Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್‌ ಟಿವಿ ಇಂಪ್ಯಾಕ್ಟ್ | ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್‌ ಕಂಬ ತೆರವು – ಆದೇಶ ಹಿಂಪಡೆದ ತಹಶೀಲ್ದಾರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಬ್ಲಿಕ್‌ ಟಿವಿ ಇಂಪ್ಯಾಕ್ಟ್ | ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್‌ ಕಂಬ ತೆರವು – ಆದೇಶ ಹಿಂಪಡೆದ ತಹಶೀಲ್ದಾರ್‌

Districts

ಪಬ್ಲಿಕ್‌ ಟಿವಿ ಇಂಪ್ಯಾಕ್ಟ್ | ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್‌ ಕಂಬ ತೆರವು – ಆದೇಶ ಹಿಂಪಡೆದ ತಹಶೀಲ್ದಾರ್‌

Public TV
Last updated: August 29, 2024 4:31 pm
Public TV
Share
3 Min Read
Gangavati Tehsildar withdraws order Removal of electric pole with bow and arrows in City Anjanadri Betta SDPI
SHARE

– KRIDL ವಿರುದ್ಧ ಕೇಸ್‌ ದಾಖಲಿಸದಂತೆ ಸೂಚನೆ
– ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ್ದ ನೆಟ್ಟಿಗರು

ಕೊಪ್ಪಳ: ಪಬ್ಲಿಕ್‌ ಟಿವಿ ವರದಿ ಬೆನ್ನಲ್ಲೇ ಗಂಗಾವತಿ (Gangavathi) ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಹಾಕಿರುವ ವಿದ್ಯುತ್ ಕಂಬಗಳ (Electric Pole) ತೆರವುಗೊಳಿಸಲು ಹೊರಡಿಸಿದ್ದ ಆದೇಶವನ್ನು ಗಂಗಾವತಿ ತಹಶೀಲ್ದಾರ್‌ ಹಿಂದಕ್ಕೆ ಪಡೆದಿದ್ದಾರೆ. ಇದರ ಜೊತೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL) ವಿರುದ್ಧವೇ ಪ್ರಕರಣ ದಾಖಲಿಸದಂತೆ ಸೂಚಿಸಿದ್ದಾರೆ.

ಅಗಸ್ಟ್ 28ರ ಸಂಜೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿರುವ ತಹಸೀಲ್ದಾರ್ ನಾಗರಾಜ್‌ ಅವರು ಈ ಬಗ್ಗೆ ಸಂಬಂಧಿತ ಸಂಕ್ಷಮ ಪ್ರಾಧಿಕಾರದಲ್ಲಿ ಜನಾಭಿಪ್ರಾಯ ಪಡೆದು ಮುಂದುವರೆಯಲಾಗುವುದು. ಧಾರ್ಮಿಕ, ಮತೀಯ ಭಾವನೆಯಂತ ಸೂಕ್ಷ್ಮ ವಿಚಾರ ಉಂಟಾದಲ್ಲಿ ಕಾನೂನನಾತ್ಮಕ ಕ್ರಮ ಕೈಗೊಳ್ಳಲಾಗುವುದು  ಎಂದು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಗರಾಜ್, ಈ ವಿಷಯ ನಗರಸಭೆಯ ವ್ಯಾಪ್ತಿಗೆ ಬರುವ ಕಾರಣ ಸಾಮಾನ್ಯಸಭೆಯಲ್ಲಿ ಇದೇ ವಿಚಾರದ ಅಂಗವಾಗಿ ಪ್ರಸ್ತಾಪ ಮಾಡಿ ವಿಷಯ ಮಂಡನೆ ಮಾಡಿ ಅನುಮೋದನೆ ಪಡೆದುಕೊಂಡಿರುವುದು ನನ್ನ ಗಮನಕ್ಕೆ ಬಾರದ ಹಿನ್ನೆಲೆ ಆದೇಶ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

ಪಬ್ಲಿಕ್‌ ಟಿವಿ ಡಿಜಿಟಲ್‌ ಇಂದು ಬೆಳಗ್ಗೆ ವರದಿ ಪ್ರಕಟಿಸುತ್ತಿದ್ದಂತೆ ಸರ್ಕಾರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರೀ ಟೀಕೆ ವ್ಯಕ್ತಪಡಿಸಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

