Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

Latest

ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

Public TV
Last updated: July 29, 2024 7:33 pm
Public TV
Share
3 Min Read
NARENDRA MODI HD DEVEGOWDA
SHARE

ನವದೆಹಲಿ: ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಕಾವೇರಿಯೇ ಆಧಾರ, ಕುಡಿಯುವ ನೀರು ಕೊಡುವ ಭರವಸೆಯ ಮೇಲೆ ಜನರು ಎನ್‌ಡಿಎಗೆ ಮತ ಹಾಕಿದ್ದಾರೆ. ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಇಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ. ಬೆಂಗಳೂರು ಕುಡಿಯುವ ನೀರಿನ (Bengaluru Drinking Water) ಸಮಸ್ಯೆ ಬಗೆಹರಿಸಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಪ್ರಶ್ನಿಸಿದ್ದಾರೆ.

HD DEVEGOWDA 1

ಬಜೆಟ್ ಮೇಲೆ ರಾಜ್ಯಸಭೆಯಲ್ಲಿ (Rajyasabha) ಮಾತನಾಡಿದ ಅವರು, ಬೆಂಗಳೂರು ಬೆಳೆಯುತ್ತಿರುವ ನಗರ ಅದಕ್ಕೆ ಕುಡಿಯುವ ನೀರಿನ ಅಗತ್ಯವಿದೆ. ಜನರು ಕುಡಿಯುವ ನೀರಿಲ್ಲದೇ (Drinking Water) ಸಂಕಷ್ಟದಲ್ಲಿದ್ದಾರೆ, ನೀರಿಲ್ಲದೇ ತತ್ತರಿದ್ದ ವೇಳೆ ಒಂದು ಟಿಎಂಸಿ ನೀರು ಹರಿಸಲು CWRC (ಕಾವೇರಿ ನೀರು ನಿಯಂತ್ರಣ ಸಮಿತಿ) ಹೇಳಿತ್ತು, ಮಳೆಯಿಂದ ಈಗ ಎಲ್ಲವೂ ಸುಗಮವಾಗಿದೆ. ಮಳೆ ಬರದಿದ್ದರೇ ನಮ್ಮ ಪರಿಸ್ಥಿತಿ ಏನು ಹೇಳಿ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ – ಸಿದ್ದರಾಮಯ್ಯ ಪರ ಸಚಿವ ಜಮೀರ್ ಬ್ಯಾಟಿಂಗ್‌

bjp jds hd devegowda hd kumaraswamy yediyurappa vijayendra

ನಾನು ಸಾಕಷ್ಟು ನೀರಿನ ವ್ಯಾಜ್ಯ ಬಗೆಹರಿಸಿದ್ದೇನೆ, ಮುಂದಿನ ಬಜೆಟ್ ಬಗ್ಗೆ ಮಾತನಾಡಲು ಇರ್ತಿನೊ ಇಲ್ವೊ ಗೊತ್ತಿಲ್ಲ. ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಜನರು ಎನ್‌ಡಿಎ ಬೆಂಬಲಿಸಿದ್ದಾರೆ. ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಕಾವೇರಿಯೇ ಆಧಾರ, ಕುಡಿಯುವ ನೀರು ಕೊಡುವ ಭರವಸೆ ಮೇಲೆ ಜನರು ಎನ್‌ಡಿಎಗೆ ಮತ ಹಾಕಿದ್ದಾರೆ. ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಇಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ. ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದರು.

KRS 1 1

ಬಜೆಟ್ ಬಗ್ಗೆ ಮಾತನಾಡಿದ ಅವರು, ನಾನು ಹೃದಯಪೂರ್ವಕವಾಗಿ ಬಜೆಟ್ ಬೆಂಬಲಿಸುತ್ತೇನೆ. ನಾನು 1991 ರಲ್ಲಿ ಸಂಸತ್‌ಗೆ ಬಂದೆ ಈಗ ನನಗೆ 92 ವರ್ಷ ಮುಂದಿನ ಬಜೆಟ್ ಬಗ್ಗೆ ಮಾತಮಾಡ್ತಿನೋ ಇಲ್ಲವೊ ಗೊತ್ತಿಲ್ಲ, ನಾನು ಹಿಂದೆ ಮೋದಿ ಅವರನ್ನ ವಿರೋಧಿಸಿದ್ದೆ. ಆದರೆ ಈಗ ನಾನು ಎನ್‌ಡಿಎ ಭಾಗವಾಗಿದ್ದೇನೆ ಅದಕ್ಕಾಗಿ ಜೆ.ಪಿ ನಡ್ಡಾ ಅವರಿಗೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಅಭಿಮನ್ಯುವಿಗೆ ಮಾಡಿದಂತೆ ಇಡೀ ಭಾರತಕ್ಕೆ ಚಕ್ರವ್ಯೂಹ ರಚಿಸಿದ್ದಾರೆ, ದೇಶವನ್ನ ಧ್ವಂಸಗೊಳಿಸುತ್ತಾರೆ – ರಾಗಾ ಆತಂಕ

