Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗೌರಿ ಕೇಸ್ – ಶಂಕಿತ ಆರೋಪಿ ಹೊಟ್ಟೆ ಮಂಜನಿಗೆ ಮಂಪರು ಪರೀಕ್ಷೆ- ಏನಿದು ಪರೀಕ್ಷೆ? ಹೇಗೆ ಮಾಡುತ್ತಾರೆ? ಇಲ್ಲಿದೆ ಪೂರ್ಣ ವಿವರ

Public TV
Last updated: March 12, 2018 8:05 pm
Public TV
Share
2 Min Read
Gauri Lankesh Murder Case
SHARE

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಬಂಧ ಬಂಧನಕ್ಕೆ ಒಳಗಾಗಿರುವ ಶಂಕಿತ ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ನ್ಯಾಯಾಲಯ ಅನುಮತಿ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಆರೋಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿಶೇಷ ತನಿಖಾ ತಂಡ ಮನವಿ ಮಾಡಿತ್ತು. ಮನವಿಯನ್ನು ಪುರಸ್ಕರಿಸಿದ ಮೂರನೇ ಎಸಿಎಂಎಂ ಕೋರ್ಟ್ ಮಂಪರು ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

67654 kgrcfcrbnp 1504626192

ವಿಚಾರಣೆ ವೇಳೆ ನ್ಯಾಯಾಧೀಶರು, ನಿನ್ನ ಮಂಪರು ಪರೀಕ್ಷೆಗೆ ಒಪ್ಪಿಗೆ ಇದ್ಯಾ ಎಂದು ನವೀನ್‍ಗೆ ಕೇಳಿದರು. ಇದಕ್ಕೆ ಒಪ್ಪಿಗೆ ಇದೆ ಆರೋಗ್ಯಕ್ಕೆ ಏನಾದ್ರೂ ಪರಿಣಾಮ ಬೀರುತ್ತಾ ಎಂದು ಪ್ರಶ್ನೆ ಮಾಡಿದ್ದಾನೆ. ಕೂಡಲೇ ಜಡ್ಜ್ ಅಂತಹ ಪರಿಸ್ಥಿತಿ ಬರುವುದಿಲ್ಲ ಎಂದು ಹೇಳಿದರು. ಕೂಡಲೇ ನವೀನ್, ಆರೋಗ್ಯದಲ್ಲಿ ತೊಂದರೆ ಆಗುವುದಿಲ್ಲ ಎಂದರೆ ಮಂಪರು ಪರೀಕ್ಷೆಗೆ ಒಪ್ಪಿಗೆ ನೀಡುತ್ತೇನೆ ಎಂದು ಹೇಳಿದ.

ನವೀನ್ ಪರ ವಕೀಲರ ಸಮಕ್ಷಮದಲ್ಲಿ ಅಹಮದಾಬಾದ್ ನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಮಂಪರು ಪರೀಕ್ಷೆ ನಡೆಯಲಿದೆ.

gauri lankesh case 3

ಮಂಪರು ಪರೀಕ್ಷೆ ಹೇಗೆ ನಡೆಯುತ್ತೆ?
ಯಾವುದೇ ವ್ಯಕ್ತಿಗೆ ಮಂಪರು ಪರೀಕ್ಷೆ ನಡೆಸಲು ನ್ಯಾಯಾಲಯದ ಅನುಮತಿ ತೆಗೆದುಕೊಳ್ಳಬೇಕಾಗುತ್ತದೆ. ಅನುಮತಿ ದೊರೆತ ಬಳಿಕ ಆರೋಪಿಗೆ ಕೇಳ ಬೇಕಾದ ಪ್ರಶ್ನೆಗಳ ಕುರಿತು ಪಟ್ಟಿ ಮಾಡಿಕೊಳ್ಳಲಾಗುತ್ತದೆ. ಈ ಪ್ರಶ್ನೆಗಳ ಪಟ್ಟಿಯಲ್ಲಿ ಎರಡು ವಿಧಗಳಿದ್ದು ಮೊದಲಿಗೆ ಆತನ ಹೆಸರು, ಊರು ಎಂಬ ಸಾಮಾನ್ಯ ಮಾಹಿತಿ ಪಡೆಯಲಾಗುತ್ತದೆ. ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಕುರಿತು ಪ್ರಶ್ನೆಗಳನ್ನು ಸಿದ್ಧಪಡಿಸಲಾಗುತ್ತದೆ.

ಮಂಪರು ಪರೀಕ್ಷೆಯನ್ನು ವೈದ್ಯರು, ಮನಶಾಸ್ತ್ರಜ್ಞರು ಸಮ್ಮುಖದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಮಾಡಲಾಗುತ್ತದೆ. ಇದಕ್ಕೂ ಮುನ್ನ ಆರೋಪಿಯ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ. ನಂತರ ಆತನ ದೇಹದ ಆರೋಗ್ಯದ ಸಾಮರ್ಥ್ಯದ ಮೇಲೆ ವೈದ್ಯರು ಸೋಡಿಯಂ ಪೆಂಟೋಥಲ್ ಇಂಜೆಕ್ಷನ್ ಮೂಲಕ ನೀಡುತ್ತಾರೆ. ಆರೋಪಿಯ ಲಿಂಗ, ವಯಸ್ಸು, ದೇಹ ಸಾಮರ್ಥ್ಯ, ಆರೋಗ್ಯ ಇವುಗಳನ್ನು ನೋಡಿಕೊಂಡು ನಿಗಧಿತ ಪ್ರಮಾಣದಲ್ಲಿ ನೀಡಲಾಗುತ್ತದೆ. ಸರಿಯಾಗಿ ಪರೀಕ್ಷೆ ನಡೆಸದೇ ಜಾಸ್ತಿ ಪ್ರಮಾಣದಲ್ಲಿ ಸೋಡಿಯಂ ಪೆಂಟೋಥಲ್ ನೀಡಿದರೆ ರೋಗಿ ಕೋಮಾಕ್ಕೆ ಜಾರುವ ಸಾಧ್ಯತೆ ಇರುತ್ತದೆ.

ಈ ಡೋಸ್ ನೀಡಿದ ಬಳಿಕ ಆರೋಪಿ ನಿದ್ರಾವಸ್ಥೆಗೆ ಜಾರುವ ಹಂತದ ಮೊದಲಿನ ಹಂತಕ್ಕೆ ಬಂದಾಗ ನಿಧಾನವಾಗಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಸಾಧಾರಣವಾಗಿ ನಿದ್ದೆಯ ಮಂಪರಿನಲ್ಲಿದ್ದ ವ್ಯಕ್ತಿಗೆ ಏನು ಕೇಳಿದರೂ ಆತ ಸತ್ಯ ಹೇಳುತ್ತಾನೆ. ಹೀಗಾಗಿ ಈ ಹಂತದಲ್ಲಿದ್ದ ಆರೋಪಿ ನಿದ್ದೆಗೆ ಜಾರದಂತೆ ಮೊದಲೇ ನಿಗದಿ ಪಡಿಸಿದ ಪ್ರಮಾಣದಲ್ಲಿ ಸೋಡಿಯಂ ಪೆಂಟೋಥಲ್ ಡೋಸ್ ಅನ್ನು ನಿಮಿಷ, ನಿಮಿಷ ಗಳ ಅಂತರದಲ್ಲಿ ಸ್ವಲ್ಪ ಸ್ವಲ್ಪ ನೀಡಲಾಗುತ್ತದೆ.

ಯಾರಿಗೆ ಮಾಡಬಹುದು?
ಯಾವುದೇ ವ್ಯಕ್ತಿಗೆ ಮಂಪರು ಪರೀಕ್ಷೆ ನಡೆಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ಬಿಪಿ ಇರುವಂತಹ ವ್ಯಕ್ತಿಗಳಿಗೂ ಪರೀಕ್ಷೆ ನಡೆಸಬಹುದು. ಈ ವೇಳೆ ಆರೋಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ತಿಳಿದಿರುವ ಪೂರ್ಣ ಮಾಹಿತಿಯನ್ನು ತಿಳಿಸುತ್ತಾನೆ. ಯಾವುದೇ ಮಾಹಿತಿಯನ್ನು ಹೇಳದಿರಲು ಈ ಸ್ಥಿತಿಯಲ್ಲಿ ಆತನಿಗೆ ಸಾಧ್ಯವಿರುವುದಿಲ್ಲ. ಆತನಿಂದ ಮಾಹಿತಿ ಪಡೆಯುವ ಪ್ರತಿಯೊಂದು ಅಂಶವನ್ನು ವಿಡಿಯೋ ಹಾಗೂ ಧ್ವನಿ ಮುದ್ರಣವನ್ನು ಮಾಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗುತ್ತದೆ.

gujarat forensic science university

ಅಹಮದಬಾದ್ ನಲ್ಲಿ ಏಕೆ?
ಈ ಹಿಂದೆ ಛಾಪಾ ಕಾಗದ ಹಗರಣದಲ್ಲಿ ಸಿಕ್ಕಿಬಿದ್ದ ಕರೀಂ ಲಾಲ್ ತೆಲಗಿ ಸೇರಿದಂತೆ 350 ಕ್ಕೂ ಹೆಚ್ಚು ಆರೋಪಿಗಳನ್ನು ಬೆಂಗಳೂರಿನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಗುಜರಾತ್ ವಿಧಿವಿಜ್ಞಾನ ವಿಶ್ವವಿದ್ಯಾಲಯ 2008ರಲ್ಲಿ ಆರಂಭಗೊಂಡಿದೆ. ವಿಧಿವಿಜ್ಞಾನ ಕ್ಷೇತ್ರದ ಅಧ್ಯಯನಕ್ಕೆ ಸಂಬಂಧಿಸಿದಂತೆ ಆರಂಭಗೊಂಡ ವಿಶ್ವದ ಮೊದಲ ವಿಶ್ವವಿದ್ಯಾಲಯ ಎನ್ನುವ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.

https://www.youtube.com/watch?v=yGCm67SXFx8

TAGGED:accusedbengalurucourtGauri Lankesh murder caseNarco Analysis TestpolicePublic TVಆರೋಪಿಗೌರಿ ಲಂಕೇಶ್ ಹತ್ಯೆನ್ಯಾಯಾಲಯಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಮಂಪರು ಪರೀಕ್ಷೆ
Share This Article
Facebook Whatsapp Whatsapp Telegram

Cinema Updates

Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
35 minutes ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
1 hour ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
2 hours ago
rachita ram kamal haasan
ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ
2 hours ago

You Might Also Like

mangaluru rain deaths
Dakshina Kannada

ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ

Public TV
By Public TV
30 minutes ago
D.K Shivakumar
Bengaluru City

ಕರಾವಳಿ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪಕ್ಷದಿಂದ ಪ್ರತ್ಯೇಕ ತಂಡ: ಡಿ.ಕೆ ಶಿವಕುಮಾರ್

Public TV
By Public TV
32 minutes ago
kea
Bengaluru City

ಮೇ 31ಕ್ಕೆ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ – ಕೆಇಎ

Public TV
By Public TV
2 hours ago
Guest Lecturer 1
Bengaluru City

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ – ಸರ್ಕಾರದಿಂದ ಆದೇಶ

Public TV
By Public TV
2 hours ago
Shobha Karandlaje 2
Bengaluru City

ಎಲ್ಲ ಗ್ಯಾರಂಟಿ ಕೊಟ್ಟರು, ಪ್ರಾಣದ ಗ್ಯಾರಂಟಿ ಕೊಡ್ತಿಲ್ಲ: ಶೋಭಾ ಕರಂದ್ಲಾಜೆ ಕೆಂಡಾಮಂಡಲ

Public TV
By Public TV
2 hours ago
Shobha Karandlaje 1
Bengaluru City

ಕಮಲ್ ಹಾಸನ್ ಚಾಲ್ತಿಯಲ್ಲಿಲ್ಲದ ನಾಣ್ಯ, ವ್ಯಾಲ್ಯೂ ಇಲ್ಲ: ಶೋಭಾ ಕರಂದ್ಲಾಜೆ ವ್ಯಂಗ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?