Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು ಪೊಲೀಸರಿಂದ ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರು ಪೊಲೀಸರಿಂದ ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ

Bengaluru City

ಬೆಂಗ್ಳೂರು ಪೊಲೀಸರಿಂದ ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ

Public TV
Last updated: January 5, 2019 3:53 pm
Public TV
Share
3 Min Read
BNG POLICE KOLAR copy
SHARE

– ಭರ್ಜರಿ ಬೇಟೆಯಾಡಿ 35 ಲಕ್ಷ ರೂ. ಹಣ, 500 ಗ್ರಾಂ ಚಿನ್ನಾಭರಣ, ರಕ್ತ ಚಂದನ ವಶ

ಬೆಂಗಳೂರು: ಚಂದನವನ ಎಂದೇ ಪ್ರಖ್ಯಾತಿ ಪಡೆದಿರುವ ಕನ್ನಡ ನಾಡಿನಲ್ಲಿ ರಕ್ತ ಚಂದನ ಹಾಗೂ ಶ್ರೀಗಂಧ ಮರ ಕಳ್ಳ ಸಾಗಾಣೆಯಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲು ಬೆಂಗಳೂರು ಸೆಂಟ್ರಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

ತಂದೆ ರಿಯಾಸ್, ಮಗ ಬಾಬಾ ಎಂಬ ನಟೋರಿಯಸ್ ಕಳ್ಳರನ್ನು ಪೊಲೀಸರು ಬಂಧಿಸಿದ್ದು, ಕೋಲಾರ ಜಿಲ್ಲೆ ಮಲೂರು ಬಳಿಯ ಕಟ್ಟಿಗೇನಹಳ್ಳಿ ಗ್ರಾಮದವರಾಗಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 35 ಲಕ್ಷ ನಗದು, 500 ಗ್ರಾಂ ಚಿನ್ನಾಭರಣ ಹಾಗೂ ರಕ್ತ ಚಂದನವನ್ನು ವಶಕ್ಕೆ ಪಡೆದಿದ್ದಾರೆ.

vlcsnap 2019 01 05 14h47m08s166

ಏನಿದು ಪ್ರಕರಣ?
ಕೋಲಾರ ಜಿಲ್ಲೆಯ ಕಟ್ಟಿಗೇನಹಳ್ಳಿ ಗ್ರಾಮದ ಈ ಇಬ್ಬರು ಆರೋಪಿಗಳು ಶ್ರೀಗಂಧ ಕಳ್ಳ ಸಾಗಾಣೆ ದಂಧೆಯಲ್ಲಿ ಕುಖ್ಯಾತಿ ಪಡೆದಿದ್ದು, ದಂಧೆಗೆ ಇಡೀ ಗ್ರಾಮವೇ ಸಾಥ್ ನೀಡುತ್ತಿತ್ತು. ಪೊಲೀಸರು ದಂಧೆಕೋರರ ಮೇಲೆ ದಾಳಿ ನಡೆಸಲು ಪ್ರಯತ್ನ ನಡೆಸಿದರೆ ಮಹಿಳೆಯರು, ಹೆಣ್ಣು ಮಕ್ಕಳನ್ನು ಮುಂದೇ ಬಿಟ್ಟು ಹೈಡ್ರಾಮಾ ಸೃಷ್ಟಿಸಿದ್ದರು. ಅಲ್ಲದೇ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿ ಸ್ಥಳದಿಂದ ಪರಾರಿಯಾಗುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಇದೇ ದಂಧೆಯನ್ನು ನಡೆಸುತ್ತಿದ್ದ ಖದೀಮರು ಅಂತರಾಷ್ಟ್ರೀಯ ಮಟ್ಟದಲ್ಲಿ ಶ್ರೀಗಂಧ ಕಳ್ಳಸಾಗಾಣೆ ಮಾಡುತ್ತಿದ್ದರು. ಅಲ್ಲದೇ ಯಾರೇ ಶ್ರೀ ಗಂಧ ಕಳ್ಳತನ ಮಾಡಿದ್ದರು ಇಲ್ಲಿಂದಲೇ ಮಾರಾಟವಾಗುತ್ತಿತ್ತು. ಈ ಗ್ಯಾಂಗ್ ಶ್ರೀಗಂಧ ಕಳ್ಳತನ ಮಾಡಲು ಪ್ರೇರಣೆ ನೀಡಿ ಸಹಾಯ ಮಾಡುತ್ತಿದ್ದರು. ಕಳ್ಳತನ ಮಾಡಲು ತಮಿಳುನಾಡಿನ ಇಳಯರಾಜ ಎಂಬ ಗ್ಯಾಂಗ್ ಕರೆಯಿಸಿ ಡೀಲ್ ಮಾಡುತ್ತಿದ್ದರು. ಸರ್ಕಾರಿ ಕಚೇರಿಯ ಬಳಿ ಇರುತ್ತಿದ್ದ ಮರಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್ 2010 ರಿಂದಲೇ ಇದರಲ್ಲಿ ತೊಡಗಿದ್ದರು.

BNG POLICE KOLAR 2

ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ: ಕೆಲ ಪ್ರಕರಣಗಳಲ್ಲಿ ಇವರ ವಿರುದ್ಧ ದೂರು ದಾಖಲಿಸಿ ಬಂಧನ ಮಾಡಲು ತೆರಳಿದ ಪೊಲೀಸರ ಮೇಲೆ ಊರಿನ ಗ್ರಾಮಸ್ಥರು ಕಲ್ಲು ತೂರಾಟ ನಡೆಸುತ್ತಿದ್ದರು. ಆದ್ದರಿಂದ ಕಳೆದ 3 ವರ್ಷಗಳಿಂದ ಈ ಗ್ರಾಮಕ್ಕೆ ಪೊಲೀಸರು ಹೋಗಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ಪೊಲೀಸರು ಸುಮಾರು 200 ಅಧಿಕಾರಿ ಸಿಬ್ಬಂದಿ, 3 ಕೆಎಸ್‍ಆರ್‍ಪಿ ವಾಹನ ಸೇರಿ ಇಡೀ ಗ್ರಾಮವನ್ನೇ ಸುತ್ತುವರೆದು ದಾಳಿ ನಡೆಸಿದ್ದರು. ತಡರಾತ್ರಿ 2 ಗಂಟೆ ಅವಧಿಯಲ್ಲಿ ದಾಳಿ ನಡೆಸಿದ್ದು, 3 ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಇಬ್ಬರು ಆರೋಪಿಗಳ ಬಂಧನ ಮಾಡಲು ಅವರ ಮನವೊಲಿಕೆ ಮಾಡಲು ಪೊಲೀಸರು ಯತ್ನಿಸಿದ್ದರು. ಆದರೆ ಆರೋಪಿಗಳು ಒಪ್ಪದ ಕಾರಣ ಮನೆ ಬಾಗಿಲು ಮುರಿದು ಕಾರ್ಯಾಚರಣೆ ನಡೆಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

BNG POLICE KOLAR 4 copy

ಶ್ರೀಗಂಧ ಕಳ್ಳತನಕ್ಕೆ ಸಹಾಯ: ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಶ್ರೀಗಂಧ ಕಳ್ಳತನ ನಡೆಸುತ್ತಿರುವ ಈ ಆರೋಪಿಗಳು ಸುಮಾರು ವಾಹನಗಳ ನಂಬರ್ ಪ್ಲೇಟ್ ಹೊಂದಿದ್ದರು. ಅಲ್ಲದೇ ಬೇರೆ ಬೇರೆ ರಾಜ್ಯಗಳಿಂದ ಕಳ್ಳತನ ಮಾಡಲು ವ್ಯಕ್ತಿಗಳನ್ನು ಕರೆಸುತ್ತಿದ್ದರು. ಕಳ್ಳತನ ಮಾಡುವ ವೇಳೆ ಓಎಲ್‍ಎಕ್ಸ್ ತಾಣದಲ್ಲಿ ಮಾರಾಟ ಮಾಡುತ್ತಿದ್ದ ವಾಹನ ನಂಬರ್ ಗಳನ್ನು ನಮೂದಿಸಿ ವಾಹನ ನೀಡುತ್ತಿದ್ದರು.

