ಗದಗ: ಪ್ರೀತಿಸಿದ ಯುವಕನೊಂದಿಗೆ ಮಗಳು ಮನೆ ತೊರೆದು ಹೋಗಿದ್ದಕ್ಕೆ ಬೇಸತ್ತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೋಳದಲ್ಲಿ ನಡೆದಿದೆ.
ಗ್ರಾಮದ ಅಂಗನವಾಡಿ ಶಿಕ್ಷಕಿಯಾಗಿದ್ದ ಸುನೀತಾ ವೀರಣ್ಣ ನಾಯಕವಾಡಿ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಳೆದ ಅನೇಕ ತಿಂಗಳಿಂದ ಅದೇ ಊರಿನ ಯುವಕನೊಬ್ಬನನ್ನು ಮಗಳು ಪ್ರೀತಿಸುತ್ತಿದ್ದಳು. ಯುವಕ ಅನ್ಯ ಜಾತಿಯವನು ಎಂಬ ಕಾರಣಕ್ಕೆ ಸುನಿತಾ ಮಗಳ ನಿರ್ಧಾರವನ್ನು ಒಪ್ಪಿರಲಿಲ್ಲ. ಇದನ್ನೂ ಓದಿ: ಸದನದಲ್ಲಿ ಸಿದ್ದರಾಮಯ್ಯ-ಹೆಚ್ಡಿಕೆ ಮಧ್ಯೆ ಬೆಂಕಿ ಫೈಟ್
ಇತ್ತೀಚೆಗೆ ಯುವತಿ ಪ್ರೀತಿಸುತ್ತಿದ್ದ ಯುವಕನೊಂದಿಗೆ ಮದುವೆಯಾಗಿ ಬೆಂಗಳೂರಿನಲ್ಲಿ (Bengaluru) ವಾಸವಾಗಿದ್ದಳು. ಇದರಿಂದ ಬೇಸರಕ್ಕೊಳಗಾಗಿದ್ದ ಸುನೀತಾ ಅದೇ ಕೊರಗಿನಲ್ಲಿದ್ದರು ಎನ್ನಲಾಗಿದೆ. ಇದೀಗ ಸಹೋದರಿಯ ಮನೆಯಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಸಂಬಂಧ ನರಗುಂದ (Naragunda) ಪೊಲೀಸರು (Police) ಪ್ರಕರಣ ದಾಖಲಿಸಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯದ ಹಣ ವರ್ಗಾವಣೆ – ಷರತ್ತು ವಿಧಿಸಿದ ಸರ್ಕಾರ
Web Stories