ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಆರೋಪಿಗಳನ್ನು ಮುಂಬೈ ಜೈಲಿನಿಂದ ಬಾಡಿ ವಾರಂಟ್ ಮೇಲೆ ಹುಬ್ಬಳ್ಳಿಗೆ ಕರೆ ತಂದಿದ್ದ ಗ್ರಾಮೀಣ ಠಾಣೆ ಪೊಲೀಸರು, ವಿಚಾರಣೆ ಮುಗಿದ ನಂತರ ಬೈಕ್ ಮಹಜರು ನಡೆಸಲು ಠಾಣೆಗೆ ಕರೆದೊಯ್ದರು. ಇದನ್ನೂ ಓದಿ: ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ
ಗೌರಿ ಹತ್ಯೆ ಪ್ರಕರಣದಲ್ಲಿ ಬೈಕ್ ಬಳಸಲಾಗಿತ್ತು. ಆ ಬೈಕನ್ನು ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಇದನ್ನೂ ಓದಿ: ಕೊರೊನಾ ನಿಯಂತ್ರಿಸಲು ಸರ್ಕಾರವೊಂದಕ್ಕೇ ಸಾಧ್ಯವಿಲ್ಲ, ಜನರು ಸಹ ಮುನ್ನೆಚ್ಚರಿಕೆ ವಹಿಸಬೇಕು: ಡಾ.ಕೆ. ಸುಧಾಕರ್
ಮಧ್ಯಾಹ್ನ 3 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನಂತರ ಮುಂಬೈಗೆ ಕಳುಹಿಸಲಾಗುವುದು ಎಂದು ಗ್ರಾಮೀಣ ಠಾಣೆ ಸಿಪಿಐ ರಮೇಶ ತಿಳಿಸಿದ್ದಾರೆ.