ಗದಗ: ಸಚಿವ ಸಿ.ಸಿ ಪಾಟೀಲ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗದಗ ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ, ಪರಿಸರ, ಜೀವಶಾಸ್ತ್ರ ಇಲಾಖೆ ಸಚಿವ ಸಿ.ಸಿ ಪಾಟೀಲ್ ಆಸಿಡಿಟಿ ಹಾಗೂ ಹೈಬಿಪಿ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿರಾಯು ಖಾಸಗಿ ಆಸ್ಪತ್ರೆ ವೈದ್ಯರಾದ ಡಾ. ಶ್ವೇತಾ ಸಂಕನೂರ, ಗದಗ ಜಿಮ್ಸ್ ಆಸ್ಪತ್ರೆಯ ಫಿಜಿಸಿಯನ್ ಡಾ.ಸಂಗಮೇಶ್ ಅಸೂಟಿ, ಸರ್ಜನ್ ಡಾ. ಬಸನಗೌಡ ಕರಿಗೌಡ ಚಿಕಿತ್ಸೆ ನೀಡಿದ್ದಾರೆ.
ಸಚಿವ ಸಿ.ಸಿ ಪಾಟೀಲ್ ಅವರಿಗೆ 180/100 ವರೆಗೆ ಹೈಬಿಪಿ ಏರಿಕೆಯಾಗಿತ್ತು. ಆಸಿಡಿಟಿಗೆ ಪ್ಯಾನ್-ಡಿ ಮಾತ್ರೆ, ಬಿಪಿಗೆ ಎನ್ವಾಸ್ ಮಾತ್ರೆ, ಅಮ್ಲೋಡಿಪಿನ್ 5 ಎಂಜಿ ಮಾತ್ರೆಯನ್ನು ವೈದ್ಯರು ನೀಡಿದ್ದಾರೆ. ಯಾವುದೇ ಅಪಾಯವಿಲ್ಲ, ಸದ್ಯ ಗುಣಮುಖರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳಿಂದ ದೃಢಪಟ್ಟಿದೆ. ಚಿಕಿತ್ಸೆ ಪಡೆದು ವೈದ್ಯರುಗಳ ಸಲಹೆ ಮೇರೆಗೆ ಸ್ವಗ್ರಾಮ ನರಗುಂದಕ್ಕೆ ತೆರಳಿ ವಿಶ್ರಾಂತಿ ಪಡೆಯಲಿದ್ದಾರೆ.