Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಗೌರಿ ದಿನ’ ಕಾರ್ಯಕ್ರಮ ಮೋದಿ, ಸಂಘ ಪರಿವಾರವನ್ನು ತೆಗಳುವ ಕಾರ್ಯಕ್ರಮವಾಯಿತೇ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಗೌರಿ ದಿನ’ ಕಾರ್ಯಕ್ರಮ ಮೋದಿ, ಸಂಘ ಪರಿವಾರವನ್ನು ತೆಗಳುವ ಕಾರ್ಯಕ್ರಮವಾಯಿತೇ..?

Bengaluru City

‘ಗೌರಿ ದಿನ’ ಕಾರ್ಯಕ್ರಮ ಮೋದಿ, ಸಂಘ ಪರಿವಾರವನ್ನು ತೆಗಳುವ ಕಾರ್ಯಕ್ರಮವಾಯಿತೇ..?

Public TV
Last updated: January 29, 2018 10:08 pm
Public TV
Share
3 Min Read
Gauri Day 2 1
SHARE

ಬೆಂಗಳೂರು: ಗೌರಿ ಲಂಕೇಶ್ ಹುಟ್ಟಿದ ದಿನವಾದ ಸೋಮವಾರ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಆಯೋಜನೆಗೊಂಡಿದ್ದ ‘ಗೌರಿ ದಿನ’ ಕಾರ್ಯಕ್ರಮ ಮೋದಿಗೆ ಮತ್ತು ಸಂಘ ಪರಿವಾರವನ್ನು ತೆಗಳಲು ಸೀಮಿತವಾಯಿತೇ ಎನ್ನುವ ಪ್ರಶ್ನೆ ಎದ್ದಿದೆ.

ಕಾರ್ಯಕ್ರಮ ನಡೆಯುವ ಮೊದಲು ಸಹೋದರ ಇಂದ್ರಜಿತ್ ಲಂಕೇಶ್ ಟೌನ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮ ಸರ್ಕಾರಿ ಪ್ರಯೋಜಿತವಾಗಿದ್ದು ಸಿಎಂ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿಸಿದ್ದರು.

ಈ ಹೇಳಿಕೆಗೆ ಪುಷ್ಟಿ ಎನ್ನುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು ಪ್ರಧಾನಿ ಮೋದಿ ಮತ್ತು ಸಂಘ ಪರಿವಾರದ ವಿರುದ್ಧ ವಾಗ್ದಾಳಿ ನಡೆಸಲು ವೇದಿಕೆಯನ್ನು ಬಳಸಿಕೊಂಡಿದ್ದು ಮಾತ್ರವಲ್ಲದೇ ಸಿಎಂ ಸಿದ್ದರಾಮಯ್ಯಮನವರನ್ನು ಹೊಗಳಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

Gauri Day 3

ಗೌರಿ ಹತ್ಯೆಯ ಬಗ್ಗೆ ರಾಜ್ಯ ಸರ್ಕಾರ ನೇಮಿಸಿದ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು ಆರೋಪಿಗಳ ರೇಖಾಚಿತ್ರ ಇಂದು ಬಿಡುಗಡೆಯಾಗಿದ್ದು ಬಿಟ್ಟರೆ ಇದೂವರೆಗೂ ಆರೋಪಿಗಳ ಬಂಧನ ಆಗಿಲ್ಲ. ಹೀಗಾಗಿ ಆರೋಪಿಗಳ ಬಂಧಿಸದ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು ಕೇಂದ್ರದ ವಿರುದ್ಧ ಟೀಕೆ ಮಾಡಿದ್ದು ಎಷ್ಟು ಸರಿ ಎಂದು ಜನ ಕೇಳುತ್ತಿದ್ದಾರೆ.

ಸಹೋದರಿ ಕವಿತಾ ಲಂಕೇಶ್ ರಾಜ್ಯ ಸರ್ಕಾರ ತನಿಖೆಯಲ್ಲಿ ನಮಗೆ ನಂಬಿಕೆ ಇದೆ. ಈ ಪ್ರಕರಣವನ್ನು ಯಾವುದೇ ಕಾರಣಕ್ಕೆ ಸಿಬಿಐ ತನಿಖೆಗೆ ನೀಡಬಾರದು. ಈಗಾಗಲೇ ನೀಡಿರುವ ಪ್ರಕರಣದಲ್ಲಿ ಯಾವುದೇ ಫಲಿತಾಂಶ ಲಭಿಸಿಲ್ಲ. ಎಸ್‍ಐಟಿ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಹಂತಕರನ್ನು ಬಂಧಿಸುವ ವಿಶ್ವಾಸವಿದೆ. ಪ್ರಕರಣವನ್ನು ಮತ್ತೆ ಸಿಬಿಐ ಗೆ ವಹಿಸುವುದರಿಂದ ವಿಚಾರಣೆ ಮತ್ತೆ ಒಂದು ವರ್ಷ ಹಿಂದುಳಿಯುವ ಸಂಭವವಿದೆ ಎಂದು ಪಬ್ಲಿಕ್ ಟಿವಿಗೆ ತಿಳಿಸಿದ್ದರು.

ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ಹೀಗಿರುವಾಗ ವೇದಿಕೆಯಲ್ಲಿದ್ದ ಜೆಎನ್‍ಯು ಮುಖಂಡ ಕನ್ಹಯ್ಯ ಕುಮಾರ್, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆ ಸ್ವಾಮಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರೆ, ಗುಜರಾತ್ ಪಕ್ಷೇತರ ಶಾಸಕ ದಲಿತ ಮುಖಂಡ ಜಿಗ್ನೇಶ್ ಮೇವಾನಿ ಮೋದಿಯನ್ನು ಟೀಕಿಸುವುದರ ಜೊತೆಗೆ ಸಿದ್ದರಾಮಯ್ಯ ಸರ್ಕಾರವನ್ನು ಹೊಗಳಿದರು.

Gauri Day 6

ದೊರೆಸ್ವಾಮಿ ನರೇಂದ್ರ ಮೋದಿ ಅವರನ್ನು ದೇಶದಿಂದ ಓಡಿಸಿ ಎಂದು ಕರೆ ನೀಡಿದರೆ, ಕನ್ಹಯ್ಯ ಕುಮಾರ್ ಇಲ್ಲಿ ಸೇರಿದವರೆಲ್ಲ ಗೌರಿ ಪರಿವಾರದವರು, ಇಲ್ಲಿ ಯಾರೂ ಸಂಘ ಪರಿವಾರದವರಿಲ್ಲ. ಗೌರಿ ಪರಿವಾರವು ಸಂಘ ಪರಿವಾರಕ್ಕೆ ಹೊಡೆತ ಕೊಟ್ಟೇ ಕೊಡುತ್ತದೆ ಎಂದು ಹೇಳಿದರು.  ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಓಡಿಸಿ: ಮೋದಿ ವಿರುದ್ಧ ದೊರೆಸ್ವಾಮಿ ಗುಡುಗು

ಗುಜರಾತ್ ಚುನಾವಣೆಯಲ್ಲಿ ನಿಂತು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಜಿಗ್ನೇಶ್ ಮೇವಾನಿ, ಕರ್ನಾಟಕದಲ್ಲೂ ಚುನಾವಣೆ ಬರುತ್ತಿದ್ದು ಚಡ್ಡಿಗಳನ್ನು ಸೋಲಿಸಲು ಕರ್ನಾಟಕದ ಎಲ್ಲ ರಾಜಕೀಯ ಪಕ್ಷಗಳು ಒಂದಾಗಬೇಕು. ಚುನಾವಣೆ ವೇಳೆ ಮೂರು ವಾರ ಕರ್ನಾಟಕದಲ್ಲಿಯೇ ಇದ್ದು ಬಿಜೆಪಿ ವಿರುದ್ಧ ಪ್ರಚಾರ ಮಾಡುತ್ತೇನೆ ಎಂದು ಹೇಳಿ ಕರ್ನಾಟಕ ಸರ್ಕಾರಕ್ಕೆ ದಲಿತರ ಬಗ್ಗೆ ಆದಿವಾಸಿಗಳ ಬಗ್ಗೆ ಕಾಳಜಿ ಇದೆ. ಇವರಿಗೆ ಜಮೀನು ನೀಡಿ ಸಹಕರಿಸುತ್ತಿದೆ ಎಂದು ಹೇಳಿ ಸಿಎಂ ಸಿದ್ದರಾಮಯ್ಯನವರನ್ನು ಹೊಗಳಿದರು. ಅಷ್ಟೇ ಅಲ್ಲದೇ ಚಡ್ಡಿಗಳು ಅಧಿಕಾರಕ್ಕೆ ಬರಬಾರದು, ಮೋದಿ ಯಾವುದೇ ಕಾರಣಕ್ಕೆ ಮುಂದೆ ಪ್ರಧಾನಿಯಾಗಬಾರದು. ಮೋದಿ ನಿವೃತ್ತಿ ಪಡೆದುಕೊಳ್ಳುವುದು ಉತ್ತಮ ಎಂದರು. ಇದನ್ನೂ ಓದಿ: ಗೌರಿ ದಿನಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ, ಪೊಲೀಸ್ ತನಿಖೆ ತೃಪ್ತಿ ನೀಡಿದೆ : ಕವಿತಾ ಲಂಕೇಶ್

