ಹಿರೇಕಲ್ಮಠದ ಗಿರಿಸಿದ್ದೇಶ್ವರ್ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Public TV
1 Min Read
Davanagere Hirekalmath Girisiddeshwar Shivacharya Swamiji

ದಾವಣಗೆರೆ: ಕಿಡ್ನಿ ವೈಫಲ್ಯದಿಂದ (Kidney Failure) ಬಳಲುತ್ತಿದ್ದ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೊಟ್ಯಾಪುರ ಹಿರೇಕಲ್ಮಠದ ಶ್ರೀ ಗಿರಿಸಿದ್ದೇಶ್ವರ್ ಶಿವಾಚಾರ್ಯ ಸ್ವಾಮೀಜಿ (Girisiddeshwar Shivacharya Swamiji) (62) ಸೋಮವಾರ ಬೆಳಗ್ಗೆ ಲಿಂಗಕ್ಯರಾಗಿದ್ದಾರೆ.

Davanagere Hirekalmath Girisiddeshwar Shivacharya Swamiji 1

ಹೊನ್ನಾಳಿ ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಅಪಾರ ಪ್ರಮಾಣದ ಭಕ್ತ ಗಣ ಹೊಂದಿರುವ ಸ್ವಾಮೀಜಿ ಕೆಲ ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳುತ್ತಿದ್ದರು. ಈ ಹಿನ್ನೆಲೆ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೆ ಡಯಾಲಿಸಿಸ್‌ಗೆ ಒಳಪಟ್ಟಿದ್ದು, ವಾತಾವರಣ ತಂಪು ಇದ್ದ ಹಿನ್ನೆಲೆ ಸೋಂಕು ಹೆಚ್ಚಾಗಿ ಅವರ ಸ್ಥಿತಿ ಗಂಭೀರವಾಗಿತ್ತು. ಇದನ್ನೂ ಓದಿ: ಉಚಿತವಾಗಿ ಕೊತ್ತಂಬರಿ ಸೊಪ್ಪು ವಿತರಿಸಿದ ಸಿದ್ದರಾಮಯ್ಯ ಅಭಿಮಾನಿ

ಇಂದು ಬೆಳಗ್ಗೆ ಅವರು ಆಸ್ಪತ್ರೆಯಲ್ಲಿ ಲಿಂಗಕ್ಯರಾಗಿದ್ದು, ಸ್ವಾಮೀಜಿಗಳ ಪಾರ್ಥಿವ ಶರೀರವನ್ನು ಹೊಟ್ಯಾಪುದ ಹಿರೇಕಲ್ಮಠಕ್ಕೆ ತಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಹೊಟ್ಯಾಪುರ ಮಠದಲ್ಲಿ ನೀರವ ಮೌನ ಅವರಿಸಿದ್ದು, ಮಠಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಇನ್ನು ಮಠದ ಆವರಣದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಧಿ ವಿಧಾನಗಳು ನಡೆಯಲಿದೆ. ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಟಿ ಕೋಳಿ ಕಳ್ಳರು!

Web Stories

Share This Article