ಗಣೇಶ ಮೆರವಣಿಗೆ ವೇಳೆ ಅಂಬುಲೆನ್ಸ್‌ಗೆ ದಾರಿ – ಒಂದೇ ಕ್ಷಣದಲ್ಲಿ ಚದುರಿದ ಸಾವಿರಾರು ಜನ

Public TV
1 Min Read
ganesh ambulence

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ ಗಣೇಶ ವಿಸರ್ಜನೆಯ ಬೃಹತ್ ಮೆರವಣಿಗೆ ಸಂದರ್ಭದಲ್ಲಿ ಅಂಬುಲೆನ್ಸ್ ಗೆ ದಾರಿ ಮಾಡಿಕೊಡುವ ಮೂಲಕ ಭಕ್ತಾದಿಗಳು ಮಾದರಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಟ್ವಿಟ್ಟರ್ ನಲ್ಲಿಯೂ ಸಹ ಹಲವು ಗಣ್ಯರು ಈ ವಿಡಿಯೋ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಪುಣೆಯ ಲಕ್ಷ್ಮಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಿಲೋಮೀಟರ್ ಗಟ್ಟಲೇ ಜನಸಾಗರ ತುಂಬಿದ್ದ ಮೆರವಣಿಗೆ ಮಧ್ಯೆ ಅಂಬುಲೆನ್ಸ್ ಗೆ ದಾರಿ ಮಾಡಿ ಕೊಡುವ ಮೂಲಕ ಭಕ್ತರು ಸಾಮಾಜಿಕ ಕಾಳಜಿ ಮೆರೆದಿದ್ದಾರೆ.

ಕಿಲೋಮೀಟರ್ ಗಟ್ಟಲೇ ಸೇರಿದ್ದ ಜನಸಾಗರವನ್ನು ಕೆಲ ಭಕ್ತರು ಚದುರಿಸುವ ಮೂಲಕ ಅಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟಿದ್ದಾರೆ. ಇದರಿಂದ ಅಂಬುಲೆನ್ಸ್ ಸರಾಗವಾಗಿ ಸಂಚರಿಸಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಾಹಾಷ್ಟ್ರದಲ್ಲಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಮೆರವಣಿಗೆ ಮೂಲಕ ಸಾಗಿ ಸಾವಿರಾರು ಗಣೇಶ ಮೂರ್ತಿಗಳನ್ನು ನದಿ, ಕೆರೆ, ಸಮುದ್ರದಲ್ಲಿ ವಿಸರ್ಜಿಸಲಾಗುತ್ತದೆ.

ganesh ambulence 2

ಮಹಾರಾಷ್ಟ್ರದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ 18 ಜನ ಜನ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಪೊಲೀಸ್ ಸರ್ಪಗಾವಲಿನ ಮಧ್ಯೆಯೇ ಮಹಾರಾಷ್ಟ್ರದಲ್ಲಿ ಸಾವಿರಾರು ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *