– ಬಾಗಲಕೋಟೆಯಲ್ಲಿ ಸಾಮೂಹಿಕ ನಕಲು
ಬಾಗಲಕೋಟೆ: ಪದವಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಢವಳೇಶ್ವರ ಪುನರ್ ವಸತಿ ಕೇಂದ್ರದಲ್ಲಿ ನಡೆದಿದೆ.
ಢವಳೇಶ್ವರದ ಸರ್.ಎಂ ವಿಶ್ವೇಶ್ವರಯ್ಯ ಬಿಬಿಎ ಕಾಲೇಜಿನಲ್ಲಿ ಈ ಸಾಮೂಹಿಕ ನಕಲು ನಡೆದಿದೆ. ಕಾಲೇಜಿನ ಸಿಬ್ಬಂದಿಯೇ ನಕಲು ಮಾಡಲು ಕುಮ್ಮಕ್ಕು ನಿಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ನಕಲು ಮಾಡಲು ವಿಷಯ ಒಂದಕ್ಕೆ 10 ಸಾವಿರ ಹಣವನ್ನು ಸಿಬ್ಬಂದಿ ವಸೂಲಿ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಬೆಳಗಾವಿಯ ರಾಣಿ ಚೆನ್ನಮ್ಮ ಯೂನಿವರ್ಸಿಟಿ ಅಧೀನದಲ್ಲಿರುವ ಕಾಲೇಜು ಇದಾಗಿದೆ.
ಇತ್ತೀಚೆಗಷ್ಟೇ ಹಾವೇರಿಯ ಭಗತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಕಲು ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿತ್ತು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದವು.