Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ?

Karnataka

ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ?

Public TV
Last updated: August 27, 2025 11:06 am
Public TV
Share
3 Min Read
moon ganesha 1
SHARE

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿದ್ದು ಗಣೇಶ ಹಬ್ಬಕ್ಕೂ (Ganesh Chaturthi) ಕಥೆಯಿದೆ. ಈ ದಿನದಂದು ಚಂದ್ರನನ್ನು (Moon) ನೋಡಬಾರದೆಂಬ ನಂಬಿಕೆ ಇದೆ.

ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.

ಚಂದ್ರನನ್ನು ಯಾಕೆ ನೋಡಬಾರದು?
ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂದಿರುಗುತ್ತಿರುತ್ತಾನೆ. ಗಣಪತಿ ತನ್ನ ವಾಹನವಾದ ಇಲಿಯ ಮೇಲೆ ಕುಳಿತುಕೊಂಡು ಚಂದ್ರಲೋಕಕ್ಕೆ ಬರುತ್ತಾನೆ. ಇದನ್ನೂ ಓದಿ: ಗಣೇಶನಿಗೆ ಮೊದಲ ಪೂಜೆ ಯಾಕೆ?

moon ganesha

ಈ ವೇಳೆ ಚಂದ್ರನು ಗಣೇಶನನ್ನು ನೋಡುತ್ತಾನೆ. ಸರ್ವಾಂಗ ಸುಂದರನಾಗಿರುವ ಚಂದ್ರ, ಗಣಪತಿಯ ಆನೆ ಮುಖ, ಡೊಳ್ಳುಹೊಟ್ಟೆ ಮತ್ತು ವಾಹನ ಇಲಿಯನ್ನು ನೋಡಿ ಹಾಸ್ಯ ಮಾಡಿ ನಕ್ಕು ಬಿಡುತ್ತಾನೆ. ಇದನ್ನು ಕಂಡ ಗಣಪತಿಗೆ ಸಿಟ್ಟು ಬರುತ್ತದೆ.

ಸಿಟ್ಟಾದ ಗಣಪತಿ `ಎಲೈ ಚಂದ್ರನೇ ನಿನಗೆ ನಿನ್ನ ಸೌಂದರ್ಯದ ಮದ ಹೆಚ್ಚಾಗಿದೆ. ಎಲ್ಲ ಲೋಕಗಳಲ್ಲೂ ಪೂಜಿಸುತ್ತಿರುವ ನನ್ನನ್ನು ನೀನು ಮಾತ್ರ ಹಾಸ್ಯ ಮಾಡಿ ನಗುತ್ತಿರುವೆಯಾ? ಮೂರ್ಖ. ಇದೋ.. ನಿನ್ನ ಅಹಂಕಾರಕ್ಕೆ ತಕ್ಕ ಪ್ರತಿಫಲ ಅನುಭವಿಸು. ನಿನ್ನ ಅಹಂಕಾರಕ್ಕೂ ಅಜ್ಞಾನಕ್ಕೂ ಕಾರಣವಾಗಿರುವ ನಿನ್ನ ಸೌಂದರ್ಯ ಕುಗ್ಗಿ ಹೋಗಲಿ. ಇನ್ನು ಮುಂದೆ ನನ್ನ ಹುಟ್ಟಿದ ದಿನವಾದ ಭಾದ್ರಪದ ಚೌತಿಯಂದು ನಿನ್ನನ್ನು ನೋಡುವವರು ಸುಳ್ಳು ಅಪವಾದಾಕ್ಕೆ ಗುರಿಯಾಗಲಿ’ ಎಂದು ಚಂದ್ರನಿಗೆ ಶಾಪ ಹಾಕುತ್ತಾನೆ. ಇದನ್ನೂ ಓದಿ: ಗಣೇಶ ಮೋದಕ ಪ್ರಿಯ ಯಾಕೆ?

ಗಣಪತಿಯ ಶಾಪದಿಂದ ಚಂದ್ರನ ಅಹಂಕಾರವೆಲ್ಲ ಕೆಲವೇ ಕ್ಷಣಗಳಲ್ಲಿ ಇಳಿದು ಹೋಯಿತು. ತನ್ನ ತಪ್ಪಿನ ಅರಿವಾಗಿ ಪಶ್ಚತ್ತಾಪ ಪಡುತ್ತಾ ಗಣಪತಿ ಮುಂದೆ ಕೈ ಮುಗಿದು ಕ್ಷಮೆ ಕೇಳುತ್ತಾನೆ. `ಸ್ವಾಮಿ ನನ್ನ ಅಜ್ಞಾನವನ್ನು ಮನ್ನಿಸು. ನನಗೆ ಕೊಟ್ಟ ಶಾಪವನನ್ನು ವಾಪಸ್ ತೆಗೆದುಕೊ’ ಅಂತ ಗಣಪತಿ ಮುಂದೆ ಚಂದ್ರ ಅಂಗಲಾಚಿಕೊಳ್ಳುತ್ತಾನೆ.

