Gadag
ಗದಗ್ನಲ್ಲಿ 3ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಇಬ್ಬರು ಅಸ್ವಸ್ಥ

ಗದಗ: ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಘೋಷಣೆಗಾಗಿ ಆಗ್ರಹಿಸಿ ಗದಗನಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ 3 ನೇ ದಿನವಾದ ಇಂದು ಮುಂದುವರೆದಿದೆ. ಇಂದು ನಡೆಯುವ ಹೋರಾಟವನ್ನ ಬಸವ ಯೋಗ ಸಮೀತಿಯ ಯೋಗ ಶಿಬಿರ ಮೂಲಕ ಆರಂಭವಾಗಿದೆ. ಇಂದು ಬೆಳಗಿನಜಾವ ಅಸ್ವಸ್ಥಗೊಂಡ ಒಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಇಂದು ಬೆಳಗ್ಗಿನ ಜಾವ ನಡೆದ ಉಪವಾಸ ಸತ್ಯಾಗ್ರಹದ ವೇಳೆ ಜನಸಂಗ್ರಾಮದ ಮುಖಂಡರಾದ ಪ್ರಭುಗೌಡ ಮತ್ತು ಪ್ರತಿಮಾ ನಾಯಕ್ ಎಂಬವರ ಶುಗರ್ ಲೆವಲ್ ಕಡಿಮೆ ಆಗಿ ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಮಾ ನಾಯಕ್ ಮಾತ್ರ ಕೇವಲ ನೀರು ಕುಡಿಯುವ ಮೂಲಕ ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಪ್ರತಿಭಟನ ನಿರರತ ಸ್ಥಳದಲ್ಲಿ ಅಂಬುಲೆನ್ಸ್, ವೈದ್ಯರು ಹಾಗೂ ಪೊಲೀಸ್ ಸಿಬ್ಬಂದಿಗಳು ಠಿಕಾಣಿ ಹೂಡಿದ್ದಾರೆ.
ವೈದ್ಯರು ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹೀರೆಮಠರನ್ನು ಚೆಕಪ್ ಮಾಡಲು ಹೋದಾಗ ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿ ಚೆಕಪ್ ಬೇಡ ಎಂದು ಹೇಳಿದ್ದಾರೆ. ತೋಂಟದ ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟಕ್ಕೆ ಇಂದು ಅನೇಕ ಸ್ವಾಮಿಜುಗಳು, ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪನವರು, ಪರಿಸರ ಪ್ರೇಮಿಗಳು ಹಾಗೂ ಗದಗ ಜಿಲ್ಲಾ ವಕೀಲರ ಸಂಘದಿಂದ ಇಂದು ತಮ್ಮ ಕಾರ್ಯಕಲಾಪಗಳನ್ನ ಬಹಿಷ್ಕರಿಸಿ ಹೋರಾಟಕ್ಕೆ ಸಾಥ್ ನೀಡ್ತಿದ್ದಾರೆ.
ಕಪ್ಪತ್ತಗುಡ್ಡ ಉಳಿಯುವಿಕೆಗೆ ಬೃಹತ್ ಪ್ರಮಾಣದಲ್ಲಿ ಇಷ್ಟೆಲ್ಲಾ ಹೋರಾಟ ನಡೆಯುತ್ತಿದ್ರೂ ಇತ್ತ ಮುಖ್ಯಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಈ ಬಗ್ಗೆ ಗಮನ ಹರಿಸದೇ ಇರುವುದು ವಿಪರ್ಯಾಸ.
