Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಮಂತ ಗಣಪನಿಗೆ ಈ ಬಾರಿ 400 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶ್ರೀಮಂತ ಗಣಪನಿಗೆ ಈ ಬಾರಿ 400 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

Latest

ಶ್ರೀಮಂತ ಗಣಪನಿಗೆ ಈ ಬಾರಿ 400 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

Public TV
Last updated: August 25, 2025 6:58 pm
Public TV
Share
3 Min Read
01
SHARE

ದೇಶಾದ್ಯಂತ ಗಣೇಶ ಹಬ್ಬದ (Ganesh Chaturthi 2024) ಸಂಭ್ರಮ ಮನೆ ಮಾಡಿದೆ. ವಿಘ್ನೇಶ್ವರನ ಭಕ್ತರು ಬಗೆಬಗೆಯ ಗಣೇಶ ಮೂರ್ತಿಗಳನ್ನ ಕೂರಿಸಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಕಲ ವಿಘ್ನಗಳು ನಿವಾರಣೆಯಾಗಲಿ ವಿನಾಯಕನು ನಂಬಿದ ಭಕ್ತರಿಗೆ ಬುದ್ಧಿ, ಆಯುಷ್ಯ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದಯಪಾಲಿಸುತ್ತಾನೆ ಎಂಬ ನಂಬಿಕೆಯೊಂದಿಗೆ ಗಣೇಶೋತ್ಸವ ಆಚರಣೆ ಮಾಡುತ್ತಿದ್ದಾರೆ.

Mumbai Ganesha 2

ಗಣೇಶ ಚತುರ್ಥಿ ಹಬ್ಬ ಆಚರಣೆಗೆಂದೇ ದೇಶಾದ್ಯಂತ ನಾನಾ ಕಡೆ ಗಣೇಶ ಮೂರ್ತಿಗಳ (Ganesha Idol) ಮಾರಾಟ ನಡೆಯುತ್ತಿದೆ. ಗಲ್ಲಿ-ಗಲ್ಲಿಯಲ್ಲಿ ಗಣೇಶನ ಮೂರ್ತಿ ಕೂರಿಸಿ ಪೂಜೆ ನಡೆಯುತ್ತದೆ. ಬಳಿಕ ವಿಸರ್ಜನೆಯೂ ಅಷ್ಟೇ ವಿಜ್ರಂಭಣೆಯಿಂದ ಆಗುತ್ತದೆ. ಗಣೇಶ ಚತುರ್ಥಿ ಆಚರಣೆ ಮುಂಬೈನಲ್ಲಿ ಭಾರೀ ವಿಶೇಷ. ಮುಂಬೈನಲ್ಲಿ ಹಲವು ದಶಕಗಳಿಂದ ಕೆಲ ಸಂಘಟನೆಗಳು ಗಣೇಶ ಹಬ್ಬ ಆಚರಿಸುತ್ತಾ ಬರುತ್ತಿದೆ. ಈ ಪೈಕಿ ಜಿಎಸ್‌ಬಿ ಸೇವಾ ಮಂಡಲ್ (GSB Seva Mandal) ಕೂಡ ಒಂದು. ಪ್ರತಿ ಬಾರಿಯೂ ಗಣೇಶ್‌ ಮೂರ್ತಿ, ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸುತ್ತಲೇ ಗಮನ ಸೆಳೆಯುವ ಮಂಡಲ್‌ ಈ ಬಾರಿಯೂ ವಿಶ್ವದ ಶ್ರೀಮಂತ ಗಣಪನನ್ನು ಕೂರಿಸುವ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಿಎಸ್‌ಬಿ ಗಣಪನಿಗೆ ಈ ಬಾರಿ ದಾಖಲೆಯ 400.58 ಕೋಟಿ ರೂ. ವಿಮೆ ಮಾಡಲಾಗಿದೆ. ಆದ್ರೆ ಈ ಗಣೇಶ ಮೂರ್ತಿಯ ಅಧಿಕೃತ ಬೆಲೆ ಎಷ್ಟು ಎಂದು ಮಂಡಲ್‌ ಸುಳಿವು ಬಿಟ್ಟುಕೊಟ್ಟಿಲ್ಲ.

