ಜೋಕಾಲಿ ಆಡಲು ಹೋಗಿ ಬಾಲಕಿ ದುರ್ಮರಣ

Public TV
0 Min Read
CKM 1

ಚಿಕ್ಕಮಗಳೂರು: ಜೋಕಾಲಿ ಆಡಲು ಹೋಗಿ ಬಾಲಕಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ನಡೆದಿದೆ.

ನಿಸರ್ಗ (9) ಮೃತ ಬಾಲಕಿ. ನಿಸರ್ಗ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲಿಯೇ ಇದ್ದಳು. ಸಂಜೆ ವೇಳೆ ಸೀರೆಯಲ್ಲಿ ಉಯ್ಯಾಲೆ ಕಟ್ಟಿಕೊಂಡು ಆಡುವಾಡುತ್ತಿದ್ದಳು.

ಈ ವೇಳೆ ಬಾಲಕಿಯ ಕತ್ತಿಗೆ ಸೀರೆ ಸುತ್ತಿಕೊಂಡಿದೆ. ಪರಿಣಾಮ ನಿಸರ್ಗ ಕುತ್ತಿಗೆ ಬಿಗಿದು ಉಸಿರುಗಟ್ಟಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ತಕ್ಷಣ ಮನೆಯವರು ಸೀರೆ ಬಿಡಿಸಲು ಮುಂದಾಗಿದ್ದು, ಬಾಲಕಿಯನ್ನು ಕಾಪಾಡಿದ್ದಾರೆ. ಆದರೆ ಅಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಳು.

ಈ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *