Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ರಾಜಕೀಯ, ಖಾಸಗಿ ಜೀವನದ ಭವಿಷ್ಯಕ್ಕಾಗಿ ಆಶಿರ್ವಾದ ಪಡೆಯಲು ಮಠಕ್ಕೆ ಬಂದಿದ್ದೇನೆ : ಜನಾರ್ದನ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ರಾಜಕೀಯ, ಖಾಸಗಿ ಜೀವನದ ಭವಿಷ್ಯಕ್ಕಾಗಿ ಆಶಿರ್ವಾದ ಪಡೆಯಲು ಮಠಕ್ಕೆ ಬಂದಿದ್ದೇನೆ : ಜನಾರ್ದನ ರೆಡ್ಡಿ

Districts

ನನ್ನ ರಾಜಕೀಯ, ಖಾಸಗಿ ಜೀವನದ ಭವಿಷ್ಯಕ್ಕಾಗಿ ಆಶಿರ್ವಾದ ಪಡೆಯಲು ಮಠಕ್ಕೆ ಬಂದಿದ್ದೇನೆ : ಜನಾರ್ದನ ರೆಡ್ಡಿ

Public TV
Last updated: December 20, 2022 1:56 pm
Public TV
Share
3 Min Read
janardhan reddy 2 1
SHARE

ಗದಗ: ನನ್ನ ಭವಿಷ್ಯದ ರಾಜಕೀಯ ಹಾಗೂ ಖಾಸಗಿ ಜೀವನ ರೂಪಿಸಲು ಆಶಿರ್ವಾದ ಪಡೆಯಲು ಬಂದಿದ್ದೇನೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhan Reddy) ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮ ಹಾಗೂ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಅವರು, ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜಕೀಯ ಜೀವನದಲ್ಲಿ, ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ನಾನು ತೊಡಗಡಿಸಿಕೊಳ್ಳಲು ನಿಶ್ಚಯ ಮಾಡಿಕೊಂಡು ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಳ್ಳುತ್ತಿದ್ದೇನೆ. ಬಳ್ಳಾರಿ (Ballari) ನಂತರ ಅತೀ ಹೆಚ್ಚು ಅನುಬಂಧವಿರುವುದು ಗದಗ (Gadag) ನಗರದಲ್ಲಿ. ಇಲ್ಲಿ ಬಂದಾಗ ಬಳ್ಳಾರಿಯಲ್ಲೇ ಇದ್ದೀನಿ ಎಂಬ ತೃಪ್ತಿ ಹಾಗೂ ಸಂತೋಷ ಸಿಗುತ್ತದೆ ಎಂದು ತಿಳಿಸಿದರು.

janardhan reddy 1 1

ನನ್ನದು ಬಳ್ಳಾರಿಯಿಂದ ಹೊರಗಡೆ ಒರುವ ಪರಿಸ್ಥಿತಿ ಇದೆ. ಪದೇ ಪದೇ ಬೆಂಗಳೂರಿನಲ್ಲಿ ಹೋಗಿ ಉಳಿದುಕೊಳ್ಳಲು ಆಗಲ್ಲ. ಇಲ್ಲಿನ ಬಿಸಿಲು, ಗಾಳಿ ನನ್ನ ಮೇಲೆ ಬೀಳಬೇಕು. ಈ ವಾತಾವರಣ ನನ್ನ ದೇಹಕ್ಕೆ, ಮನಸ್ಸಿಗೆ ತೃಪ್ತಿ ಕೊಡುತ್ತದೆ. ಉತ್ತರ ಕರ್ನಾಟಕದಲ್ಲಿ ಓಡಾಡಿದ್ರೆ ಸಿಗುವ ಖುಷಿಯೇ ಬೇರೆ. ಕಳೆದ 12 ವರ್ಷಗಳ ಕಾಲ ವನವಾಸದ ಜೀವನ ಅನುಭವಿಸಿದ್ದೇನೆ. ಸಾರ್ವಜನಿಕ ಜೀವನದಲ್ಲಿ ತೋಡಗಿಕೊಳ್ಳಲು ತೀರ್ಮಾನ ಮಾಡಿದ್ದು, ಜನರ ಪ್ರೀತಿ ಎಲ್ಲಿ ಸಿಗುತ್ತದೆ ಅಲ್ಲಿ ಹೆಚ್ಚು ಓಡಾಟ ಮಾಡುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ 2ನೇ ಬಾರಿ ಗದಗ ನಗರಕ್ಕೆ ಭೇಟಿ ನೀಡಿದ್ದೇನೆ. ಮುಂದಿನ ಒಂದು ವರ್ಷದಲ್ಲಿ 200 ಬಾರಿಯೂ ಭೇಡಿ ನೀಡುವುದನ್ನು ನೀವು ನೋಡಬಹುದು ಎಂದರು.

