ದಾವಣಗೆರೆ: ಸಾಮಾನ್ಯವಾಗಿ ಹುಡುಗ-ಹುಡುಗಿ ನಡುವೆ ಪ್ರೀತಿ ಚಿಗುರುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ದಾವಣಗೆರೆ (Davanagere) ಯಲ್ಲಿ ವಿಚಿತ್ರ ಘಟನೆಯೊಂದು ನಡೆದು ಹೋಗಿದೆ.
ಪದವಿ ವ್ಯಾಸಂಗ ಮಾಡ್ತಿರುವ ಯುವತಿಯರಿಬ್ಬರ ನಡುವೆ ಪ್ರೀತಿ ಚಿಗುರಿದ್ದು, ಇದು ಸಲಿಂಗಕಾಮಕ್ಕೆ ತಿರುಗಿದೆ. ದುರಾದೃಷ್ಟ ಅಂದ್ರೆ ಆ ಯುವತಿಯು ಪರ ಯುವತಿಯೊಂದಿಗೆ ಮಾತನಾಡಿದ್ದಾಳೆ ಎಂಬ ಒಂದೇ ಕಾರಣಕ್ಕೆ ಸಲಿಂಗಕಾಮಿ (Homosexuality) ರೇಡಿಯಂ ಕಟರ್ನಿಂದ ಹಲ್ಲೆ ನಡೆಸಿ ಜೈಲು ಸೇರಿದ್ದಾಳೆ. ಇದನ್ನೂ ಓದಿ: ಗಾಜಿಯಾಬಾದ್ ಗ್ಯಾಂಗ್ ರೇಪ್ ಸುಳ್ಳು – ಕಥೆ ಕಟ್ಟಿದ ಮಹಿಳೆ
ಇದೀಗ ಯುವತಿಯ ಮೇಲೆ ರೇಡಿಯಂ ಕಟರ್ (Radium Cutter) ನಿಂದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಲಿಂಗ ಕಾಮವೇ ಹಲ್ಲೆಗೆ ಪ್ರಮುಖ ಕಾರಣ ಎಂದು ಪಬ್ಲಿಕ್ ಟಿವಿಗೆ ಎಸ್ಪಿಸಿಬಿ ರಿಷ್ಯಂತ್ ಸ್ಫೋಟಕ ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸತ್ಯ ಬಯಲಿಗಿದ್ದು, ದಾವಣಗೆರೆ ಶಾಂತಿ ನಗರದಲ್ಲಿ ಗುರುವಾರ ಸಂಜೆ ನಡೆಯಬಾರದ ಘಟನೆ ನಡೆದು ಹೋಗಿತ್ತು. ಇದನ್ನೂ ಓದಿ: ಗಂಡ-ಹೆಂಡತಿ ಜಗಳ ಬಿಡಿಸಲು ಬಂದ ನೆರೆಮನೆಯವನೇ ಕೊಲೆಯಾದ
ಲಾಸಿ ಎನ್ನುವ ಯುವತಿ, ಸ್ನೇಹ ಎನ್ನುವ ಯುವತಿಗೆ ರೇಡಿಯಂ ಕಟರ್ ನಿಂದ ಹಲ್ಲೆ ನಡೆಸಿ ತಾನು ಕೈ ಕುಯ್ದುಕೊಂಡಿದ್ದ ಘಟನೆಯಿಂದ ಇಡೀ ಶಾಂತಿನಗರ (Shanthinagar) ಬೆಚ್ಚಿಬಿದ್ದಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಾಸಿ ಹಾಗೂ ಸ್ನೇಹ ಇಬ್ಬರನ್ನು ಸ್ಥಳೀಯರು ಹಾಗೂ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದರು. ಇಬ್ಬರು ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಬೌದ್ಧ ಸನ್ಯಾಸಿಯ ವೇಷ ಧರಿಸಿ ದೇಶ ವಿರೋಧಿ ಚಟುವಟಿಕೆಯ ಶಂಕೆ – ಚೀನೀ ಮಹಿಳೆ ಬಂಧನ
ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡ್ತಿರುವ ಲಾಸಿ ಹಾಗೂ ಸ್ನೇಹ ಇಬ್ಬರು ಯುವತಿಯರು ಸಾಕಷ್ಟು ವರ್ಷಗಳಿಂದ ಸ್ನೇಹಿತರಾಗಿದ್ದರು. ಯುವತಿ ಸ್ನೇಹಳು ಪರ ಯುವತಿಯ ಜೊತೆ ಮಾತನಾಡಿ ಆತ್ಮೀಯವಾಗಿ ಇದ್ದಿದ್ದಕ್ಕೆ ಲಾಸಿಗೆ ಸಿಟ್ಟು ಬಂದಿದೆ. ಆದ್ದರಿಂದ ಲಾಸಿ ನಿನ್ನೆ ಸ್ನೇಹ ಮನೆಗೆ ನುಗ್ಗಿ ರೇಡಿಯಂ ಕಟರ್ ನಿಂದ ಮನಬಂದಂತೆ ಕುತ್ತಿಗೆ, ಕೆನ್ನೆ ಹಾಗೂ ಕೈಗೆ ಗಂಭೀರ ಗಾಯಗೊಳಿಸಿದ್ದಾಳೆ. ಬಳಿಕ ತಾನು ಕೂಡ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.