Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯಸೇವಿಸಿ ಕಾರ್ಯಕ್ರಮಕ್ಕೆ ಹೋಗ್ತಾರೆ, ನಮ್ಮನ್ನು ನಿರ್ಲಕ್ಷಿಸಿದ್ದಾರೆ – ಪಂಜಾಬ್ ಸಿಎಂ ವಿರುದ್ಧ ಪುತ್ರಿ ಕೆಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮದ್ಯಸೇವಿಸಿ ಕಾರ್ಯಕ್ರಮಕ್ಕೆ ಹೋಗ್ತಾರೆ, ನಮ್ಮನ್ನು ನಿರ್ಲಕ್ಷಿಸಿದ್ದಾರೆ – ಪಂಜಾಬ್ ಸಿಎಂ ವಿರುದ್ಧ ಪುತ್ರಿ ಕೆಂಡ

Latest

ಮದ್ಯಸೇವಿಸಿ ಕಾರ್ಯಕ್ರಮಕ್ಕೆ ಹೋಗ್ತಾರೆ, ನಮ್ಮನ್ನು ನಿರ್ಲಕ್ಷಿಸಿದ್ದಾರೆ – ಪಂಜಾಬ್ ಸಿಎಂ ವಿರುದ್ಧ ಪುತ್ರಿ ಕೆಂಡ

Public TV
Last updated: December 10, 2023 3:56 pm
Public TV
Share
3 Min Read
Bhagwant Mann Seerat Mann
SHARE

– ಮಕ್ಕಳನ್ನು ಸರಿಯಾಗಿ ನೋಡದವನು ರಾಜ್ಯವನ್ನು ಹೇಗೆ ಆಳುತ್ತಾನೆ?
– ತಾಯಿಗೆ ತಂದೆಯಿಂದ ದೈಹಿಕ ಕಿರುಕುಳ

ಚಂಡೀಗಢ: ಪಂಜಾಬ್ (Punjab) ಸಿಎಂ ಅಸೆಂಬ್ಲಿ, ಗುರುದ್ವಾರ ಅಥವಾ ಪತ್ರಿಕಾಗೋಷ್ಠಿಗಳಿಗೆ ಅಮಲೇರಿದ ಸ್ಥಿತಿಯಲ್ಲಿ ಹೋಗುತ್ತಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಪುತ್ರಿ (Daughter) ಆರೋಪಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿ ಸೀರತ್ ಮಾನ್ (Seerat Mann) ತಮ್ಮ ತಂದೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ, ಸೀರತ್ ಅವರು ಸಿಎಂ ಭಗವಂತ್ ಮಾನ್ ಅವರ ಮಗಳು ಎಂದು ಹೇಳಿಕೊಂಡಿದ್ದಾರೆ. ಆದರೆ ಆಕೆ ಅಪ್ಪ ಎಂದು ಕರೆಯುವ ಹಕ್ಕನ್ನು ಕಳೆದುಕೊಂಡಿದ್ದು, ಅವರನ್ನು ಸಿಎಂ ಮಾನ್ ಎಂದು ಕರೆಯುವುದಾಗಿ ತಿಳಿಸಿದ್ದಾರೆ. ನಾನು ಈ ವಿಡಿಯೋ ಮಾಡುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ನನ್ನ ಕಥೆ ಹೊರಬರಲಿ ಎಂದು ನಾನು ಬಯಸುತ್ತೇನೆ. ಜನರು ನಮ್ಮ ಬಗ್ಗೆ ಏನು ಕೇಳಿದ್ದಾರೆಯೋ ಅದನ್ನು ಸಿಎಂ ಮಾನ್ ಅವರೇ ಹೇಳಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಗೆಳತಿಯನ್ನು ಮದುವೆಯಾಗಲು ಲಿಂಗವನ್ನೇ ಬದಲಾಯಿಸಿಕೊಂಡ ಮಹಿಳೆ