Communal harmony will be disturbed SDPI opposes electricity poles with bow and arrows in Anjanadri area Gangavathi Koppala

ಏನಿದು ವಿವಾದ?
ಅಯೋಧ್ಯೆ, ತಿರುಪತಿಯ ಮಾದರಿಯಲ್ಲಿ ಗಂಗಾವತಿ ಅಂಜನಾದ್ರಿ (Anjanadri Betta) ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ಮಹಾರಾಣಾ ಪ್ರತಾಪ್ ಸರ್ಕಲ್‌ನಿಂದ ಜುಲೈ ನಗರದವರೆಗೂ ತಿರುಪತಿ, ಅಯೋಧ್ಯೆಯಲ್ಲಿರುವಂತೆ (Ayodhya) ವಿದ್ಯುತ್ ಕಂಬಗಳನ್ನು ಹಾಕಿದ್ದಕ್ಕೆ ಎಸ್‌ಡಿಪಿಐ (SDPI) ಆಕ್ಷೇಪ ವ್ಯಕ್ತಪಡಿಸಿತ್ತು.

ಇದು ಕೇವಲ ಒಂದು ಧರ್ಮದ (Religion) ಸಂಕೇತವಾಗಿದೆ. ಇದರಿಂದ ಗಂಗಾವತಿ ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಆರೋಪಿಸಿ ಇದನ್ನು ತೆರವುಗೊಳಿಸುವಂತೆ ಗಂಗಾವತಿ ನಗರಸಭೆ ಕಮಿಷನರ್‌ಗೆ SDPI ಮನವಿ ಮಾಡಿತ್ತು.  ಇದನ್ನೂ ಓದಿ: ಮೈಕ್ ಹಾಕಿ ಊರಿಗೆಲ್ಲ ಕೇಳುವ ಹಾಗೆ ಕೂಗಿದ್ರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ವಾ? – ತ್ರಿಶೂಲ, ತಿಲಕದ ವಿದ್ಯುತ್ ಕಂಬ ತೆರವು ಆದೇಶಕ್ಕೆ ಸಿ.ಟಿ ರವಿ ಕೆಂಡ

ಎಸ್‌ಡಿಪಿಐ ನೀಡಿದ ಮನವಿ ಪತ್ರ
ಎಸ್‌ಡಿಪಿಐ ನೀಡಿದ್ದ ಮನವಿ ಪತ್ರ

ಈ ಮನವಿಯ ಬೆನ್ನಲ್ಲೇ ಗಂಗಾವತಿ ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಹಾಕಿರುವ ವಿದ್ಯುತ್ ಕಂಬಗಳ ತೆರವಿಗೆ ತಹಶೀಲ್ದಾರ್‌ ಆದೇಶಿಸಿದ್ದರು. ಅಷ್ಟೇ ಅಲ್ಲದೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL) ವಿರುದ್ಧವೇ ಪ್ರಕರಣ ದಾಖಲಿಸಲು ಸೂಚಿಸಿದ್ದರು.  ಇದನ್ನೂ ಓದಿ: ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ? 

ಆಗಸ್ಟ್‌ 28 ರಂದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ತಹಶೀಲ್ದಾರ್‌ ಅವರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷರಿಗೆ ನೀಡಿರುವ ಆದೇಶದ ಪ್ರತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿತ್ತು.

ತಹಶೀಲ್ದಾರ್‌ ಹೊರಡಿಸಿದ್ದ ಆದೇಶ ಪ್ರತಿ

ಹನುಮನ ಜನ್ಮಸ್ಥಳವಾಗಿರುವ ಅಂಜನಾದ್ರಿ ಭಾಗವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯ ಹಲವು ಬಾರಿ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಚುನಾವಣಾ ಪ್ರಚಾರದಲ್ಲೂ ಭರವಸೆ ನೀಡಿದ್ದರು. ಅದರಂತೆ ಈಗ ವಿದ್ಯುತ್ ಕಂಬಗಳಲ್ಲಿ ಬಿಲ್ಲು, ಬಾಣಗಳು ಇರುವ ಚಿತ್ರಗಳನ್ನು ಅಳವಡಿಸಲಾಗಿತ್ತು.

ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಚಿತ್ರಗಳು ಐತಿಹಾಸಿಕ ಅಂಜನಾದ್ರಿ ಪರ್ವತದ ಮಾರ್ಗಸೂಚಿಗೆ ಅನುಕೂಲವಾಗಿವೆ. ಅಂಜನಾದ್ರಿಗೆ ಬರುವ ಭಕ್ತರಲ್ಲಿ ಧಾರ್ಮಿಕ ಭಕ್ತಿ ಉಂಟಾಗುವುದರಿಂದ ಇವುಗಳನ್ನು ಅಳವಡಿಸಲಾಗಿದೆ. ಇದರಿಂದ ಯಾರ ಭಾವನೆಗೂ ಧಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಷ್ಟೇ ಅಲ್ಲದೇ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲೂ ಜನಾರ್ದನ ರೆಡ್ಡಿ ಅವರು ವಿಷಯ ಪ್ರಸ್ತಾಪಿಸಿ ಈ ವಿಷಯದಲ್ಲಿ ಅನಾವಶ್ಯಕ ಗೊಂದಲ ಸೃಷ್ಟಿಸದೇ ಎಲ್ಲರೂ ಸಹಕಾರ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದ್ದರು.

 

TAGGED:electric poleGangavathikoppalaSDPIಅಂಜನಾದ್ರಿ ಬೆಟ್ಟಎಸ್‍ಡಿಪಿಐಕೊಪ್ಪಳಗಂಗಾವತಿ
Share This Article
Facebook Whatsapp Whatsapp Telegram

Cinema news

Rukmini Vasanth 2
ಹೂವು, ಪುಸ್ತಕಗಳೊಂದಿಗೆ ರುಕ್ಕು ಬರ್ತ್‌ಡೇ ಸೆಲೆಬ್ರೇಷನ್‌; ಫೋಟೋಸ್‌ ವೈರಲ್‌
Cinema Latest Sandalwood
Rajinikanth celebrates his birthday on the sets of Jailer 2
ಜೈಲರ್-2 ಸೆಟ್‌ನಲ್ಲಿ ತಲೈವಾ ಹುಟ್ಟುಹಬ್ಬ ಜೋರು
Cinema Latest South cinema Top Stories
NARENDRA MODI RAJINIKANTH
ಸೂಪರ್‌ಸ್ಟಾರ್‌ @75 – ರಜನಿ ಪಾತ್ರಗಳು ಬೆಂಚ್‌ಮಾರ್ಕ್‌ ಸೃಷ್ಟಿಸಿವೆ: ಮೋದಿ
Cinema Latest National Top Stories
Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories

You Might Also Like

Dry Coconut
Latest

ಕೊಬ್ಬರಿ ಬೆಳೆಗಾರರಿಗೆ ಗುಡ್‌ನ್ಯೂಸ್‌ – ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

Public TV
By Public TV
37 minutes ago
Population
Latest

2027ರ ಜನಗಣತಿಗೆ 11,718 ಕೋಟಿ ಬಿಡುಗಡೆಗೆ ಕೇಂದ್ರ ಅಸ್ತು – 2 ಹಂತಗಳಲ್ಲಿ ಸೆನ್ಸಸ್‌

Public TV
By Public TV
1 hour ago
Girinagar Electric Shock
Bengaluru City

ಗಿಳಿ ಉಳಿಸಲು ಹೋದ ಯುವಕನ ಪ್ರಾಣ ಪಕ್ಷಿ ಹಾರಿಹೋಯ್ತು!

Public TV
By Public TV
1 hour ago
Messi
Latest

ಇಂದು ಭಾರತಕ್ಕೆ ಬರಲಿದ್ದಾರೆ ಫುಟ್‌ಬಾಲ್ ದಂತಕತೆ ಲಿಯೋನಲ್ ಮೆಸ್ಸಿ

Public TV
By Public TV
1 hour ago
R Ashoka
Belgaum

ಸದನದಲ್ಲಿ ʻಗೃಹಲಕ್ಷ್ಮಿʼ ಕದನ – ಲಕ್ಷ್ಮಿ ಹೆಬ್ಬಾಳ್ಕರ್‌ ಸದನದ ಗೌರವ ಕಳೆದ್ರು: ಆರ್‌.ಅಶೋಕ್‌ ಕಿಡಿ

Public TV
By Public TV
2 hours ago
Prahlad Joshi 1
Latest

ದ್ವೇಷ ಭಾಷಣಕ್ಕೆ 10 ವರ್ಷ ಜೈಲು – ಕಾಂಗ್ರೆಸ್‌ನ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಜೋಶಿ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?