Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸಿ, ಕೇಂದ್ರದ ಅನುದಾನ ಬರುತ್ತದೆ: ಕಾಂಗ್ರೆಸ್‌ಗೆ ಬೊಮ್ಮಾಯಿ ಠಕ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸಿ, ಕೇಂದ್ರದ ಅನುದಾನ ಬರುತ್ತದೆ: ಕಾಂಗ್ರೆಸ್‌ಗೆ ಬೊಮ್ಮಾಯಿ ಠಕ್ಕರ್

Bengaluru City

ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸಿ, ಕೇಂದ್ರದ ಅನುದಾನ ಬರುತ್ತದೆ: ಕಾಂಗ್ರೆಸ್‌ಗೆ ಬೊಮ್ಮಾಯಿ ಠಕ್ಕರ್

Public TV
Last updated: February 20, 2024 6:07 pm
Public TV
Share
2 Min Read
Basavaraj Bommai 1
SHARE

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ (Bhadra Upper Bank Project) ಕೇಂದ್ರದಿಂದ ಬರುವ ಅನುದಾನ (Grant) ಪಡೆಯಲು ರಾಜ್ಯ ಸರ್ಕಾರ ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸದೇ, ರಾಜಕೀಯಕ್ಕಾಗಿ ಕೇಂದ್ರದ ವಿರುದ್ಧ ಆರೋಪ ಮಾಡಿ ರಾಜ್ಯದ ಜನತೆಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ರಾಜ್ಯ ಸರ್ಕಾರಕ್ಕೆ ಠಕ್ಕರ್ ನೀಡಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಉತ್ತರ ನೀಡುತ್ತಿರುವಾಗ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ ಅವರು, ಬಜೆಟ್ (Budget) ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳಲ್ಲಿ ಬಂದಿರುವ ಹೊಗಳಿಕೆಗಳನ್ನು ಪ್ರಸ್ತಾಪ ಮಾಡಿ ಸಮರ್ಥನೆ ಮಾಡಿಕೊಂಡಿರುವುದಕ್ಕೆ ವ್ಯಂಗ್ಯವಾಡಿದರು. ನೀವು ಮುಖ್ಯಮಂತ್ರಿ ಆಗಿದ್ದೀರ, ಹಿಂದೆ ವಿಪಕ್ಷ ನಾಯಕರೂ ಆಗಿದ್ದೀರ. ಆದರೆ, ನಿಮ್ಮ ಸಾಮರ್ಥ್ಯ ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳ ಸಹಾಯ ತೆಗೆದುಕೊಂಡು ಮಾತಾಡುವಷ್ಟರ ಮಟ್ಟಿಗೆ ಅಸಹಾಯಕರಾಗಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪರಿಷತ್ ಉಪಚುನಾವಣೆಯಲ್ಲಿ ‘ಕೈ’ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು; ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ

15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ, ಪೆರಿಫೆರಲ್ ರಸ್ತೆಗಳ 6,300 ಕೋಟಿ ರೂ. ಹಣ ಕೊಟ್ಟಿಲ್ಲ. ನಮ್ಮ ರಾಜ್ಯದಿಂದ ಗೆದ್ದು ಹೋದ ನಿರ್ಮಲಾ ಸೀತಾರಾಮನ್ (Nirmala Sitharaman) ಈ ಅನುದಾನಗಳನ್ನು ನಿರಾಕರಿಸಿದರು ಎಂದು ಸಿಎಂ ಸತ್ಯ ಮರೆಮಾಚಿ ಕಾನೂನು ತಿರುಚಿ ಹೇಳುತ್ತಿದಾರೆ ಎಂದು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದರು. 15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ಶಿಫಾರಸು ಮಾಡಿದ್ದು ನಿಜ. ಆದರೆ ಅಂತಿಮ ವರದಿಯಲ್ಲಿ ಅದು ಇರಲಿಲ್ಲ. ಇರದ ಮೇಲೆ ಕೇಳುವುದು ಹೇಗೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧ ಆಯ್ಕೆ

