ಚಂಡೀಗಢ: ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಗ್ಯಾಂಗ್ವೊಂದು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ.
ಜೂನ್ 4ರ ಶನಿವಾರದಂದು ಪಂಜಾಬ್ನ ಮೋಗಾ ಜಿಲ್ಲೆಯ ಬಧ್ನಿ ಕಾಲಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪಂಜಾಬಿನ ಜನಪ್ರಿಯ ಗಾಯಕ ಸಿಧು ಮೂಸೆ ವಾಲಾ ಅವರನ್ನು ಕಳೆದ ಭಾನುವಾರ ದುಷ್ಕರ್ಮಿಗಳು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಭಯಾನಕ ಘಟನೆ ಪಂಜಾಬ್ ಜನತೆಯನ್ನು ಬೆಚ್ಚಿಬೀಳಿಸಿದೆ. ಇದನ್ನೂ ಓದಿ: ಕಂಟೈನರ್ ಡಿಪೋದಲ್ಲಿ ಬೆಂಕಿ: 16 ಸಾವು, 450ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಈ ಘಟನೆ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಲ್ಲದೇ ಕೆಲವು ಮಂದಿ ತಮ್ಮ ಮೊಬೈಲ್ನಲ್ಲಿ ಕೂಡ ಘಟನೆಯ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಸಹಾಯಕ ಪೊಲೀಸ್ ಅಧೀಕ್ಷಕ (ಎಎಸ್ಪಿ) ಸರ್ಫರಾಜ್ ಆಲಂ ಅವರು, ಕೆಲವು ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಬಧ್ನಿಕಲ ನಿವಾಸಿ ದೇಸ್ರಾಜ್ ಅಲಿಯಾಸ್ ದೇಸು ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಕೆಲ ಆರೋಪಿಗಳ ಗುರುತು ಪತ್ತೆಯಾಗಿದ್ದು, ತಿಸಲಾಗಿದೆ. ಶೀಘ್ರದಲ್ಲಿಯೇ ಅವರನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ದಾಳಿ ವೇಳೆ ರಕ್ತಸ್ರಾವದಿಂದ ಕೆಲ ನಿಮಿಷಗಳ ಕಾಲ ಯುವಕ ರಸ್ತೆಯಲ್ಲಿಯೇ ಒದ್ದಾಡಿದ್ದಾನೆ. ನಂತರ ಅವನನ್ನು ಮೊಗಾದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಪುತ್ರಿಯ ಅಂಡಾಣು ದಾನ ಮಾಡಲು ಒತ್ತಾಯಿಸಿದ ಪಾಪಿ ತಾಯಿ!