ಕೊಪ್ಪಳ: ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸ್ವಚ್ಛತಾ ಕೆಲಸ ಮಾಡಿದ ಪೌರ ಕಾರ್ಮಿಕರಿಗೆ ಸ್ವಾಮೀಜಿಗಳು ಉಪಹಾರ ಬಡಿಸಿದ್ದಾರೆ.
ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಪೌರ ಕಾರ್ಮಿಕರ ಕೆಲಸ ಮೆಚ್ಚಿ ತಾವೇ ಸ್ವತಃ ಉಪಹಾರ ಬಡಿಸುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ಕಳೆದ ಒಂದು ವಾರದಿಂದ ಜಾತ್ರೆಯಲ್ಲಿ ಸ್ವಚ್ಛತೆ ಕಾಪಾಡಿದ ಪೌರ ಕಾರ್ಮಿಕರಿಗೆ ಶ್ರೀಗಳು ಅಭಿನಂದನೆ ಸಲ್ಲಿಸಿದರು.
- Advertisement 2
- Advertisement 3
ಇಂದು ಸ್ವತಃ ಶ್ರೀಗಳು ಬಂದು ಉಪಹಾರ ಬಡಿಸಿದ್ದು ಕಂಡು ಪೌರ ಕಾರ್ಮಿಕರ ಖುಷಿಗೆ ಪಾರವೇ ಇರಲಿಲ್ಲ. ಸುಮಾರು ಮೂವತ್ತಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ಉಪಹಾರ ಬಡಿಸಿದರು.
- Advertisement 4