ಇನ್ನು ಪೆರಿಫರಲ್ ರಸ್ತೆಗೆ 6,000 ಕೋಟಿ ಈಗಲೂ ಇದೆ. ಆದರೆ ಇಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯೇ ಶುರು ಮಾಡಿಲ್ಲ. ಭೂಸ್ವಾಧೀನವೇ ಆಗಿಲ್ಲ. ಯೋಜನೆ ಆರಂಭ ಮಾಡಿದರೆ ಕೇಂದ್ರದ ಅನುದಾನ ಬರುತ್ತದೆ. ಕೇಂದ್ರದಿಂದ ಅನುದಾನ ಕೇಳಬೇಕು ಅಂದರೆ ನಿರ್ದಿಷ್ಟ ರೀತಿಯಲ್ಲಿ ಪ್ರಸ್ತಾವನೆ ಕಳುಹಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆಯೂ ಸಿಗುತ್ತದೆ ಎಂದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರ? – ಕಾಂಗ್ರೆಸ್ ನಿಯೋಗದಿಂದ ಕಮಿಷನರ್‌ಗೆ ದೂರು

ಈ ವಿಚಾರದಲ್ಲಿ ನಮ್ಮ ಸರ್ಕಾರ ಯೋಜನೆಗೆ ಅಗತ್ಯ ಅನುಮತಿಗಳನ್ನು ಕೊಟ್ಟಿತ್ತು. ಈಗಲೂ ಕೇಂದ್ರದಿಂದ ಹಣ ಬರುತ್ತದೆ. ಅದಕ್ಕೆ ಹೋಗಿ ಕೇಳಬೇಕು. ಸರಿಯಾದ ಪ್ರಯತ್ನ ಮಾಡದೇ ಅನುದಾನ ಬಂದಿಲ್ಲ ಎನ್ನುವುದು ಸರಿಯಲ್ಲ. ಭದ್ರಾ ಮೇಲ್ದಂಡೆ ಯೋಜನೆ ಹೊಸ ಯೋಜನೆ ಆಗಿರುವುದರಿಂದ ಎನ್ ಫಾರ್ಮ್‌ನಡಿ ಪ್ರಸ್ತಾವನೆ ಸಲ್ಲಿಸಬೇಕು. ಅನುದಾನ ಕೇಳುವುದು ಹೇಗೆ ಎಂದು ಕಾಂಗ್ರೆಸ್‌ಗೆ ಗೊತ್ತಿಲ್ಲ ಆರೋಪಿಸಿದರು. ಇದನ್ನೂ ಓದಿ: ವಕೀಲರು Vs ಪೊಲೀಸರು – ಫೇಸ್‌ಬುಕ್‌ ಪೋಸ್ಟ್‌ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?

ಈ ಸಂದರ್ಭದಲ್ಲಿ ಯಾವ ಮಾದರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತರಬೇತಿ ಕೊಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಸಿದರೆ ರಾಜ್ಯದ ಹಿತದೃಷ್ಟಿಯಿಂದ ನಾವು ನಿಮ್ಮ ಜೊತೆಗೆ ಬರುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ

TAGGED:Basavaraj BommaibengaluruBhadra Upper Projectbjpcongressgrantsiddaramaiahಅನುದಾನಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರುಭದ್ರಾ ಮೇಲ್ದಂಡೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood
Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories

You Might Also Like

Mexico India
Latest

ಅಮೆರಿಕ ಆಯ್ತು ಈಗ ಮೆಕ್ಸಿಕೋ – ಭಾರತದ ವಸ್ತುಗಳಿಗೆ 50% ಸುಂಕ

Public TV
By Public TV
1 hour ago
Raichur Mid Day Meal 1
Districts

ಎಸ್‍ಡಿಎಂಸಿ ಅಧ್ಯಕ್ಷ ಸಾಲ ತೀರಿಸದ್ದಕ್ಕೆ ಮಕ್ಕಳ ಬಿಸಿಯೂಟಕ್ಕೆ ಬ್ಯಾಂಕ್ ಅಡ್ಡಗಾಲು!

Public TV
By Public TV
2 hours ago
ಸಾಂದರ್ಭಿಕ ಚಿತ್ರ
Court

ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ – ಸರ್ಕಾರದ ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು

Public TV
By Public TV
2 hours ago
CKB ACCIDENT
Chikkaballapur

ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ದುರ್ಮರಣ

Public TV
By Public TV
3 hours ago
accused arrested for killing friend and taking selfie video in hassan
Crime

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌

Public TV
By Public TV
3 hours ago
Construction of illegal mosques in Bagalkote Outrage from Hindu organizations
Bagalkot

ಬಾಗಲಕೋಟೆಯಲ್ಲಿ ಅಕ್ರಮ ಮಸೀದಿ ನಿರ್ಮಾಣ – ಹಿಂದೂ ಸಂಘಟನೆಗಳಿಂದ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?