ಮುಂಬೈನ ಜಿಎಸ್‌ಬಿ ಸೇವಾ ಮಂಡಲ ಈ ಬಾರಿ 5 ದಿನಗಳ ಗಣೇಶೋತ್ಸವ ಆಚರಿಸಲಿದೆ. ಸೆಪ್ಟೆಂಬರ್ 7 ರಿಂದ 11ರ ವರೆಗೆ ಅದ್ಧೂರಿಯಾಗಿ ಗಣೇಶೋತ್ಸವ ನಡೆಯಲಿದೆ. ಜಿಎಸ್‌ಬಿ ಗಣೇಶನ ದರ್ಶನ ಪಡೆಯಲು ಈಗಾಗಲೇ ಭಕ್ತರು ಸಜ್ಜಾಗಿದ್ದಾರೆ. ಆದರೆ ಗಣೇಶನ ಅನಾವರಣ ಸೆಪ್ಟೆಂಬರ್ 5 ರಂದು ಜಿಎಸ್‌ಬಿ ಸೇವಾ ಮಂಡಲ ಮಾಡಲಿದೆ. ಜಿಎಸ್‌ಬಿ ಸೇವಾ ಮಂಡಲ್‌ ಪ್ರತಿ ವರ್ಷ ಗಣೇಶೋತ್ಸವಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು ಮಾಡುತ್ತದೆ. ಈ ಬಾರಿ 70ನೇ ವರ್ಷದ ಗಣೇಶೋತ್ಸವದ ಕಾರಣ ವಿಮೆ ಮೊತ್ತವನ್ನು ಏರಿಸಲಾಗಿದೆ.

Mumbai Ganesha 4

ಜಿಎಸ್‌ಬಿ ಮಂಡಲ್‌ ಈ ಬಾರಿ ಗಣೇಶಮೂರ್ತಿಗೆ ಬರೋಬ್ಬರಿ 66 ಕೆಜಿ ಚಿನ್ನ, 325 ಕೆಜಿ ಬೆಳ್ಳಿ ಹಾಗೂ ಇತರ ಅತ್ಯಮೂಲ್ಯ ಚಿನ್ನಾಭರಣಗಳನ್ನು ತೊಡಿಸಲಾಗುತ್ತದೆ. ಹೀಗಾಗಿ ಇದಕ್ಕೆ ಅಷ್ಟೇ ದುಬಾರಿ ಮೊತ್ತದ ವಿಮೆ ಮಾಡಿಸಲಾಗಿದೆ. 400.58 ಕೋಟಿ ರೂ. ವಿಮೆ ಮೊತ್ತಕ್ಕೆ ಪ್ರಿಮಿಯಂ ಎಷ್ಟು ಪಾವತಿ ಮಾಡಲಾಗಿದೆ ಅನ್ನೋ ಕುರಿತು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇದನ್ನೂ ಓದಿ: ವಿಘ್ನೇಶ್ವರನ ಪೂಜೆಗೆ ಗರಿಕೆ ಯಾಕೆ ಬೇಕು? – ಇದರ ಹಿಂದಿದೆ ಐತಿಹಾಸಿಕ ಕಥೆ!

