Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ರಾಜಕೀಯ, ಖಾಸಗಿ ಜೀವನದ ಭವಿಷ್ಯಕ್ಕಾಗಿ ಆಶಿರ್ವಾದ ಪಡೆಯಲು ಮಠಕ್ಕೆ ಬಂದಿದ್ದೇನೆ : ಜನಾರ್ದನ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ರಾಜಕೀಯ, ಖಾಸಗಿ ಜೀವನದ ಭವಿಷ್ಯಕ್ಕಾಗಿ ಆಶಿರ್ವಾದ ಪಡೆಯಲು ಮಠಕ್ಕೆ ಬಂದಿದ್ದೇನೆ : ಜನಾರ್ದನ ರೆಡ್ಡಿ

Districts

ನನ್ನ ರಾಜಕೀಯ, ಖಾಸಗಿ ಜೀವನದ ಭವಿಷ್ಯಕ್ಕಾಗಿ ಆಶಿರ್ವಾದ ಪಡೆಯಲು ಮಠಕ್ಕೆ ಬಂದಿದ್ದೇನೆ : ಜನಾರ್ದನ ರೆಡ್ಡಿ

Public TV
Last updated: December 20, 2022 1:56 pm
Public TV
Share
3 Min Read
janardhan reddy 2 1
SHARE

ಗದಗ: ನನ್ನ ಭವಿಷ್ಯದ ರಾಜಕೀಯ ಹಾಗೂ ಖಾಸಗಿ ಜೀವನ ರೂಪಿಸಲು ಆಶಿರ್ವಾದ ಪಡೆಯಲು ಬಂದಿದ್ದೇನೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhan Reddy) ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮ ಹಾಗೂ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಅವರು, ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜಕೀಯ ಜೀವನದಲ್ಲಿ, ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ನಾನು ತೊಡಗಡಿಸಿಕೊಳ್ಳಲು ನಿಶ್ಚಯ ಮಾಡಿಕೊಂಡು ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಳ್ಳುತ್ತಿದ್ದೇನೆ. ಬಳ್ಳಾರಿ (Ballari) ನಂತರ ಅತೀ ಹೆಚ್ಚು ಅನುಬಂಧವಿರುವುದು ಗದಗ (Gadag) ನಗರದಲ್ಲಿ. ಇಲ್ಲಿ ಬಂದಾಗ ಬಳ್ಳಾರಿಯಲ್ಲೇ ಇದ್ದೀನಿ ಎಂಬ ತೃಪ್ತಿ ಹಾಗೂ ಸಂತೋಷ ಸಿಗುತ್ತದೆ ಎಂದು ತಿಳಿಸಿದರು.

janardhan reddy 1 1

ನನ್ನದು ಬಳ್ಳಾರಿಯಿಂದ ಹೊರಗಡೆ ಒರುವ ಪರಿಸ್ಥಿತಿ ಇದೆ. ಪದೇ ಪದೇ ಬೆಂಗಳೂರಿನಲ್ಲಿ ಹೋಗಿ ಉಳಿದುಕೊಳ್ಳಲು ಆಗಲ್ಲ. ಇಲ್ಲಿನ ಬಿಸಿಲು, ಗಾಳಿ ನನ್ನ ಮೇಲೆ ಬೀಳಬೇಕು. ಈ ವಾತಾವರಣ ನನ್ನ ದೇಹಕ್ಕೆ, ಮನಸ್ಸಿಗೆ ತೃಪ್ತಿ ಕೊಡುತ್ತದೆ. ಉತ್ತರ ಕರ್ನಾಟಕದಲ್ಲಿ ಓಡಾಡಿದ್ರೆ ಸಿಗುವ ಖುಷಿಯೇ ಬೇರೆ. ಕಳೆದ 12 ವರ್ಷಗಳ ಕಾಲ ವನವಾಸದ ಜೀವನ ಅನುಭವಿಸಿದ್ದೇನೆ. ಸಾರ್ವಜನಿಕ ಜೀವನದಲ್ಲಿ ತೋಡಗಿಕೊಳ್ಳಲು ತೀರ್ಮಾನ ಮಾಡಿದ್ದು, ಜನರ ಪ್ರೀತಿ ಎಲ್ಲಿ ಸಿಗುತ್ತದೆ ಅಲ್ಲಿ ಹೆಚ್ಚು ಓಡಾಟ ಮಾಡುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ 2ನೇ ಬಾರಿ ಗದಗ ನಗರಕ್ಕೆ ಭೇಟಿ ನೀಡಿದ್ದೇನೆ. ಮುಂದಿನ ಒಂದು ವರ್ಷದಲ್ಲಿ 200 ಬಾರಿಯೂ ಭೇಡಿ ನೀಡುವುದನ್ನು ನೀವು ನೋಡಬಹುದು ಎಂದರು.

