ಸಿಎಂ ನಿವಾಸದೊಳಗೆ ಬಿತ್ತು ಗಾಲ್ಫ್ ಚೆಂಡು: ಪೊಲೀಸ್ ವಾಹನದ ಗಾಜು ಜಖಂ

Public TV
1 Min Read
GOLF BALL

ಬೆಂಗಳೂರು: ಗಾಲ್ಫ್ ಚೆಂಡು ಗೃಹಕಚೇರಿ ಕೃಷ್ಣಾ ನಿವಾಸದ ಒಳಗೆ ಬಿದ್ದಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ವಾಹನದ ಗಾಜು ಜಖಂ ಗೊಂಡಿದೆ.

ಕೃಷ್ಣಾ ನಿವಾಸದ ಪಕ್ಕದಲ್ಲಿಯೇ ಇರುವ ಗಾಲ್ಫ್ ಮೈದಾನದಿಂದ ಚೆಂಡು ಹಾರಿ ಬಂದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕಾಕತಾಳೀಯ ಅಂದರೆ ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗಲೂ ಗಾಲ್ಫ್ ಚೆಂಡುಗಳು ಕೃಷ್ಣಾ ನಿವಾಸದೊಳಗೆ ಬಂದು ಬೀಳುತ್ತಿದ್ದವು. ಹೀಗಾಗಿ ಕುಮಾರಸ್ವಾಮಿ ಮೈದಾನದ ಸುತ್ತಲೂ 100 ಅಡಿ ಎತ್ತರದ ಬಲೆ ಹಾಕಿಸಿದ್ದರು. ಆದರೆ ಈಗ ಗಾಲ್ಫ್ ಚೆಂಡು ಅಷ್ಟು ಎತ್ತರದ ಬಲೆ ದಾಟಿ ಮತ್ತೆ ಕೃಷ್ಣಾ ನಿವಾಸದ ಒಳಗೆ ಬಂದು ಬಿದ್ದಿದೆ.

ಗಾಲ್ಫ್ ಚೆಂಡು ವಶಕ್ಕೆ ಪಡೆದಿರುವ ಪೊಲೀಸರು, ಯಾರು ಹೊಡೆದಿದ್ದು ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *