ಡೆಲ್ಲಿ ಡ್ಯಾಶರ್ ಗೌತಮ್ ಗಂಭೀರ್ ಕಮ್ ಬ್ಯಾಕ್

Public TV
2 Min Read
gautam gambhir

ನವದೆಹಲಿ: ಟೀಂ ಇಂಡಿಯಾ ಹಿರಿಯ ಆಟಗಾರ ಗೌತಮ್ ಗಂಭೀರ್ ಡೆಲ್ಲಿ ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದು, ಸೆಪ್ಟೆಂಬರ್ 19 ರಿಂದ ಆರಂಭವಾಗುವ ವಿಜಯ್ ಹಜಾರೆ ಟೂರ್ನಿಯಲ್ಲಿ ದೆಹಲಿ ತಂಡದ ನಾಯಕತ್ವ ವಹಿಸಲಿದ್ದಾರೆ.

ದೆಹಲಿ ಕ್ರಿಕೆಟ್ ಸಂಸ್ಥೆ ಈ ಕುರಿತು ಖಚಿತ ಪಡಿಸಿದ್ದು, ಗಂಭೀರ್ ತಂಡ ನಾಯಕರಾಗಿ ಮುನ್ನಡೆಸಲಿದ್ದಾರೆ ಎಂದು ತಿಳಿಸಿದೆ. ದೆಹಲಿ ತಂಡದ ಇಶಾಂತ್ ಶರ್ಮಾ ಗಾಯಗೊಂಡಿದ್ದು, ರಿಷಭ್ ಪಂತ್ ಮತ್ತು ದ್ರುವ ಶೊರೆ ಸದ್ಯ ಟೀಂ ಇಂಡಿಯಾ ಹಾಗೂ ಇಂಡಿಯಾ ಎ ತಂಡದ ಪರ ಆಡುತ್ತಿದ್ದಾರೆ. ಅದ್ದರಿಂದ ಆಯ್ಕೆ ಸಮಿತಿ ಅನಿವಾರ್ಯವಾಗಿ ಗಂಭೀರ್ ಅವರಿಗೆ ಕರೆ ನೀಡಿದೆ. ಕಳೆದ ಟೂರ್ನಿಯ ವೇಳೆ ಗಂಭೀರ್ ನಾಯಕತ್ವದಿಂದ ಹಿಂದೆ ಸರಿದಿದ್ದರು. ಅಲ್ಲದೇ ಐಪಿಎಲ್ ನಲ್ಲೂ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದರು. ಸತತವಾಗಿ ಐಪಿಎಲ್ ಟೂರ್ನಿಯಲ್ಲಿ ನಾಯಕರಾಗಿ ವಿಫಲರಾಗಿದ್ದು ಅವರ ನಿರ್ಧಾರದ ಹಿಂದಿನ ಪ್ರಮುಖ ಕಾರಣ ಎನ್ನಲಾಗಿತ್ತು.

ಒಂದು ವರ್ಷದ ಬಳಿಕ ಗಂಭಿರ್ ಮತ್ತೆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ರಿಷಭ್ ಪಂತ್ ದ್ರುವ ಸೊರೆ ಆಡುವುದು ಖಚಿತವಾಗಿದೆ. ಇನ್ನು ತಂಡದಲ್ಲಿ ಎಲ್ಲಾ ಯುವ ಆಟಗಾರರಿಗೆ ಕೂಡಿದ್ದು, ಗಂಭೀರ್ ನಾಯಕತ್ವದಲ್ಲಿ ಮುನ್ನಡೆಯಲಿದ್ದಾರೆ ಎಂದು ಡೆಲ್ಲಿ ಕ್ರಿಕೆಟ್ ಸಂಸ್ಥೆ ತಿಳಿಸಿದೆ.

ಡೆಲ್ಲಿ ತಂಡದಲ್ಲಿರುವ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಗಮನಸೆಳೆದಿದ್ದರು. ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿ ಟೀಂ ಇಂಡಿಯಾ ಪರ 4ನೇ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಯನ್ನು ಪಡೆದರು. ಈ ಹಿಂದೆ ಎಂಎಸ್ ಧೋನಿ 2007 ರಲ್ಲಿ ಇಂಗ್ಲೆಂಡ್ ವಿರುದ್ಧ 76* ರನ್ ಸಿಡಿಸಿದ್ದರು. ಅಲ್ಲದೇ ಪಾರ್ಥಿವ್ ಪಾಟೇಲ್ 67* ರನ್ ನಂತರದ ಸ್ಥಾನದಲ್ಲಿದ್ದಾರೆ.

ಉತ್ತರ ಪ್ರದೇಶ ತಂಡದ ನಾಯಕತ್ವ ಪಟ್ಟ ಸುರೇಶ್ ರೈನಾಗೆ ಒಲಿದು ಬಂದಿದ್ದು, ತಂಡದಲ್ಲಿ ರಿಂಕೂ ಸಿಂಗ್, ಅಂಕಿತ್ ರಾಜಪುತ್ ಸ್ಥಾನ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ತ್ರಿಕೋನ ಸರಣಿಯಲ್ಲಿ ಸ್ಥಾನ ಪಡೆದಿದ್ದ ರೈನಾ ಬಳಿಕ ನಡೆದ ಇಂಗ್ಲೆಂಡ್ ವಿರುದ್ಧದ ಟೂರ್ನಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಅಲ್ಲದೇ ಏಷ್ಯಾಕಪ್ ಟೂರ್ನಿಗೂ ರೈನಾರನ್ನು ಆಯ್ಕೆ ಸಮಿತಿ ಕೈಬಿಟ್ಟಿತ್ತು. ಸದ್ಯ ಉತ್ತರ ಪ್ರದೇಶ ತಂಡದ ನಾಯಕತ್ವ ಪಡೆದಿರುವ ರೈನಾಗೆ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಲು ಅವಕಾಶ ಲಭಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Suresh Raina

Share This Article
Leave a Comment

Leave a Reply

Your email address will not be published. Required fields are marked *