ಚಾಮರಾಜನಗರ: ಸೀಬೆ ಹಣ್ಣು ಕೀಳಲು ಹೋಗಿ ಇಬ್ಬರು ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ.
ಪೂಜಾ (10) ಪುಣ್ಯ (15) ಮೃತ ಬಾಲಕಿಯರು. ಈ ಇಬ್ಬರು ದುರ್ದೈವಿಗಳು ರೇಚಣ್ಣ ಎಂಬವರ ಪುತ್ರಿಯರಾಗಿದ್ದಾರೆ. ಇಂದು ಬೆಳಗ್ಗೆ ತಿಂಡಿ ತಿಂದು ಬಳಿಕ ಸೀಬೆ ಹಣ್ಣು ಕೀಳಲೆಂದು ಜಮೀನಿಗೆ ತೆರಳಿದ್ದಾರೆ. ಅಲ್ಲದೆ ಸೀಬೆ ಮರ ಹತ್ತಿ ಹಣ್ಣು ಕೀಳುತ್ತಿರುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ.
ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.