ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಕಚೇರಿಯಲ್ಲಿಯೇ ಅದ್ದೂರಿಯಾಗಿ ಗಣೇಶೋತ್ಸವವನ್ನು ಆಚರಿಸಲಾಗಿದೆ.
ಚಾಮರಾಜಪೇಟೆ ವರ್ತಕರ ಬೀದಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ತಿರುಮಲ ತಿರುಪತಿ ಸೆಟಪ್ ನಲ್ಲಿ ಗಣಪನನ್ನು ಪ್ರತಿಷ್ಠಾಪಿಸಲಾಗಿದ್ದು, ಅಂದಾಜು 3.5 ಲಕ್ಷ ರೂ. ವೆಚ್ಚ ವ್ಯಯಿಸಲಾಗಿದೆ.
ಈ ಗಣೇಶ ಮೂರ್ತಿ 3 ಅಡಿ ಎತ್ತರವಿದೆ. ಬೆಳಗ್ಗೆ 10:30ರ ಸುಮಾರಿಗೆ ಪೂಜಾ ಕೈಂಕರ್ಯ ನೆರವೇರಿದೆ. ಬಳಿಕ ಸುಮಾರು 3 ಸಾವಿರಕ್ಕೂ ಅಧಿಕ ಭಕ್ತಾದಿಗಳಿಗೆ ಸ್ವತಃ ಜಮೀರ್ ಅವರೇ ಪ್ರಸಾದ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ: ತೇಲುವ ಫ್ರೀಜರ್ ಸಹಾಯದಿಂದ 11 ದಿನ ಸಮುದ್ರದಲ್ಲೇ ಜೀವ ಉಳಿಸಿಕೊಂಡ
ಇಂದು ಸಂಜೆ ಅದ್ದೂರಿ ಮೆರವಣಿಗೆ ನಡೆದಿದ್ದು, ಮಾಜಿ ಪಾಲಿಕೆ ಸದಸ್ಯರಾದ ಅಲ್ತಾಫ್ ಖಾನ್, ಚಂದ್ರಶೇಖರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಯಡಿಯೂರು ಲೇಕ್ ನಲ್ಲಿ ಮೂರ್ತಿ ವಿಸರ್ಜನೆ ಮಾಡಲಾಗಿದೆ. ಭಕ್ತಾದಿಗಳಿಗೆ ಲಡ್ಡು ಮತ್ತು ಖರ್ಜಿಕಾಯಿ ಪ್ರಸಾದವಾಗಿ ನೀಡಲಾಗಿದೆ.