ಇಂದೋರ್: ಹುಡುಗಿಯರು ಕೆಟ್ಟ ಉಡುಪಿನಲ್ಲಿ ಶೂರ್ಪನಖಿಯಂತೆ ಕಾಣುತ್ತಾರೆ ಎಂದು ಹೇಳುವ ಮೂಲಕ ಬಿಜೆಪಿ (BJP) ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ (Kailash Vijayvargiya) ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಇತ್ತೀಚೆಗೆ ನಡೆದ ಹನುಮಾನ್ ಮತ್ತು ಮಹಾವೀರ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ರಾತ್ರಿ ಮನೆಯಿಂದ ಹೊರಗೆ ಬಂದಾಗ ಮದ್ಯದ ಅಮಲಿನಲ್ಲಿ ಯುವಜನತೆ ತೇಲಾಡುತ್ತಿರುವುದನ್ನು ಗಮನಿಸಿದೆ. ದೇವ್ರಾಣೆ ಹೇಳ್ತೀನಿ ಅವರನ್ನು ನೋಡಿದಾಗ ಕಾರಿಂದ ಇಳಿದು ಎರಡು ಏಟು ಹೊಡೆಯಬೇಕು ಅನಿಸುವಷ್ಟು ಸಿಟ್ಟು ಬಂತು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್ಗಾಗಿ ದೈವದ ಮೊರೆ ಹೋದ ಮಡಿಕೇರಿ ಆಕಾಂಕ್ಷಿ ಭರತೀಶ್
ನಾವು ಮಹಿಳೆಯರನ್ನು ದೇವತೆ ಎಂದು ಭಾವಿಸುತ್ತೇವೆ. ಆದರೆ ಹುಡುಗಿಯರು ಕೊಳಕು ಬಟ್ಟೆಗಳನ್ನು ಧರಿಸುತ್ತಾರೆ. ಇಂತಹ ಹೆಣ್ಮಕ್ಕಳು ಶೂರ್ಪನಖಿಯಂತೆ ಕಾಣುತ್ತಾರೆ, ದೇವರು ನಿಮಗೆ ಒಳ್ಳೆಯ ದೇಹವನ್ನು ನೀಡಿದ್ದಾನೆ, ಒಳ್ಳೆಯ ಬಟ್ಟೆಗಳನ್ನು ಧರಿಸಿ, ದಯವಿಟ್ಟು ನಿಮ್ಮ ಮಕ್ಕಳಿಗೆ ಚೆನ್ನಾಗಿ ಕಲಿಸಿ. ನಾನು ತುಂಬಾ ಚಿಂತಿತನಾಗಿದ್ದೇನೆ ಎಂದು ಅವರು ಹೇಳಿದರು.