ಬೆಂಗಳೂರು ಕೇಂದ್ರ ಪೊಲೀಸರಾದ ಡಿಸಿಪಿ ದೇವರಾಜ್, ಡಿಸಿಪಿ ಅಹ್ಮದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, 5 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಈ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ (ಕೋಕಾ) ಕಾಯ್ದೆಯಲ್ಲಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೇ ಶ್ರೀಗಂಧ ಕಳ್ಳತನ ಮಾಡಿ ರಾಜ್ಯದ ವಿವಿಧ ಶ್ರೀಗಂಧ ಕಾರ್ಖಾನೆಗಳು ಮಾರಾಟ ಮಾಡುತ್ತಿದ್ದ ಬಗ್ಗೆ ಡೈರಿ ಕೂಡ ಲಭ್ಯವಾಗಿದ್ದು, ಯಾರಿಗೆ, ಎಷ್ಟು ಮಾರಾಟ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆದ್ದರಿಂದ ಶ್ರೀಗಂಧ ಖರೀದಿ ಮಾಡುತ್ತಿದ್ದ ಕಂಪೆನಿಯ ಮಾಲೀಕರನ್ನು ಕೋಕಾ ಕಾಯ್ದೆಯಲ್ಲಿ ತರುವ ಕಾರ್ಯವನ್ನ ಪೊಲೀಸರು ಮಾಡಿದ್ದಾರೆ.

BNG POLICE KOLAR 3

ಇತ್ತೀಚೆಗೆ ಅರ್ಧ ಲೈಫ್ ಎಂಬ ಕಂಪೆನಿ ಅರ್ಧ ಟನ್ ರಕ್ತ ಚಂದನಕ್ಕೆ ಈ ಗ್ಯಾಂಗಿಗೆ ಭೇಟಿಗೆ ಇಟ್ಟಿತ್ತು. ಈ ಮಾಲ್ ಸಿದ್ಧಪಡಿಸಲು ಆರೋಪಿಗಳು ಸಿದ್ಧತೆ ನಡೆಸುತ್ತಿದ್ದರು. ಈ ವೇಳೆ ತಮಿಳುನಾಡಿನ ಇಳಯರಾಜ್ ಗ್ಯಾಂಗ್ ಬಂಧನ ಆಗಿದೆ. ಅವರಿಂದ ಪಡೆದ ಮಾಹಿತಿ ಮೇರೆಗೆ ನ್ಯಾಯಾಲಯ ಹಾಗೂ ಉನ್ನತ ಅಧಿಕಾರಿಗಳ ಅನುಮತಿ ಪಡೆದು ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಈ ದಂಧೆಯಲ್ಲಿ ತೊಡಗಿದ್ದ ಮತ್ತೊಂದು ಗ್ಯಾಂಗನ್ನು ಬಂಧಿಸಲಾಗಿದೆ. ಇದರಲ್ಲಿ ಮತ್ತೊಬ್ಬ ಆರೋಪಿ ಬಂಧನ ಬಾಕಿ ಇದೆ. ಮುಂದಿನ ಹಂತದ ಕಾರ್ಯಾಚರಣೆಯಲ್ಲಿ ಎಲ್ಲರ ಬಂಧನ ಮಾಡಲಾಗುತ್ತದೆ. ಗ್ಯಾಂಗ್ ಬಂಧನದಿಂದ ರಾಜ್ಯದಲ್ಲಿ ನಡೆದ ಹಲವು ಶ್ರೀಗಂಧ ಕಳ್ಳತನ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ. ಮುಖ್ಯವಾಗಿ ಬಂಧಿತ ಇಬ್ಬರು ಆರೋಪಿಗಳು ಈ ಹಿಂದೆ ಒಮ್ಮೆ ಮಾತ್ರ ಬಂಧನವಾಗಿದ್ದರು. ಆ ಬಳಿಕ ಇವರು ಪೊಲೀಸರ ಕೈಗೆ ಸಿಕ್ಕಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

BNG POLICE KOLAR 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:accusedbengaluruoperationpolicePublic TVsandalwoodthievesಆರೋಪಿಕಳ್ಳ ಸಾಗಾಣೆಕಾರ್ಯಾಚರಣೆಪಬ್ಲಿಕ್ ಟಿವಿಪೊಲೀಸ್ಬಂಧನಬೆಂಗಳೂರುಶ್ರೀ ಗಂಧ ಮರ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Students and Job Aspirants Stage Massive Protest Rally In Dharwad
Dharwad

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

Public TV
By Public TV
8 minutes ago
Cauvery Water
Bengaluru City

ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
By Public TV
53 minutes ago
Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
1 hour ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
2 hours ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
2 hours ago
CT Ravi
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?