ವಿಜಯಪುರ: ನನ್ನ ಮಗ ಯಾವುದೇ ತಪ್ಪು ಮಾಡಲಿಲ್ಲ. ವಿನಾಕಾರಣ ನನ್ನ ಮಗನನ್ನು ಬಂಧಿಸಿದ್ದಾರೆ. ಶ್ರೀರಾಮ ಸೇನೆ ಮತ್ತು ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದಕ್ಕೆ ಈ ರೀತಿ ಮಾಡಿದ್ದಾರೆ. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತವಾಗಿರುವ ಅರೋಪಿ ಪರಶುರಾಮ ವಾಗ್ಮೋರೆ ಪೋಷಕರು ಹೇಳಿದ್ದಾರೆ.
ಈ ಕುರಿತು ಪಬ್ಲಿಕ್ ಟಿವಿಗೆ ಯೊಂದಿಗೆ ಮಾತನಾಡಿದ ಅವರು, ನಾವು ಕೂಲಿ ನಾಲಿ ಮಾಡಿ ಬದುಕು ಜನ. ನನ್ನ ಮಗ ಕೊಲೆ ಮಾಡುವಂತಹ ವ್ಯಕ್ತಿಯಲ್ಲ. ಭಾನುವಾರ ಬೆಳಿಗ್ಗೆ 9 ಗಂಟೆಗೆ ಎಸ್ ಐಟಿ ತಂಡ ಹಾಗೂ ಕೆಲ ಸ್ಥಳೀಯ ಪೊಲೀಸ್ ಮನೆಗೆ ಬಂದು ಪಾಕಿಸ್ತಾನ ಧ್ವಜ ಹಾರಿಸಿದ ಬಗ್ಗೆ ವಿಚಾರಣೆಗೆ ಕರೆದೊಯ್ಯುವುದಾಗಿ ತಮ್ಮ ಮಗನನ್ನು ಕರೆಕೊಡು ಹೋದರು ಎಂದು ತಿಳಿಸಿದರು.
- Advertisement 2-
- Advertisement 3-
ಎಸ್ ಐಟಿ ತಂಡ ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ತಿಳಿದಿಲ್ಲ. ಈ ಕುರಿತು ಇಂದು ಮಧ್ಯಾಹ್ನ ಎಸ್ ಐಟಿ ಡಿವೈಎಸ್ ಪಿ, ಪರಶುರಾಮ ಜೊತೆ ನಮ್ಮ ಸಂಬಂಧಿ ಅಶೋಕ ಕಾಂಬ್ಳೆ ಅವರೊಂದಿಗೆ ಮಾತನಾಡಿಸಿದ್ದಾರೆ. ಆಗ ನನ್ನನ್ನ ವಿಚಾರಣೆಗಾಗಿ ಕರೆತಂದಿದ್ದಾರೆ ನೀವು ಬೆಂಗಳೂರಿಗೆ ಬನ್ನಿ ಎಂದು ಹೇಳಿದ್ದು, ಆದರೆ ಈ ಪ್ರಕರಣದಲ್ಲಿ ಅರೋಪಿ ಮಾಡಿದ್ದಾರೆ ಎಂಬುವುದು ಮಾಧ್ಯಮದಿಂದಲೇ ಗೊತ್ತಾಗಿದ್ದು ಎಂದು ತಿಳಿಸಿದರು.
- Advertisement 4-
ನ್ಯಾಯಾಲಯದ ಮೇಲೆ ನಂಬಿಕೆ ಇದ್ದು, ಪ್ರಕರಣದಲ್ಲಿ ತಮ್ಮ ಮಗ ಖುಲಾಸೆ ಹೊರ ಬರುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನು ಓದಿ: ಪತ್ರಕರ್ತೆ ಗೌರಿಲಂಕೇಶ್ ಹತ್ಯೆಗೈದ ಶಂಕಿತ ಶೂಟರ್ ಅರೆಸ್ಟ್!