Gauri Day 5

2017ರ ಸೆಪ್ಟೆಂಬರ್ ನಲ್ಲಿ ಗೌರಿ ಹತ್ಯೆ ಖಂಡಿಸಿ ‘ನಾನು ಗೌರಿ’ ಹೆಸರಿನಲ್ಲಿ ದೊಡ್ಡ ಮಟ್ಟದ ಪ್ರತಿರೋಧ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲೂ ಅತಿಥಿಗಳು ಮೋದಿ, ಸಂಘ ಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ಎರಡನೇ ಬಾರಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆದಿದ್ದು ಮತ್ತೊಮ್ಮೆ ಟೀಕೆಗಳು ರಿಪೀಟ್ ಆಗಿದೆ. ಗೌರಿ ಅಭಿಮಾನಿಗಳು ಮೋದಿ, ಸಂಘ ಪರಿವಾರದ ವಿರುದ್ಧ ಟೀಕೆ ಮಾಡಿದರೂ ಸರ್ಕಾರಕ್ಕೆ ಚುನಾವಣೆಯ ಒಳಗಡೆ ಹಂತಕರನ್ನು ಬಂಧಿಸಲೇಬೇಕಾದ ಅನಿವಾರ್ಯತೆಯಲ್ಲಿದೆ. ಒಂದು ವೇಳೆ ಬಂಧನವಾಗದೇ ಇದ್ದರೆ ಚುನಾವಣೆಯಲ್ಲೂ ಈ ವಿಚಾರ ಪ್ರಚಾರದ ವಸ್ತುವಾಗಿ ರಾಜಕೀಯ ಪಕ್ಷಗಳ ವಾಕ್ಸಮರಕ್ಕೆ ಕಾರಣವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದನ್ನೂ ಓದಿ: ಗೌರಿಯನ್ನು ಮೌನ ಮಾಡಿದಾಗ ನಾನು, ನನ್ನಂತಹ ಹಲವರು ಹುಟ್ಟುತ್ತಾರೆ: ಪ್ರಕಾಶ್ ರೈ

ಗೌರಿ ಹತ್ಯೆ ಹಾಗೂ ಮೋದಿ ಸರ್ಕಾರಕ್ಕೆ ಏನು ಸಂಬಂಧ ಎನ್ನುವುದನ್ನು ಯಾವುದೇ ಭಾಷಣಕಾರರೂ ತಿಳಿಸುವ ಯತ್ನ ಮಾಡಲಿಲ್ಲ. ಜೊತೆಗೆ ರಾಜ್ಯ ಸರ್ಕಾರವನ್ನು, ವಿಚಾರಣೆ ನಡೆಸುತ್ತಿರುವ ಎಸ್‍ಐಟಿಯನ್ನೂ ಪ್ರಶ್ನಿಸಲಿಲ್ಲ ಎನ್ನುವುದು ಮಾತ್ರ ವಿಪರ್ಯಾಸದ ವಿಚಾರ. ಇದನ್ನೂ ಓದಿ: `ಗೌರಿ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದ ಸಹೋದರ ಇಂದ್ರಜಿತ್ ಲಂಕೇಶ್

Gauri Day 4

Gauri Day 1

Gauri Day 5

Gauri Day 4

Gauri Day 3

Gauri Day 2

TAGGED:bengaluruDoreswamyGauri Daygauri lankesh murderKavita LankeshPrakash Raiprime minister modiPublic TVಕವಿತಾ ಲಂಕೇಶ್ಗೌರಿ ದಿನಗೌರಿ ಲಂಕೇಶ್ ಹತ್ಯೆದೊರೆಸ್ವಾಮಿಪಬ್ಲಿಕ್ ಟಿವಿಪ್ರಕಾಶ್ ರೈಪ್ರಧಾನಿ ಮೋದಿಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
6 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
17 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
49 minutes ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
55 minutes ago
byadarahalli Crime
Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
By Public TV
1 hour ago
karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?