ಮೈಸೂರು ಹುಡುಗ ಆದಿಲ್ ಮದುವೆ ವಿಚಾರವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ ಬಾಲಿವುಡ್ ನಟಿ ರಾಖಿ ಸಾವಂತ್. ಕೋರ್ಟ್ ನಲ್ಲಿ ಆದಿಲ್ ಮುಖಾಮುಖಿ ಆಗಿರುವ ವಿಚಾರವನ್ನೂ ಅವರು ಹಂಚಿಕೊಂಡಿದ್ದು, ಕೋರ್ಟ್ ಹಾಲ್ ನಲ್ಲೇ ತಮಗೆ ಆದಿಲ್ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ. ಜೈಲಿನಲ್ಲಿ ರೌಡಿಗಳನ್ನು ಭೇಟಿ ಮಾಡಿದ್ದೇನೆ. ಅದು ಹೇಗೆ ಬದುಕುತ್ತೀಯಾ ನೋಡುತ್ತೇನೆ ಎಂದಿದ್ದಾನೆ ಎಂದು ಹೇಳಿಕೊಂಡಿದ್ದಾರೆ.
- Advertisement 2
ಆದಿಲ್ ನನ್ನು ಪ್ರೇಮಿಸಿದ ವಿಚಾರವನ್ನೂ ಅವರು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದು, ‘ನನಗೆ ಈಗ ಅನಿಸುತ್ತಿದೆ. ಆದಿಲ್ ನನ್ನು ನಾನು ಯಾಕೆ ಪ್ರೀತಿಸಿದೆ ಎಂದು. ಅವನ ಉದ್ದೇಶವು ನನ್ನನ್ನು ಫ್ರಿಡ್ಜ್ ನಲ್ಲಿ ಹೆಣವಾಗಿ ತುಂಬುವುದು ಆಗಿತ್ತಾ? ದೇವರು ದೊಡ್ಡವನು ನನ್ನನ್ನು ಹಾಗೆ ಮಾಡಲು ಬಿಡಲಿಲ್ಲ. ಹಾಗಾಗಿ ನಾನು ದೇವರಿಗೆ ಥ್ಯಾಂಕ್ಸ್ ಹೇಳುತ್ತೇನೆ’ ಎಂದು ಅವರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ್ನಲ್ಲಿ `ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್
- Advertisement 3
- Advertisement 4
ಆದಿಲ್ ಮತ್ತು ತಮ್ಮ ನಡುವಿನ ಸಂಬಂಧದ ಕುರಿತು ರಾಖಿ ಮಾತನಾಡಿದ್ದಾರೆ. ‘ಮೊದ ಮೊದಲು ನಮ್ಮದು ಪವಿತ್ರ ಪ್ರೇಮ ಎಂದುಕೊಂಡಿದ್ದೆ. ಅವನನ್ನು ತುಂಬಾನೇ ನಂಬಿದ್ದೆ. ಅವನು ಕೂಡ ನನ್ನನ್ನು ಪ್ರೀತಿಸುವಂತೆ ನಾಟಕ ಮಾಡಿದೆ. ಆಮೇಲೆ ಅವನ ಮತ್ತೊಂದು ಮುಖ ಪರಿಚಯ ಆಯಿತು. ಅವನಿಗೆ ಅನೇಕ ಗರ್ಲ್ ಫ್ರೆಂಡ್ಸ್ ಇದ್ದಾರೆ. ಅವನು ಬೇರೆ ಹುಡುಗಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ’ ಎಂದು ಆರೋಪಿಸಿದ್ದಾರೆ.
ಮೈಸೂರಿನಲ್ಲಿರುವ ಆದಿಲ್ ತಂದೆ ತಾಯಿಯನ್ನೂ ಮಾತನಾಡಿಸುವ ಪ್ರಯತ್ನವನ್ನು ಮಾಡಿದ್ದಾರಂತೆ ರಾಖಿ. ಆದರೆ, ಫೋನ್ ಸ್ವೀಕರಿಸುತ್ತಿಲ್ಲ ಎಂದು ಹೇಳಿದ್ದಾರೆ. ಈಗಲೂ ನಾನು ಅವರ ತಂದೆ ತಾಯಿ ಜೊತೆ ಮಾತನಾಡುವ ಉದ್ದೇಶ ಹೊಂದಿದ್ದೇನೆ. ಮಗನ ಬಗ್ಗೆ ಒಂದಷ್ಟು ವಿಷಯಗಳನ್ನು ಅವರಿಗೆ ತಿಳಿಸಬೇಕಿದೆ ಎಂದಿದ್ದಾರೆ ರಾಖಿ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k