 

ಚಂದ್ರನ ಮೊರೆಗೆ ಗಣಪತಿ ಮನಸ್ಸು ಕರಗಿ ಶಾಂತನಾಗುತ್ತಾನೆ. ಹೀಗಾಗಿ ಚಂದ್ರನನ್ನು ಸಂತೈಸಿ `ನಿನಗೆ ನಿನ್ನ ತಪ್ಪಿನ ಅರಿವಾಗಿದೆ. ನಿನ್ನ ಅಹಂಕಾರ ಇಳಿಸುವುದೇ ನನಗೆ ಮುಖ್ಯವಾಗಿತ್ತು. ಆದ್ರೆ ಈವಾಗ ಏನ್ ಮಾಡಿದರೂ ನನ್ನ ಶಾಪ ಯಾವತ್ತಿಗೂ ಸುಳ್ಳಾಗದು. ಆದ್ರೆ ಚೌತಿಯಂದು ನಿನ್ನನ್ನು ನೋಡಿ ಅಪವಾದಕ್ಕೆ ಗುರಿಯಾದವರು ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ. ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ’ ಅಂತ ಗಣಪತಿ ಹೇಳುತ್ತಾನೆ. ಗಣಪತಿಯ ಮಾತು ಕೇಳಿ ಚಂದ್ರ ಸಂತಸ ವ್ಯಕ್ತಪಡುತ್ತಾನೆ.

ಈ ಕಾರಣದಿಂದ ಚೌತಿಯಂದು ಚಂದ್ರನನ್ನು ನೋಡಬಾರದು ಅಂತ ಹಿರಿಯರು ಹೇಳುತ್ತಾರೆ. ಈ ನಂಬಿಕೆ ಇಂದಿಗೂ ಕೆಲವು ಕಡೆಗಳಲ್ಲಿ ಇದ್ದು, ರಾತ್ರಿಯಾಗುತ್ತಿದ್ದಂತೆಯೇ ಹೊರಗಡೆ ತೆರಳುವ ತಮ್ಮ ಮಕ್ಕಳಿಗೆ ಹಿರಿಯರು ತಪ್ಪಿಯೂ ಇಂದು ಆಕಾಶ ನೋಡಬೇಡ ಅಂತ ಹೇಳುತ್ತಾರೆ. ಒಟ್ಟಿನಲ್ಲಿ ದೇಶದಾದ್ಯಂತ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಬೆಳ್ಳಿ ಅಥವಾ ಮ‌ಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವೃತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಮೊದಲಾದ ಸಿಹಿತಿಂಡಿ ಮಾಡಿ ಗಣಪತಿಗೆ ನೈವೇದ್ಯ ಮಾಡಲಾಗುತ್ತದೆ. ಅಲ್ಲದೇ ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

TAGGED:ganapathiganesh chaturthimoonಗಣಪತಿಗಣೇಶ ಚತುರ್ಥಿಚಂದ್ರ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Leopard Shivamogga Tiger and Lion Safari Tyavarekoppa
Districts

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ ಸ್ಕ್ಯಾನಿಂಗ್!

Public TV
By Public TV
44 minutes ago
West Indies vs Scotland
Latest

ಹೆಟ್ಮೈಯರ್‌ ಫಿಫ್ಟಿ, ಶೆಫರ್ಡ್‌ ಹ್ಯಾಟ್ರಿಕ್‌ ವಿಕೆಟ್‌ ದಾಳಿಗೆ ಸ್ಕಾಟ್ಲೆಂಡ್‌ ತತ್ತರ; ಇಂಡೀಸ್‌ಗೆ 35 ರನ್‌ಗಳ ಜಯ

Public TV
By Public TV
1 hour ago
team india blind twenty cricket world cup
Cricket

ಉಡುಪಿ ಕೃಷ್ಣ ಮಠಕ್ಕೆ ಭೇಟಿ ಕೊಟ್ಟ ವಿಶ್ವಕಪ್ ಗೆದ್ದ ಅಂಧ ಮಹಿಳೆಯರ ಕ್ರಿಕೆಟ್ ತಂಡದ ಆಟಗಾರ್ತಿಯರು

Public TV
By Public TV
2 hours ago
SG 50 Ball
Cricket

PublicTV Explainer: ಕ್ರಿಕೆಟ್ ಅಕಾಡೆಮಿಗಳ ಗೇಮ್‌ ಚೇಂಜರ್‌ ಲೆದರೆಟ್ ಬಾಲ್! 

Public TV
By Public TV
2 hours ago
delhi metro engagement
Latest

ಲವ್ವರ್‌ ಜೊತೆ ಸಿಕ್ಕಿಬಿದ್ದ ಮಗ; ಸ್ಥಳದಲ್ಲೇ ಇಬ್ಬರಿಗೂ ಎಂಗೇಜ್‌ಮೆಂಟ್‌ ಮಾಡಿಸಿದ ತಾಯಿ

Public TV
By Public TV
3 hours ago
Tejasvi Surya
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರೋದು ರಾಜ್ಯ ಸರ್ಕಾರ: ತೇಜಸ್ವಿ ‌ಸೂರ್ಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?