ಲಕ್ನೋ: ರಾಷ್ಟ್ರರಾಜಧಾನಿಯಲ್ಲಿಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ತನ್ನೊಂದಿಗೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ (Live In Relationship) ಗೆಳತಿಯನ್ನ ಕೊಂದು 35 ತುಂಡುಗಳಾಗಿ ಕತ್ತರಿಸಿ, ವಿವಿಧ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿ ಮನೆಯೊಳಗೆ ಹೂತು ಹಾಕಿದ್ದ ಮಹಿಳೆಯನ್ನು ಗಾಜಿಯಾಬಾದ್ ಪೊಲೀಸರು (Ghaziabad Police) ಬಂಧಿಸಿರುವ ಘಟನೆಯೂ ಬೆಳಕಿಗೆ ಬಂದಿದೆ.
ನಾಲ್ಕು ವರ್ಷಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸೋಮವಾರ ಆರೋಪಿ ಸವಿತಾ ಹಾಗೂ ಪ್ರಿಯಕರ ಅರುಣ್ ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ದೆಹಲಿಯ ಭಯಾನಕ ಕೃತ್ಯಕ್ಕೆ ಅಮೆರಿಕದ ಥ್ರಿಲ್ಲರ್ `ಡೆಕ್ಸ್ಟರ್’ ಸ್ಫೂರ್ತಿ – ರೋಚಕ ಸತ್ಯ ಬಯಲು
ಏನಿದು ಮರ್ಡರ್ ಮಿಸ್ಟ್ರಿ?
ಕಳೆದ ನಾಲ್ಕು ವರ್ಷಗಳ ಹಿಂದೆ ಆರೋಪಿ ಸವಿತಾ ತನ್ನ ಪ್ರಿಯಕರ ಅರುಣ್ ಜೊತೆ ಸೇರಿಕೊಂಡು ಪತಿ ಚಂದ್ರವೀರ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾಳೆ. ಬಳಿಕ ತುಂಡುತುಂಡಾಗಿ ಕತ್ತರಿಸಿ ಶವವನ್ನು ಚಂದ್ರವೀರ್ನ ಮನೆಯೊಳಗೆ 7 ಅಡಿ ಗುಂಡಿ ತೋಡಿ ಹೂತು ಹಾಕಲಾಗಿತ್ತು. ಶವದ ಕೊಳೆತ ದುರ್ವಾಸನೆ ಬರಬಾರದು ಎಂದು 7 ಅಡಿ ಗುಂಡು ತೆಗೆದು ಹೂತು ಹಾಕಿದ್ದರು. ಆದರೂ ಏನೂ ಆಗಿಲ್ಲವೆಂಬಂತೆ ಅದೇ ಮನೆಯಲ್ಲಿ ವಾಸವಾಗಿದ್ದರು.
ಕೃತ್ಯ ಎಸಗುವುದಕ್ಕೂ ಮುನ್ನ ಚಂದ್ರವೀರ್ ಮನೆಯಲ್ಲಿ ಏಳು ಅಡಿಯ ಗುಂಡಿ ತೋಡಲಾಗಿತ್ತು. ಬಳಿಕ ಗಂಡನನ್ನು ಅಪಹರಣ ಮಾಡಿ ಗುಂಡಿಕ್ಕಿ ಕೊಲೆ ಮಾಡಿ, ಹೂತು ಹಾಕಿದ್ದಾರೆ. ಬಳಿಕ ಸವಿತಾ ಈ ಕೃತ್ಯವನ್ನು ತನ್ನ ಸಹೋದರನ ಮೇಲೆ ಹೊರಿಸಿದ್ದಳು. ಇದನ್ನೂ ಓದಿ: ಕಾಮೋತ್ತೇಜಕ ಮಾತ್ರೆ ಸೇವಿಸಿ ರೇಪ್ – ವಿಪರೀತ ರಕ್ತಸ್ರಾವದಿಂದ ಗೆಳತಿ ಸಾವು
ಇದೀಗ 4 ವರ್ಷಗಳ ಬಳಿಕ ಪ್ರಕರಣ ಬಯಲಾಗಿದ್ದು, ಹೂತು ಹಾಕಿದ್ದ ಜಾಗದಿಂದ ಪೊಲೀಸರು (Police) ಮೃತದೇಹವನ್ನು ಹೊರತೆಗೆದಿದ್ದಾರೆ. ಕೃತ್ಯಕ್ಕೆ ಬಳಸಲಾಗಿದ್ದ ಆಯುಧಗಳನ್ನು ಮುಟ್ಟುಗೋಲು ಹಾಕಲಾಗಿದೆ. ಒಂದು ಪಿಸ್ತೂಲು ಹಾಗೂ ಕೊಡಲಿಯನ್ನು ವಶಪಡಿಸಿಕೊಳ್ಳಲಾಗಿದೆ.