ವಿಜಯಪುರ: ವೈದ್ಯನ ಚುಚ್ಚುಮದ್ದಿಗೆ ಬಾಲಕಿ ಸಾವು

Public TV
1 Min Read
BIJ CHAILD

ವಿಜಯಪುರ: ವೈದ್ಯನ ಎಡವಟ್ಟಿನಿಂದ ಬಾಲಕಿ ಸಾನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ನಡೆದಿದೆ.

8 ವರ್ಷದ ರೂಪಾ ರಾಮಣ್ಣ ಬಂಡಿವಡ್ಡರ ಮೃತಪಟ್ಟಿರುವ ಬಾಲಕಿ. ಅಲಮೇಲ ಪಟ್ಟಣದ ನಿವಾಸಿ ರಾಮು ಬಂಡಿವಡ್ಡರ ಎಂಬವರು ಮಗಳು. ಮೂರು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದಳು.

vlcsnap 2017 11 17 09h13m18s735

ತೀವ್ರ ಜ್ವರದಿಂದ ಬಳಲುತ್ತಿದ್ದ ತಮ್ಮ ಮಗಳು ರೂಪಾಳನ್ನು ಪೋಷಕರು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯ ಚಂದ್ರಶೇಖರ ರೂಪಾಗೆ ಚುಚ್ಚುಮದ್ದು ನೀಡಿದ್ದಾನೆ. ಆದರೆ ಚುಚ್ಚುಮದ್ದು ವ್ಯತಿರಿಕ್ತ ಪರಿಣಾಮ ಬೀರಿ ಬಾಲಕಿ ರೂಪಾ ಇಂದು ಸಾವನ್ನಪ್ಪಿದ್ದಾಳೆ. ರೂಪಾಳನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಹಿನ್ನೆಲೆಯಲ್ಲಿ ಆಲಮೇಲ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ದೂರು ನೀಡಲಾಗಿದೆ. ಆದರೆ ಎಡವಟ್ಟು ಮಾಡಿದ ವೈದ್ಯ ಪರಾರಿಯಾಗಿದ್ದಾನೆ.

ಇದನ್ನು ಓದಿ: ವೈದ್ಯರ ನಿರ್ಲಕ್ಷ್ಯಕ್ಕೆ ರಾತ್ರಿ ಮತ್ತೊಂದು ಮಗು ಸಾವು – ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆ

vlcsnap 2017 11 17 09h15m07s031

vlcsnap 2017 11 17 09h16m17s495

vlcsnap 2017 11 17 09h15m54s490

vlcsnap 2017 11 17 09h15m39s764

vlcsnap 2017 11 17 09h14m55s973

vlcsnap 2017 11 17 09h14m50s176

vlcsnap 2017 11 17 09h14m45s569

vlcsnap 2017 11 17 09h14m39s605

Share This Article
Leave a Comment

Leave a Reply

Your email address will not be published. Required fields are marked *