ಪಂಡಿತ ಪುಟ್ಟರಾಜ ಕವಿ ಗವಾಯಿಗಳು ಹಾಗೂ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ಅವರನ್ನು ಕಣ್ಣಾರೆ ಕಂಡಿದ್ದೇನೆ. ಅವರ ಪಾದಸ್ಪರ್ಶದೊಂದಿಗೆ ವೇದಿಕೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವುದು ನನ್ನ ಹಾಗೂ ಶ್ರೀರಾಮುಲು ಅವರ ಪೂರ್ವ ಜನ್ಮದ ಪುಣ್ಯ ಎಂದಿ ನೆನಪಿಸಿಕೊಂಡರು. ಇದನ್ನೂ ಓದಿ: ತೆರಿಗೆ, ನೀರಿನ ಬಿಲ್ ಪಾವತಿಸಿ – ತಾಜ್ ಮಹಲ್‍ಗೆ ನೋಟಿಸ್

janardhan reddy 3

ಶ್ರೀರಾಮುಲು ಗದಗ ಜಿಲ್ಲೆಯ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಮಹಾತ್ಮ ಗಾಂಧಿ, ಕಿತ್ತೂರು ಚೆನ್ನಮ್ಮ, ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಮೂರ್ತಿಗಳು ನಿರ್ಮಾಣ ಮಾಡಲಾಗಿತ್ತು. ಈ ಸಂದರ್ಭದಲ್ಲಿ ತೋಂಟದ ಶ್ರೀಗಳು ಭೀಷ್ಮ ಕೆರೆ ಆವರಣದಲ್ಲಿ ಬಸವೇಶ್ವರ ಪುತ್ಥಳಿ ನಿರ್ಮಿಸಲು ಸಲಹೆ ನೀಡಿದಾಗ ಅತ್ಯಂತ ಸಂತೋಷದಿಂದ ಬಸವೇಶ್ವರ ಪುತ್ಥಳಿ ನಿರ್ಮಿಸಲಾಯಿತು. ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ಗದಗ ನಗರದಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು ಎಂದರು.

ಮುಂಬರುವ ಚುನಾವಣೆಯಲ್ಲಿ ಗದಗದಿಂದ ಸ್ಪರ್ಧಿಸುವ ಯೋಜನೆ ಇದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಜನಾರ್ದನ ರೆಡ್ಡಿ ಅವರು, ಡಿ. 25ರಂದು ಬೆಂಗಳೂರಿನಲ್ಲಿ ಮಾಧ್ಯಮದವರ ಮೂಲಕ ಕರ್ನಾಕಟದ ಜನತೆಗೆ ನನ್ನ ಮನದಾಳದ ಮಾತುಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂಡಿತ ಪಂಚಾಕ್ಷರಿ ಹಾಗೂ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಹಾನಗಲ್‌ ಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದರು. ಮಂಗಳಾರತಿ, ವಿಶೇಷ ಪೂಜೆ ಸಲ್ಲಿಸಿ ಆಶಿರ್ವಾದ ಪಡೆದರು. ಇದನ್ನೂ ಓದಿ: ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

ನಂತರ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದರು. ನಂತರ ಅನುಭವ ಮಂಟಪಕ್ಕೆ ಭೇಟಿ ನೀಡಿ‌ ಬಸವಣ್ಣನವರ ಜೀವನ ಚರಿತ್ರೆ ಹೊಂದಿದ ಅನುಭವ ಮಂಟಪ ವಿಕ್ಷಣೆ ಮಾಡಿದರು. ನಂತರ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಕೆಲ ನಿಮಿಷಗಳ ಕಾಲ ರಾಜಕೀಯ ಜೀವನದ ಕುರಿತು ಚರ್ಚೆ ನಡೆಸಿದರು. ಇದೇ ವೇಳೆ ಶ್ರೀಗಳು ಗಾಲಿ ಜನಾರ್ದನ ರೆಡ್ಡಿ ಅವರನ್ನು ಸನ್ಮಾನಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Janardhan Reddyಗದಗಗಾಲಿ ಜನಾರ್ದನ ರೆಡ್ಡಿತೋಂಟದಾರ್ಯ ಮಠ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Yellow Line Metro
Bengaluru City

ಇದೇ ಭಾನುವಾರ ಹಳದಿ ಮಾರ್ಗದ ಮೆಟ್ರೋ ಸೇವೆ ಒಂದು ಗಂಟೆ ಲೇಟ್‌

Public TV
By Public TV
5 hours ago
Tilak Varma Hardik Pandya
Cricket

ಪಾಂಡ್ಯ ಸ್ಫೋಟಕ ಫಿಫ್ಟಿ – ಭಾರತಕ್ಕೆ 30 ರನ್‌ಗಳ ಜಯ

Public TV
By Public TV
5 hours ago
Anegondi Bridge collapse
Court

ಆನೆಗೊಂದಿ ಸೇತುವೆ ಕುಸಿತ ಕೇಸ್ – ರಾಜ್ಯ ಸರ್ಕಾರ ಬಡ್ಡಿ ಸಹಿತ 5.63 ಕೋಟಿ ಪರಿಹಾರ ನೀಡಬೇಕಿದ್ದ ಆದೇಶ ರದ್ದು: ಹೈಕೋರ್ಟ್‌

Public TV
By Public TV
5 hours ago
CET Exam
Bengaluru City

ಸಿಸಿಟಿವಿ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ: ಕೆಇಎ

Public TV
By Public TV
6 hours ago
SUPREME COURT
Court

ಕೇಂದ್ರದ ಪೂರ್ವಾನುಮತಿ ಇಲ್ಲದೆ ಅರಣ್ಯಭೂಮಿ ಗುತ್ತಿಗೆ ನೀಡಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
6 hours ago
GBA
Bengaluru City

ಜಿಬಿಎ 5 ಪಾಲಿಕೆ ಚುನಾವಣೆ – ಸರ್ಕಾರದಿಂದ ಮೀಸಲಾತಿ ಮಾರ್ಗಸೂಚಿ ಪ್ರಕಟ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?