ನಾನು ಕೃಷಿ ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಬದ್ಧತೆ ಇರುವ ವ್ಯಕ್ತಿಯನ್ನು ಕೃಷಿಗೆ ಸಚಿವರನ್ನಾಗಿ ಮಾಡಿದ್ದಾರೆ. ಉತ್ತಮ ಅನುಭವ ಇರುವ ತಂಡವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹತ್ತು ವರ್ಷ ಸಿಎಂ ಆಗಿದ್ದಾಗ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಅತ್ಯುತ್ತಮ ಮಾದರಿ ರಾಜ್ಯ ಗುಜರಾತ್ ಆಗಿದೆ. ಮೈತ್ರಿ ಸರ್ಕಾರವನ್ನು ನಡೆಸುವುದು ತುಂಬಾ ಕಷ್ಟ, ನಾನು ಮೈತ್ರಿ ಸರ್ಕಾರವನ್ನ ನಡೆಸಿದ್ದೇನೆ. ಆದರೆ ನರೇಂದ್ರ ಮೋದಿ ಎಲ್ಲೂ ಹೊಂದಾಣಿಕೆ ಮಾಡಿಕೊಳ್ಳದೇ ಜವಾಬ್ದಾರಿ ನಿಭಾಯಿಸಿದ್ದಾರೆ. ಸ್ಪೀಕರ್ ಆಯ್ಕೆಯಿಂದ ಹಿಡಿದು ಅವರ ಪ್ರಮುಖ ನಿರ್ಧಾರಗಳಲ್ಲಿ ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ. ಕರ್ನಾಟಕದಲ್ಲಿ ಎರಡು ಸೀಟು ಮಾತ್ರ ನಮ್ಮ ಶಕ್ತಿ ಆದಾಗ್ಯೂ ಪರಿಗಣಿಸಿ ಒಂದು ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

2024ರ ಬಜೆಟ್ ಕುರಿತು ಮಾತನಾಡಿದ ಗೌಡರು, ವೈಜ್ಞಾನಿಕ ಬಜೆಟ್ ಇದು, ಮಹಿಳೆಯರು, ಬಡವರು, ಯುವಕರು, ರೈತರ ಪರವಾಗಿ ಬಜೆಟ್ ಮಂಡಿಸಿದೆ. ಕೃಷಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಒತ್ತು ನೀಡಿದೆ. ಹಂಚಿಕೆ ಸರಪಳಿ ಬಲಿಷ್ಠಗೊಳಿಸಲು ಕ್ರಮ ತೆಗೆದುಕೊಂಡಿದೆ. ಯುವಕರಿಗೆ ಇಂರ್ಟನಶಿಪ್ ನಲ್ಲಿ ಮೊದಲ ತಿಂಗಳ ಸಂಬಂಳ ನೀಡಲಾಗುತ್ತಿದೆ. ಉದ್ಯೋಗ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಿದೆ. ಯುವಕರಲ್ಲಿ ಕೌಶಲ್ಯಯುತರಾಗಿ ಮಾಡಲು ವ್ಯಯ ಮಾಡುತ್ತಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟು ಬರೆಸಿಕೊಂಡಿದ್ದಾರೆ ಪಟ್ಟಿ ಕೊಡ್ಲಾ? – ಸಿದ್ದರಾಮಯ್ಯ

TAGGED:bengaluruBengaluru Drinking Watercentral budget 2024HD DevegowdaPM Modiಕಾವೇರಿ ನೀರುನರೇಂದ್ರ ಮೋದಿಬಜೆಟ್‌ 2024ಬೆಂಗಳೂರು ಕುಡಿಯುವ ನೀರುಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
12 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
12 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
34 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
50 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
51 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?