ಪ್ರತೀ ವರ್ಷದಂತೆ ಈ ವರ್ಷವೂ 5 ದಿನಗಳ ಗಣೇಶೋತ್ಸವ ಆಚರಿಸಲಾಗುತ್ತಿದೆ. ಎಂದಿನಂತೆ ಪರಿಸರಕ್ಕೆ ಪೂರಕವಾದ ಗಣೇಶ ಮೂರ್ತಿಯನ್ನು ತಯಾರಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಸೇರಿದಂತೆ ಯಾವುದೇ ಹಾನಿಕಾರ ವಸ್ತುಗಳ ಬಳಕೆ ಮಾಡಿಲ್ಲ. ಪೂರ್ತಿಯಾಗಿ ಮಣ್ಣಿನ ಗಣಪನನ್ನ ಕೂರಿಸಿ ಪೂಜೆ ಮಾಡಲಾಗುತ್ತದೆ ಎಂದು ಜಿಎಸ್‌ಬಿ ಸೇವಾ ಮಂಡಲ್ ಮುಖ್ಯಸ್ಥ ಅಮಿತ್ ದಿನೇಶ್ ಪೈ ಹೇಳಿದ್ದಾರೆ. ಇದನ್ನೂ ಓದಿ: ಗಣಪನಿಗಾಗಿ ವಿಭಿನ್ನ ಬಗೆಯ ಮೋದಕ ಹೀಗೆ ಮಾಡಿ!

Mumbai Ganesha 3

ಕಳೆದ ವರ್ಷ ಇದೇ ರೀ ವೈಭವೋಪೇತ ಗಣೇಶಮೂರ್ತಿಯೊಂದನ್ನ ಸೇವಾ ಮಂಡಲ ಪ್ರತಿಷ್ಠಾಪಿಸಿತ್ತು. ಈ ಗಣೇಶನ ಮೂರ್ತಿಯ ಅಲಂಕಾರಕ್ಕೆ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿ ಬಳಕೆ ಮಾಡಲಾಗಿತ್ತು. ಕಳೆದ ವರ್ಷ 360.40 ಕೋಟಿ ರೂ. ವಿಮೆ ಮಾಡಲಾಗಿತ್ತು. ಈ ಬಾರಿ ಈ ಮೊತ್ತವನ್ನು ಏರಿಕೆ ಮಾಡಲಾಗಿದೆ. ಇದಕ್ಕಾಗಿ ಎಲ್ಲಾ ತಯಾರಿ ಮಾಡಲಾಗಿದೆ. ಸ್ವಯಂ ಸೇವಕರು, ಕಾರ್ಯಕರ್ತರು ಎಲ್ಲರು ಸಜ್ಜಾಗಿದ್ದಾರೆ. ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಭಕ್ತರು ತಾಳ್ಮೆಯಿಂದ ದರ್ಶನ ಮಾಡಬೇಕು. ಯಾವುದೇ ನೂಕು ನುಗ್ಗಲಿಗೆ ಅವಕಾಶವಿಲ್ಲ . ಇದನ್ನೂ ಓದಿ: ಗುಡಿ ಗೋಪುರವಿಲ್ಲದ ʼಸೌತಡ್ಕ ಮಹಾಗಣಪತಿʼಗೆ ಬಯಲೇ ಆಲಯ!

Mumbai Ganesha

5 ದಿನ, 24 ಗಂಟೆಯೂ ಪೂಜೆ:
ದಕ್ಷಿಣ ಭಾರತೀಯ ಶೈಲಿಯ ಈ ವಿಗ್ರಹವನ್ನು ಜೇಡಿಮಣ್ಣು ಮತ್ತು ಹುಲ್ಲಿನಿಂದ ತಯಾರಿಸಲಾಗಿದೆ. ವಿಘ್ನೇಶ್ವರನನ್ನು ಕೂರಿಸಿದ ದಿನದಿಂದ ದಿನದ 5 ದಿನಗಳ ವರೆಗೆ ದಿನದ 24 ಗಂಟೆಯೂ ಪೂಜಾ ಕೈಂಕರ್ಯಗಳು ನೆರವೇರಲಿದೆ. ಪ್ರತಿದಿನ ದಿನಕ್ಕೆ 20 ಸಾವಿರದಂತೆ 5 ದಿನಗಳಲ್ಲಿ 1 ಲಕ್ಷ ಭಕ್ತರಿಗೆ ಅನ್ನದಾನ ಮತ್ತು ದೇವರ ಸೇವೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಪ್ರದರ್ಶನಗಳು ಇರಲಿವೆ. 5 ದಿನಗಳಲ್ಲಿ ಒಟ್ಟು 60,000 ಪೂಜೆಗಳನ್ನು ನೆರವೇರಿಸಲಾಗುತ್ತದೆ. ಈ ಬಾರಿ ಸುಮಾರು 5 ಲಕ್ಷ ಸಂಖ್ಯೆಯ ಭಕ್ತರು ಪಾಲ್ಗೊಳ್ಳುವ ಸಾಧ್ಯೆಯಿದೆ ಎಂದು ಮಂಡಲದ ಭಕ್ತರು ತಿಳಿಸಿದ್ದಾರೆ.

