Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೂಜೆಗೂ ಮುನ್ನ ವಿಸರ್ಜನೆಗೊಂಡ ಗಣಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪೂಜೆಗೂ ಮುನ್ನ ವಿಸರ್ಜನೆಗೊಂಡ ಗಣಪ

Belgaum

ಪೂಜೆಗೂ ಮುನ್ನ ವಿಸರ್ಜನೆಗೊಂಡ ಗಣಪ

Public TV
Last updated: September 2, 2019 8:35 am
Public TV
Share
2 Min Read
blg ganesha f copy
SHARE

ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಪೂಜೆಗೂ ಮುನ್ನ ಗಣಪತಿ ವಿಸರ್ಜನೆಗೊಂಡಿದ್ದು, ನೂರಾರು ಜನರ ಬದುಕು ಬೀದಿಗೆ ಬಿದ್ದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಗಣಪತಿ ಹಬ್ಬ ಬಂದರೆ ರಾಜ್ಯ ಹೊರ ರಾಜ್ಯದ ಜನರು ಇಲ್ಲಿಗೆ ಬಂದು ಗಣಪತಿ ಮೂರ್ತಿಗಳನ್ನು ಖರೀದಿ ಮಾಡಿಕೊಂಡು ಹೋಗುತ್ತಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಉಲ್ಟಾ ಆಗಿದೆ. ತಯಾರಾಗಿ ಮನೆ ಮನೆಗೆ ಹೋಗಿ ಪೂಜೆ ಸಲ್ಲಿಸಿಕೊಂಡು ವಿಸರ್ಜನೆಯಾಗುತ್ತಿದ್ದ ಗಣಪತಿ ಇದೆಲ್ಲದಕ್ಕೂ ಮುನ್ನವೇ ವಿಸರ್ಜನೆಯಾಗಿದ್ದಾನೆ.

blg ganesha 4

ಕಳೆದ 25 ದಿನಗಳ ಹಿಂದಷ್ಟೇ ಘಟಪ್ರಭಾ ನದಿಯಿಂದ ಒಂದೂವರೆ ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಕ್ಕೆ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಕೂಡ ನೀರು ನುಗ್ಗಿ 30ಕ್ಕೂ ಅಧಿಕ ಮನೆಗಳು ಧರೆಗುರುಳಿದರೆ, ಇದೆಲ್ಲದಕ್ಕಿಂತ ಹೆಚ್ಚಾಗಿ ಈ ಗ್ರಾಮದಲ್ಲಿ ಗಣಪತಿ ತಯಾರಿಸುತ್ತಿದ್ದ ಘಟಕಗಳು ಮುಳುಗಿ ದೇವರೇ ಕರಗಿದ ಸ್ಥಿತಿ ನಿರ್ಮಾಣವಾಗಿದೆ. ಕೊಣ್ಣೂರು ಗ್ರಾಮದಲ್ಲಿ ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ ಗಣಪತಿಗಳನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ತಲೆತಲಾಂತರದಿಂದ ಅನೇಕ ಕುಟುಂಬಗಳು ಇದನ್ನೇ ವೃತ್ತಿ ಮಾಡಿಕೊಂಡಿದ್ದು ಗಣಪತಿ ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. 1962ರಲ್ಲಿ ಎಲ್ಲ ಕುಂಬಾರರು ಸೇರಿಕೊಂಡು ಕಾಡಸಿದ್ದೇಶ್ವರ ಇಟ್ಟಂಗಿ ಮತ್ತು ಕುಂಬಾರಿಕೆ ಸಾಮಾನುಗಳು ಉತ್ಪಾದಕ ಸಹಕಾರಿ ಸಂಘ ಮಾಡಿಕೊಂಡು ಈ ಸಂಘದ ಮೂಲಕ ಗಣಪತಿಗಳನ್ನು ತಯಾರಿಸಿಕೊಂಡು ಬರುತ್ತಿದ್ದು ಜಲಪ್ರವಾಹಕ್ಕೆ ಈಗ ಎಲ್ಲವೂ ಹಾನಿಯಾಗಿ ಕಂಗಾಲಾಗಿದ್ದಾರೆ.

