊನೆಯದಾಗಿ, ವಿಶ್ವದ ಆರ್ಥಿಕತೆ ಕೇಂದ್ರಗಳಾದ ಯುಎಸ್ ಮತ್ತು ಚೀನಾ ನಡುವಿನ ಉದ್ವಿಗ್ನತೆ ಅಥವಾ ಬ್ರೆಕ್ಸಿಟ್ ನಿರ್ಧಾರದ ಹಿನ್ನೆಲೆಯಲ್ಲಿ ಯುಕೆ ಮತ್ತು ಯೂರೋ ಪ್ರದೇಶದ ನಡುವಿನ ವ್ಯಾಪಾರದಲ್ಲಿ ಕುಸಿತ ಉಂಟಾಗಿದೆ. ಈ ಭೌಗೋಳಿಕ ರಾಜಕೀಯ ಬಿರುಕುಗಳೊಂದಿಗೆ ವಿಶ್ವ ಆರ್ಥಿಕತೆಯು ಹೋರಾಡುತ್ತಿದೆ.

IMF

ಪರಿಹಾರ ಎಲ್ಲಿದೆ?
ಜಾಗತಿಕ ಭವಿಷ್ಯವು ಸುಧಾರಿಸಲು ಜಿ20 ರಾಷ್ಟ್ರಗಳು ಒಟ್ಟಾಗಿ ಸಾಗಬೇಕು. ಆಗ ಆರ್ಥಿಕವಾಗಿ ವೇಗವಾಗಿ ಬೆಳೆಯಬಹುದು. ಅಂತಹ ಬೆಳವಣಿಗೆಗೆ ಶಾಂತಿಯ ಅಗತ್ಯವಿರುತ್ತದೆ. IMF ಪ್ರಕಾರ, ಸಾಲದ ಮಟ್ಟವನ್ನು ತಗ್ಗಿಸುವುದು, ದುರ್ಬಲ ರಾಷ್ಟ್ರಗಳ ನೆರವಿಗೆ ಧಾವಿಸುವುದು, ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ಕೆಲಸ ಆಗಬೇಕು. G20 ನಾಯಕರು ಹೆಚ್ಚು ʻಮುಕ್ತ, ಸ್ಥಿರ ಮತ್ತು ಪಾರದರ್ಶಕ ನಿಯಮ ಆಧಾರಿತʼ ವ್ಯಾಪಾರಕ್ಕೆ ಒತ್ತಾಯಿಸಬೇಕಾಗಿದೆ.

ರೋಮ್‌ನಲ್ಲಿ ಅಕ್ಟೋಬರ್ 2021 ರಲ್ಲಿ ನಡೆದ ಶೃಂಗಸಭೆಯ ನಂತರ, ಜಾಗತಿಕ ಆರ್ಥಿಕತೆ ಭವಿಷ್ಯವು ಹದಗೆಟ್ಟಿದೆ. ಇದಕ್ಕೆ ಪರಿಹಾರಗಳನ್ನು ಹುಡುಕುವ ನಿಟ್ಟಿನಲ್ಲಿ G20 ನಾಯಕರು ಹೇಗೆ ಕೆಲಸ ಮಾಡಬಹುದು ಎಂಬುದು ಕುತೂಹಲ ಮೂಡಿಸಿದೆ. ರೋಗಗ್ರಸ್ಥವಾಗಿರುವ ಜಾಗತಿಕ ಆರ್ಥಿಕತೆಗೆ 17ನೇ ಶೃಂಗಸಭೆಯು ಬೂಸ್ಟರ್‌ ಡೋಸ್‌ ನೀಡಬಹುದೇ ಎಂಬುದನ್ನು ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:G20 SummitGlobal Economyindonesiaಇಂಡೋನೇಷ್ಯಾಜಾಗತಿಕ ಆರ್ಥಿಕತೆಜಿ20 ಶೃಂಗಸಭೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
8 minutes ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
10 minutes ago
Narendra Modi 1 2
Latest

White House Dinner Shooting | ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ಮೋದಿ

Public TV
By Public TV
14 minutes ago
Donald Trump 1
Latest

ಕೊನೆಕ್ಷಣದಲ್ಲಿ ಶಾಂತಿ ಮಾತುಕತೆ ರದ್ದುಗೊಳಿಸಿದ ಟ್ರಂಪ್‌- ಪೆಚ್ಚಾದ ಪಾಕಿಸ್ತಾನ

Public TV
By Public TV
2 hours ago
trump attack rally
Latest

White House Dinner Shooting| 4 ಬಾರಿ ಟ್ರಂಪ್‌ ಹತ್ಯೆಗೆ ಯತ್ನ – ಯಾವಾಗ ಏನಾಗಿತ್ತು?

Public TV
By Public TV
2 hours ago
Chikkamagaluru Suicide copy
Chikkamagaluru

ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?