ಬಳ್ಳಾರಿಗೆ ಹೋಗಲು ಗಾಲಿ ಜನಾರ್ದನ ರೆಡ್ಡಿಗೆ ಸಿಕ್ತು ಅನುಮತಿ

Public TV
1 Min Read
Janardhana Reddy 1

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಅನುಮತಿ ಕೋರಿ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ರಜಾಕಾಲದ ಪೀಠ ಜೂನ್ 8 ರಿಂದ 2 ವಾರಗಳ ಕಾಲ ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಅನುಮತಿ ನೀಡಿದೆ.

ಇದೇ ವೇಳೆ ಸಿಬಿಐಗೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆರು ವರ್ಷ ಕಳೆದರೂ ಜನಾರ್ದನ ರೆಡ್ಡಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿಲ್ಲ ಏಕೆ? ಈ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನ್ಯಾಯಪೀಠವು ಸೂಚಿಸಿದೆ.

suprem court

ಅನಾರೋಗ್ಯದಿಂದ ಬಳಲುತ್ತಿರುವ ನಮ್ಮ ಮಾವನನ್ನು ಐಸಿಯುನಲ್ಲಿ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತದೆ. ಅವರನ್ನು ನೋಡಿ, ಮಾತನಾಡಿಸಬೇಕಿದೆ. ಹೀಗಾಗಿ ಬಳ್ಳಾರಿ ಜಿಲ್ಲೆ ಪ್ರವೇಶಿಸಲು ನನಗೆ ಅನುಮತಿ ಕೊಡಿ ಎಂದು ಜನಾರ್ದನ ರೆಡ್ಡಿ ಅವರು, ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

ಜನಾರ್ದನ ರೆಡ್ಡಿ ಅವರು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದರು. ಇದಾದ ಬಳಿಕ 2015ರಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಆರೋಪಿಯುವ ಬಳ್ಳಾರಿಯಲ್ಲಿದ್ದರೆ ಸಾಕ್ಷಿ ನಾಶ ಮಾಡುವ ಸಾಧ್ಯವಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ ಎಂದು ಕೋರ್ಟ್ ಈ ಹಿಂದೆ ಆದೇಶ ನೀಡಿತ್ತು.

Share This Article
Leave a Comment

Leave a Reply

Your email address will not be published. Required fields are marked *