blg ganesha 3

ಪ್ರತಿ ವರ್ಷ ಇಲ್ಲಿ 6 ಲಕ್ಷ ಗಣಪತಿಗಳನ್ನು ತಯಾರು ಮಾಡುತ್ತಾರೆ. ಈ ವರ್ಷ ಜಲಪ್ರವಾಹಕ್ಕೆ ಸಿಲುಕಿ ಸುಮಾರು 5 ಲಕ್ಷ ಗಣಪತಿಗಳು ನೀರಿನಲ್ಲಿ ಕರಗಿ ಮಣ್ಣಾಗಿವೆ. ಉಳಿದ ಒಂದು ಲಕ್ಷ ಗಣಪತಿಗೆ ಕಲರಿಂಗ್ ಮಾಡಿಕೊಂಡು ಗ್ರಾಮದವರಿಗೆ ಹಾಗೂ ಅಕ್ಕಪಕ್ಕದವರಿಗೆ ಮಾರಾಟ ಮಾಡುತ್ತಿದ್ದಾರೆ. ಆದರೆ 5 ಲಕ್ಷ ಗಣಪತಿಗಳು ಹಾಳಾಗಿದ್ದಕ್ಕೆ ಸುಮಾರು 3 ಕೋಟಿಗೂ ಅಧಿಕ ಹಾನಿ ಇವರದ್ದಾಗಿದೆ. ನೀರು ಬಂದ ದಿನಾಂಕದಿಂದಲೇ ಇಲ್ಲಿ ಗಣಪತಿಗಳು ಮಾರಾಟವಾಗುತ್ತಿದ್ದವು. ಆದರೆ ದುರಾದೃಷ್ಟವಶಾತ್ ಆ ದಿನವೇ ಇಡೀ ಗ್ರಾಮಕ್ಕೆ ನೀರು ನುಗ್ಗಿ ಎಂಟು ದಿನಗಳ ಕಾಲ ನೀರು ನಿಂತಿದ್ದಕ್ಕೆ ಎಲ್ಲಾ ಗಣಪತಿಗಳು ನೀರಲ್ಲೇ ಕರಗಿ ಮಣ್ಣಾಗಿ ಬಿಟ್ಟಿವೆ. 50 ರೂ. ಸಣ್ಣ ಗಣಪತಿಯಿಂದ ಹಿಡಿದು 30 ಸಾವಿರ ರೂ.ವರೆಗೂ ಇಲ್ಲಿ ಗಣಪತಿಗಳನ್ನು ಸಿದ್ಧಪಡಿಸುತ್ತಾರೆ.

blg ganesha 2

ಇಲ್ಲಿ ಪಿಒಪಿ ಗಣಪತಿಗಳನ್ನು ನಿರ್ಮಾಣ ಮಾಡುವುದಿಲ್ಲ. ಎಲ್ಲವೂ ಮಣ್ಣಿನಿಂದಲೇ ಸಿದ್ಧಪಡಿಸುತ್ತಾರೆ. ಸರ್ಕಾರ ಪರಿಸರ ಸ್ನೇಹಿ ಗಣಪತಿ ಕಡ್ಡಾಯ ಮಾಡಿದ ಮೇಲೆ ಅತೀ ಹೆಚ್ಚು ಪರಿಸರ ಸ್ನೇಹಿ ಗಣಪತಿಗಳನ್ನು ನಿರ್ಮಾಣ ಮಾಡುವ ಏಕೈಕ ಗ್ರಾಮ ಇದಾಗಿದೆ. ಸರ್ಕಾರ ಕಡ್ಡಾಯ ಮಾಡಿದ ಮೇಲೆ ಈ ಗಣಪತಿಗಳಿಗೆ ಹೆಚ್ಚಿನ ಗಣಪತಿಗಳನ್ನ ಇದೇ ವರ್ಷ ಮಾಡಿದ್ದರು. ಆದರೆ ದುರಾದೃಷ್ಟವಶಾತ್ ಈ ಬಾರಿಯೇ ನೆರೆ ಬಂದು ಎಲ್ಲ ಗಣಪತಿಗಳು ಹಾಳಾಗಿದ್ದು, ಈ ಕುಂಬಾರರ ಬದುಕು ಬೀದಿಗೆ ಬಂದಿದೆ.

blg ganesha 5

ಇಷ್ಟೆಲ್ಲಾ ಸಂಕಷ್ಟದಲ್ಲಿ ಜನರಿದ್ದರೂ ಅನರ್ಹ ಹಾಗೂ ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕ ರಮೇಶ್ ಜಾರಕಿಹೊಳಿ ಮಾತ್ರ ಇತ್ತ ತಿರುಗಿಯೂ ನೋಡಿಲ್ಲ. ತಮಗೆ ಆಗಿರುವ ಹಾನಿ ಹಾಗೂ ಅದಕ್ಕೆ ಬೇಕಾದ ಪರಿಹಾರ ನೀಡಬೇಕೆಂದು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಎಲ್ಲ ಕುಂಬಾರರು ಸೇರಿಕೊಂಡು ಮನವಿ ಕೂಡ ನೀಡಿದ್ದಾರೆ. ಇಷ್ಟಾದರೂ ಇಲ್ಲಿವರೆಗೂ ಜಿಲ್ಲಾಡಳಿತ ಇವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ.

TAGGED:belagavifloodganeshaGanesha idolImmersionPublic TVಗಣೇಶಗಣೇಶ ಮೂರ್ತಿಪಬ್ಲಿಕ್ ಟಿವಿಪ್ರವಾಹಬೆಳಗಾವಿವಿಸರ್ಜನೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
13 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
27 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 hour ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
1 hour ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?