ಮಡಿಕೇರಿ: ಮುದ್ದಿನ ಸಾಕು ನಾಯಿಯೊಂದಿಗೆ ಆಟವಾಡುತ್ತಿದ್ದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಕೆರೆಯೊಳಗೆ ಬಿದ್ದು ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಮೀಪದ 7ನೇ ಹೊಸಕೋಟೆಯಲ್ಲಿ ನಡೆದಿದೆ.
ಭಾರತಿ(13) ಮೃತ ಬಾಲಕಿ. ಭಾರತಿ ಗ್ರಾಮದ ರಂಜನ್ ಎಂಬವರ ತೋಟದಲ್ಲಿ ಕಾರ್ಮಿಕರಾಗಿರುವ ಚೋಮ ಎಂಬವರ ಪುತ್ರಿಯಾಗಿದ್ದು, ನಾಯಿಯೊಂದಿಗೆ ಆಟವಾಡುತ್ತಾ ಕೆರೆಗೆ ಬಿದ್ದಿದ್ದಾಳೆ.
- Advertisement 2
- Advertisement 3
ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ತೋಟದ ಲೈನ್ ಮನೆಯ ಪಕ್ಕದಲ್ಲಿ ಮುದ್ದಿನ ಸಾಕು ನಾಯಿಯೊಂದಿಗೆ ಆಟವಾಡುತ್ತಿದ್ದಳು. ಆಟದ ನಡುವೆ ಭಾರತಿಯನ್ನು ನಾಯಿ ಓಡಿಸಿಕೊಂಡು ಹೋಗಿದೆ. ಆಟವಾಡುತ್ತಿದ್ದ ಜಾಗದ ಒತ್ತಿನಲ್ಲಿ ಇಳಿಜಾರಿನಿಂದ ಕೂಡಿದ ಪ್ರದೇಶದಲ್ಲಿ ಕೆರೆಯೊಂದಿದ್ದು ನಾಯಿಯ ಕೈಗೆ ಸಿಗದಂತೆ ಭಾರತಿ ಓಡಿದ್ದಳು.
- Advertisement 4
ಭಾರತಿ ನಿಯಂತ್ರಣ ಕಳೆದುಕೊಂಡು ಅದರೊಳಗೆ ಜಾರಿ ಬಿದ್ದಿದ್ದಾಳೆ. ನಂತರ ಮೇಲಕ್ಕೆ ಬರಲಾಗದೇ ಮೃತಪಟ್ಟಿದ್ದಾಳೆ. ಕುಶಾಲನಗರ ಆಸ್ಪತ್ರೆಯಲ್ಲಿ ಬಾಲಕಿಯ ಮೃತ ದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಸಂಬಂಧಿಕರಿಗೆ ಒಪ್ಪಿಸಲಾಗಿದೆ.