ಬೆಳಗಾವಿ: ದೇಶದಲ್ಲಿ ಮುಂಬೈ (Mumbai) ಹೊರತುಪಡಿಸಿದರೆ ಬೆಳಗಾವಿಯಲ್ಲಿ ಆಚರಿಸುವ ಅದ್ಧೂರಿ ಗಣೇಶೋತ್ಸವ (Ganeshothsav) ವಿಸರ್ಜನಾ ಮೆರವಣಿಗೆ ಕಾರ್ಯ ಸತತವಾಗಿ 24 ಗಂಟೆಗಳ ಕಾಲ ನಡೆಯಿತು.
ಎರಡು ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅದ್ಧೂರಿ ಗಣೇಶೋತ್ಸವಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ಸಂಜೆಯಿಂದಲೂ ಮಳೆ, ಬಿಸಿಲೆನ್ನದೇ ಲಕ್ಷಾಂತರ ಭಕ್ತರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯೆ ಕೇಸ್ – ಮೂವರು ಅರೆಸ್ಟ್
ಇದೇ ವೇಳೆಯಲ್ಲಿ ಕೆಲವು ನಗರಸೇವಕರು ಹಾಗೂ ಎಸಿಪಿ (ACP) ನಾರಾಯಣ ಭರಮನಿ, ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಪಾಲಿಕೆ ಅಧಿಕಾರಿಗಳಾದ ಸಂಜಯ ಡುಮ್ಮಗೋಳ, ಲಕ್ಷ್ಮೀ ನಿಪ್ಪಾಣಿಕರ್ ಡಿಜೆ ಹಾಡಿಗೆ ಸಕ್ಕತ್ ಸ್ಟೆಪ್ ಹಾಕಿ ಸಂಭ್ರಮಿಸಿದರು. ಇದನ್ನೂ ಓದಿ: ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ – ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು
ಬೆಳಗಾವಿ ನಗರದಲ್ಲಿ 382 ಹಾಗೂ ಜಿಲ್ಲೆ ಸೇರಿದ್ರೆ 450ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಮಂಡಳಿಗಳಿದ್ದು (Ganesha Festival Board), ಕಳೆದ ಹನ್ನೂಂದು ದಿನಗಳಿಂದ ವಿವಿಧ ಕಾರ್ಯಕ್ರಮಗಳ ಆಯೋಜಿಸಿ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗಿದೆ. ನಿನ್ನೆ ಚತುರ್ದಶಿ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ಪ್ರಾರಂಭವಾಗಿದ್ದ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ಸತತ 24 ಗಂಟೆಗಳ ಬಳಿಕ ಗಣೇಶ ಮೂರ್ತಿಯನ್ನು ಕಪೀಲೇಶ್ವರ ಹೊಂಡದಲ್ಲಿ ವಿಸರ್ಜನೆ ಮಾಡಲಾಯಿತು.