TAGGED:Ganesh Chaturthi 2024ganesha festivalGSB Seva Mandalinsurancemumbaiಗಣೇಶ ಚತುರ್ಥಿ ಹಬ್ಬಜೆಎಸ್‌ಬಿ ಸೇವಾ ಮಂಡಲ್‌ಮುಂಬೈಶ್ರೀಮಂತ ಗಣೇಶ ಮೂರ್ತಿ
Share This Article
Facebook Whatsapp Whatsapp Telegram

Cinema news

Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories
Rishab Shetty
ಕಾಗದದ ಮೇಲೆ ಹುಟ್ಟಿದ ಪಾತ್ರ ಜೀವ ಪಡೆದಾಗ… `ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್
Cinema Latest Sandalwood Top Stories

You Might Also Like

Mysuru Palace 2
Districts

ಮೈಸೂರು | ಅರಮನೆಯ ಜಯರಾಮ-ಬಲರಾಮ ದ್ವಾರದ ಗೋಡೆಯಲ್ಲಿ ಭಾರೀ ಬಿರುಕು

Public TV
By Public TV
2 hours ago
Shehbaz Sharif
Latest

ಪಾಕ್‌ ಪ್ರಧಾನಿಗೆ ವಿಶ್ವವೇದಿಕೆಯಲ್ಲಿ ಅವಮಾನ – ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ಕುಳಿತ ಶೆಹಬಾಜ್ ಷರೀಫ್

Public TV
By Public TV
2 hours ago
03 5
Latest

MGNREGA | ನರೇಗಾ ಹೆಸರು ಬದಲು – ಪ್ರಮುಖ ನಿರ್ಧಾರಗಳೊಂದಿಗೆ ದೇಶದ ಗಮನ ಸೆಳೆದ ಸಂಸತ್ತು

Public TV
By Public TV
2 hours ago
MB Patil 1 1
Districts

ಶ್ರೀಗಳು ಹಾಕಿಕೊಟ್ಟ ಮಾರ್ಗ ಸೂರ್ಯ, ಚಂದ್ರ ಇರೋವರೆಗೂ ಚಿರಸ್ಥಾಯಿ – ಲಿಂ.ಚನ್ನಬಸವ ಸ್ವಾಮೀಜಿ ಅಂತಿಮ ದರ್ಶನ ಪಡೆದ ಎಂ.ಬಿ.ಪಾಟೀಲ್

Public TV
By Public TV
2 hours ago
Kalaburagi Chariot
Districts

ಕಲಬುರಗಿ | ಕಡಕೋಳ ಜಾತ್ರೆಯಲ್ಲಿ ರಥದ ಚಕ್ರ ಕಟ್ಟಾಗಿ ಅವಘಡ

Public TV
By Public TV
2 hours ago
Madikeri Elephant
Districts

ಕೊಡಗು | ಹೆದ್ದಾರಿಯಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ – ಬೆಚ್ಚಿಬಿದ್ದ ವಾಹನ ಸವಾರರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?