ನಟ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯ ಚಿತ್ರ ತೆರೆಕಂಡಿದೆ. ಈ ಸಂಬಂಧ ನಟ ಶಿವರಾಜ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಗಂಧದ ಗುಡಿ ಅಪ್ಪು ಕೊನೆಯ ಚಿತ್ರವಲ್ಲ ಎಂದು ಹೇಳಿದ್ದಾರೆ.
- Advertisement 2
ಚಿತ್ರ ವೀಕ್ಷಣೆಗೂ ಮುನ್ನ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನು ಇಂದು ಸಂಜೆ ಸಿನಿಮಾ ವೀಕ್ಷಣೆ ಮಾಡುತ್ತೇನೆ. ಗಂಧದಗುಡಿ ಅಪ್ಪು ಅವರ ಕೊನೆಯ ಚಿತ್ರ ಅಲ್ಲ. ಇದು ಆರಂಭ, ಅಪ್ಪು ಯಾವಾಗಲೂ ನಮ್ಮ ಜೊತೆ ಇರುತ್ತಾರೆ ಎಂದು ಭಾವುಕರಾದರು.
- Advertisement 3
- Advertisement 4
ಪ್ರಕೃತಿಯ ಬಗ್ಗೆ ಗಂಧದಗುಡಿಯಲ್ಲಿ ಅಪ್ಪಾಜಿ ತಿಳಿಸಿದ್ರು. ಅದರಿಂದ ಅದೆಷ್ಟೋ ಜನ ಪ್ರೇರಣೆಯಾಗಿದ್ರು, ನನ್ನ ಅದೃಷ್ಟ ನಾನು ಗಂಧದಗುಡಿ ಪಾರ್ಟ್ 2 ಮಾಡಿದ್ದೆ. ಇಂದು ಅತಿವೃಷ್ಠಿ ಆಗ್ತಿದೆ. ಪ್ರಕೃತಿಯಲ್ಲಿ ಏರೇಪೇರು ಆಗುತ್ತಿದೆ ಎಂದರು. ಇದನ್ನೂ ಓದಿ: ಅಪ್ಪು ಕನಸಿನ ಗಂಧದಗುಡಿ ದರ್ಶನ- ಥಿಯೇಟರ್ ಅಂಗಳದಲ್ಲಿ ಅಭಿಮಾನಿಗಳ ಸಂಭ್ರಮ
ಕಾಡಿನ ಮಹತ್ವದ ಬಗ್ಗೆ ಅಪ್ಪು ತಿಳಿಸಿದ್ದಾರೆ. ಅಭಿಮಾನಿಗಳು ಅಪ್ಪುವನ್ನ ನೋಡಲು ಬರಬೇಕು. ಅವರಿಗೆ ಈ ಮೂಲಕ ಗೌರವ ಕೊಡಬೇಕು ಎಂದು ಶಿವಣ್ಣ ಮನವಿ ಮಾಡಿಕೊಂಡರು.