. @BhagwantMann की बेटी ने जो आरोप भगवंत मान पर लगाये है बेहद गंभीर हैं । चाहे वो भगवंत मान द्वारा अपने बेटे को CM हाउस में घुसने से रोकना हो या गुरुद्वारे और विधानसभा में शराब पीकर जाना हो चाहे वो शराब पीकर अपनी पत्नी के साथ घटिया हरकते करना हो । @ArvindKejriwal क्या इन आरोपों… pic.twitter.com/k9QbYZUKK1

— Tajinder Bagga (@TajinderBagga) December 9, 2023

ನಾನು ಇಲ್ಲಿಯವರೆಗೆ ಮೌನವಾಗಿದ್ದು, ತಾಯಿ ಕೂಡ ಮೌನವಾಗಿದ್ದಾರೆ. ನಮ್ಮ ಮೌನವನ್ನು ನಮ್ಮ ದೌರ್ಬಲ್ಯವೆಂದು ಅವರು ಭಾವಿಸಿದ್ದಾರೆ. ನಮ್ಮ ಮೌನದಿಂದಾಗಿ ಅವರು ಪ್ರಸ್ತುತ ಉನ್ನತ ಸ್ಥಾನದಲ್ಲಿ ಕುಳಿತಿದ್ದಾರೆ ಎಂದು ಅವರಿಗೆ ತಿಳಿದಿಲ್ಲ ಎಂದಿದ್ದಾರೆ. ಈ ವೀಡಿಯೋದಲ್ಲಿ ಸಿಎಂ ಮಾನ್ ಪತ್ನಿ ಡಾ.ಗುರುಕಿರತ್ ಗರ್ಭಿಣಿಯಾಗಿದ್ದು, ಸಿಎಂ ಮಾನ್ ಮೂರನೇ ಬಾರಿಗೆ ತಂದೆಯಾಗಲಿದ್ದಾರೆ ಎಂದು ಸೀರತ್ ಮಾಹಿತಿ ನೀಡಿದ್ದಾರೆ. ಈ ವಿಚಾರ ಬೇರೆಯವರಿಂದ ತಿಳಿಯಿತು. ಮಾನ್ ತನಗೆ ಅಥವಾ ಸಹೋದರನಿಗೆ ಈ ಬಗ್ಗೆ ತಿಳಿಸಲು ಯಾವುದೇ ಕಾಳಜಿ ವಹಿಸಲಿಲ್ಲ ಎಂದು ಸೀರತ್ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು, ಮಹಾರಾಷ್ಟ್ರದಲ್ಲಿ ಎನ್‌ಐಎ ದಾಳಿ, 15 ಮಂದಿ ಅರೆಸ್ಟ್‌ – 51 ಹಮಾಸ್‌ ಧ್ವಜ, ಪಿಸ್ತೂಲ್‌, ಗನ್‌, ಮಾರಕಾಸ್ತ್ರಗಳು ಜಪ್ತಿ

ನಿಮಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ನೀವು ಅವರನ್ನು ನಿರ್ಲಕ್ಷಿಸಿದ್ದೀರಿ ಮತ್ತು ಈಗ ಮೂರನೇ ಮಗುವನ್ನು ಈ ಜಗತ್ತಿಗೆ ತರಲು ಬಯಸಿದ್ದೀರಿ. ಇದಕ್ಕೆ ಕಾರಣವೇನು ಎಂದು ತಂದೆಯನ್ನು ಪ್ರಶ್ನಿಸಿದ ಸೀರತ್, ಭಗವಂತ್ ಮಾನ್ ಪುತ್ರ ದೋಷನ್ ತಂದೆಯನ್ನು ಭೇಟಿ ಮಾಡಲು ಎರಡು ಬಾರಿ ಪಂಜಾಬ್‌ಗೆ ಹೋಗಿದ್ದರು. ಅವನು ತನ್ನ ತಂದೆಯೊಂದಿಗೆ ಸಮಯ ಕಳೆಯಲು ಬಯಸುತ್ತಾನೆ. ಆದರೆ ಸಿಎಂ ತಮ್ಮ ಮನೆಗೆ ಬರಲು ದೋಷನ್‌ಗೆ ಅವಕಾಶ ನೀಡಲಿಲ್ಲ. ನಂತರ ಅವರು ಕುಟುಂಬದ ಸ್ನೇಹಿತರೊಂದಿಗೆ ಚಂಡೀಗಢದಲ್ಲಿ ಉಳಿದುಕೊಂಡರು. ಒಂದು ದಿನ ಅವರು ಮತ್ತೆ ಸಿಎಂ ಮಾನ್ ಮನೆಗೆ ಹೋದರು. ಆ ಸಂದರ್ಭದಲ್ಲಿ ಅವನನ್ನು ಮನೆಯಿಂದ ಹೊರಹಾಕಲಾಯಿತು ಮತ್ತು ಅಲ್ಲಿ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಅಲ್ಲಿಂದ ಹೊರಡಲು ಹೇಳಿದರು. ತನ್ನ ಸ್ವಂತ ಮಕ್ಕಳ ಜವಾಬ್ದಾರಿಯನ್ನು ಹೊರಲಾಗದ ವ್ಯಕ್ತಿ ಪಂಜಾಬ್ ಜನತೆಯ ಜವಾಬ್ದಾರಿಯನ್ನು ಹೇಗೆ ತೆಗೆದುಕೊಳ್ಳುತ್ತಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಈ ಬಾರಿ 7.43 ಲಕ್ಷ ನಕಲಿ MGNREGA ಜಾಬ್ ಕಾರ್ಡ್ ಡಿಲೀಟ್ – ಯುಪಿಯಲ್ಲೇ ಅತಿ ಹೆಚ್ಚು

ನಾವು ನೋಡಿದ್ದೆಲ್ಲ ಪಂಜಾಬ್‌ನ ಜನರಲ್ಲೂ ನಡೆಯುತ್ತಿದೆ. ಸಿಎಂ ಮಾನ್ ಅವರು ರಾಜಕೀಯಕ್ಕೆ ಹೋಗಬಾರದು ಎಂದು ತಾಯಿ ಬಯಸಿದ್ದರು ಎಂದು ಭಗವಂತ್ ಮಾನ್ ವಿಚ್ಛೇದನಕ್ಕೆ ಕಾರಣ ನೀಡಿದ್ದರು. ವಿಚ್ಛೇದನಕ್ಕೆ ಹಲವು ಕಾರಣಗಳಿವೆ ಮತ್ತು ಅದು ನನ್ನ ತಾಯಿಯೇ ಹೇಳುತ್ತಾರೆ. ಯಾವಾಗ ನನ್ನ ತಾಯಿ ಈ ಸತ್ಯ ಹೇಳಲು ಸಿದ್ಧರಾಗುತ್ತಾರೋ ಅವತ್ತು ಖಂಡಿತವಾಗಿಯೂ ಎಲ್ಲರಿಗೂ ತಮ್ಮ ಕಥೆಯನ್ನು ಹೇಳುತ್ತಾರೆ ಎಂದು ಸೀರತ್ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಮಾನ್ ಮತ್ತು ತನ್ನ ತಾಯಿಯ ವಿಚ್ಛೇದನಕ್ಕೆ ತಂದೆಯ ಮದ್ಯಪಾನ, ಮಾನಸಿಕ ಮತ್ತು ದೈಹಿಕ ಕಿರುಕುಳ, ಸುಳ್ಳು ಹೇಳುವ ಅಭ್ಯಾಸ ಮತ್ತು ಬೆದರಿಕೆಗಳು ಕೆಲವು ಕಾರಣ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್

TAGGED:bhagwant manndaughterfamilypunjabSeerat MannvideoWifeಕುಟುಂಬಪಂಜಾಬ್ಪತ್ನಿಭಗವಂತ್ ಮಾನ್ಮಗಳುವೀಡಿಯೋಸೀರತ್ ಮಾನ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
3 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
19 minutes ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
50 minutes ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
1 hour ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
1 hour ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?