ಕಲಬುರಗಿ: ಕಟ್ಟಿಗೆ ತರಲು ಹೊಲಕ್ಕೆ ಹೋದಾಗ ಹಾವು ಕಚ್ಚಿ (Snakebite) ಬಾಲಕಿ (Girl) ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ.
ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ (16) ವಿಷ ಜಂತು ಕಡಿತಕ್ಕೆ ಪ್ರಾಣ ಕಳೆದುಕೊಂಡ ಬಾಲಕಿ.
ಪೂಜಾ ಗ್ರಾಮದಲ್ಲಿ ಕಟ್ಟಿಗೆ ತರಲೆಂದು ಹೊಲಕ್ಕೆ ತೆರಳಿದ್ದಾಗ ಹಾವು ಕಚ್ಚಿದೆ. ದುರ್ಘಟನೆಯಿಂದ ಪೂಜಾ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಖಾಸಗಿ ಬಸ್, ಇನ್ನೋವಾ ಭೀಕರ ಅಪಘಾತ- 10 ಮಂದಿ ದುರ್ಮರಣ