ಪಂಡಿತ ಪುಟ್ಟರಾಜ ಕವಿ ಗವಾಯಿಗಳು ಹಾಗೂ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ಅವರನ್ನು ಕಣ್ಣಾರೆ ಕಂಡಿದ್ದೇನೆ. ಅವರ ಪಾದಸ್ಪರ್ಶದೊಂದಿಗೆ ವೇದಿಕೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವುದು ನನ್ನ ಹಾಗೂ ಶ್ರೀರಾಮುಲು ಅವರ ಪೂರ್ವ ಜನ್ಮದ ಪುಣ್ಯ ಎಂದಿ ನೆನಪಿಸಿಕೊಂಡರು. ಇದನ್ನೂ ಓದಿ: ತೆರಿಗೆ, ನೀರಿನ ಬಿಲ್ ಪಾವತಿಸಿ – ತಾಜ್ ಮಹಲ್‍ಗೆ ನೋಟಿಸ್

janardhan reddy 3

ಶ್ರೀರಾಮುಲು ಗದಗ ಜಿಲ್ಲೆಯ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಮಹಾತ್ಮ ಗಾಂಧಿ, ಕಿತ್ತೂರು ಚೆನ್ನಮ್ಮ, ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಮೂರ್ತಿಗಳು ನಿರ್ಮಾಣ ಮಾಡಲಾಗಿತ್ತು. ಈ ಸಂದರ್ಭದಲ್ಲಿ ತೋಂಟದ ಶ್ರೀಗಳು ಭೀಷ್ಮ ಕೆರೆ ಆವರಣದಲ್ಲಿ ಬಸವೇಶ್ವರ ಪುತ್ಥಳಿ ನಿರ್ಮಿಸಲು ಸಲಹೆ ನೀಡಿದಾಗ ಅತ್ಯಂತ ಸಂತೋಷದಿಂದ ಬಸವೇಶ್ವರ ಪುತ್ಥಳಿ ನಿರ್ಮಿಸಲಾಯಿತು. ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ಗದಗ ನಗರದಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು ಎಂದರು.

ಮುಂಬರುವ ಚುನಾವಣೆಯಲ್ಲಿ ಗದಗದಿಂದ ಸ್ಪರ್ಧಿಸುವ ಯೋಜನೆ ಇದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಜನಾರ್ದನ ರೆಡ್ಡಿ ಅವರು, ಡಿ. 25ರಂದು ಬೆಂಗಳೂರಿನಲ್ಲಿ ಮಾಧ್ಯಮದವರ ಮೂಲಕ ಕರ್ನಾಕಟದ ಜನತೆಗೆ ನನ್ನ ಮನದಾಳದ ಮಾತುಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂಡಿತ ಪಂಚಾಕ್ಷರಿ ಹಾಗೂ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಹಾನಗಲ್‌ ಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದರು. ಮಂಗಳಾರತಿ, ವಿಶೇಷ ಪೂಜೆ ಸಲ್ಲಿಸಿ ಆಶಿರ್ವಾದ ಪಡೆದರು. ಇದನ್ನೂ ಓದಿ: ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

ನಂತರ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದರು. ನಂತರ ಅನುಭವ ಮಂಟಪಕ್ಕೆ ಭೇಟಿ ನೀಡಿ‌ ಬಸವಣ್ಣನವರ ಜೀವನ ಚರಿತ್ರೆ ಹೊಂದಿದ ಅನುಭವ ಮಂಟಪ ವಿಕ್ಷಣೆ ಮಾಡಿದರು. ನಂತರ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಕೆಲ ನಿಮಿಷಗಳ ಕಾಲ ರಾಜಕೀಯ ಜೀವನದ ಕುರಿತು ಚರ್ಚೆ ನಡೆಸಿದರು. ಇದೇ ವೇಳೆ ಶ್ರೀಗಳು ಗಾಲಿ ಜನಾರ್ದನ ರೆಡ್ಡಿ ಅವರನ್ನು ಸನ್ಮಾನಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Janardhan Reddyಗದಗಗಾಲಿ ಜನಾರ್ದನ ರೆಡ್ಡಿತೋಂಟದಾರ್ಯ ಮಠ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
1 hour ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
2 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
2 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
3 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?