ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಹಬ್ಬದ ಸಿದ್ಧತೆ ಆರಂಭವಾಗಿದೆ. ಮುಂಬೈನ ಅತಿ ಶ್ರೀಮಂತ ಗಣಪತಿ ಮಂಡಲ ಎಂಬ ಹಿರಿಮೆ ಹೊಂದಿರುವ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್ಬಿ) ಸೇವಾ ಮಂಡಲದ ಗಣೇಶನಿಗೆ ಈ ವರ್ಷ ದಾಖಲೆಯ 316.40 ಕೋಟಿ ರೂ. ವಿಮೆ ಮಾಡಿರುವುದು ವಿಶೇಷವಾಗಿದೆ.
ಜೆಎಸ್ಬಿ ಮಂಡಲ್ ಗಣೇಶನಿಗೆ ತೊಡಿಸುವ 66 ಕೆಜಿ ಚಿನ್ನಾಭರಣ, 295 ಕೆಜಿ ಬೆಳ್ಳಿ, ಹಾಗೂ ಇನ್ನಿತರ ಬೆಲೆಬಾಳುವ ಆಭರಣಗಳಿಗೆ ನ್ಯೂ ಇಂಡಿಯಾ ಅಶ್ಯುರೆನ್ನಿಂದ 31.97 ಕೋಟಿ ರೂ. ಮೊತ್ತದ ಇನ್ಶೂರೆನ್ಸ್ ಮಾಡಿಸಲಾಗಿದೆ. ಭದ್ರತಾ ಸಿಬ್ಬಂದಿ, ಅರ್ಚಕರು, ಅಡುಗೆ ಮಾಡುವವರು, ಸ್ವಯಂ ಸೇವಕರಿಗಾಗಿ ಒಟ್ಟು 263 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್ ಕ್ರಾಂತಿ ನಡೆಗೆ ಜೆಡಿಎಸ್ನಿಂದ ಶಾಂತಿ ಆಸ್ತ್ರ!
ಗಣೇಶೋತ್ಸವ ವೇಳೆ ಅನಾಹುತಗಳಾದಲ್ಲಿ ಪರಿಹಾರವಾಗಿ 1 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಜೊತೆಗೆ ಸಾರ್ವಜನಿಕ ಹೊಣೆಗಾರಿಕೆ ಅಡಿಯಲ್ಲಿ ಭಕ್ತರು, ಗಣಪತಿ ಕೂರಿಸುವ ಪೆಂಡಾಲ್, ಕ್ರೀಡಾಂಗಣ ಸೇರಿ ಇನ್ನಿತರ ಎಂದು 20 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಇದನ್ನೂ ಓದಿ: ಬಂಧನವಾದ ಕೆಲವೇ ಗಂಟೆಗಳಲ್ಲಿ ತೆಲಂಗಾಣ ಬಿಜೆಪಿ ಶಾಸಕನಿಗೆ ಜಾಮೀನು ಮಂಜೂರು
ಕಳೆದ ಎರಡು ವರ್ಷಗಳ ಹಿಂದೆ ಈ ವಿಮೆ ಮೊತ್ತ 289 ಕೋಟಿ ರೂ. ಆಗಿತ್ತು. ಇದೀಗ 27 ಕೋಟಿ ರೂ. ಏರಿಕೆ ಕಂಡು 316.40 ಕೋಟಿ ರೂ.ಗೆ ತಲುಪಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಮುಂಬೈನಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಮಾಡಿರಲಿಲ್ಲ. ಈ ವರ್ಷ ಮತ್ತೆ ಅದ್ಧೂರಿ ಗಣೇಶೋತ್ಸವಕ್ಕೆ ಜಿಎಸ್ಬಿ ಸಮಿತಿ ಮುಂದಾಗಿದ್ದು, ಈ ವರ್ಷ ಪೂಜೆ, ಪ್ರಸಾದ ಸೇರಿದಂತೆ ಇತರ ವ್ಯವಸ್ಥೆಗಳಿಗೆ ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡಿದೆ.
Live Tv
[brid partner=56869869 player=32851 video=960834 autoplay=true]