ವಿಜಯಪುರ: ಇಡೀ ದೇಶಾದ್ಯಂತ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಯಾವ ರೀತಿ ರಾಜನೀತಿ ಮಾಡ್ತಿದ್ದಾರೆ ಎನ್ನುವುದು ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್ಸಿಗೆ ಮಾತ್ರ ಅಚ್ಚೇ ದಿನ್ ಆಗಿಲ್ಲ. ಸಾರ್ವಜನಿಕ ಪ್ರಕಾರ ಅಚ್ಚೇ ದಿನ್ ಆಗಿದೆ ಎಂದು ಹಾವೇರಿ ಸಂಸದ ಶಿವಕುಮಾರ ಉದಾಸಿ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಿಗಜಿಣಗಿ ಜಗಳದ ವಿಚಾರ ಪ್ರತಿಕ್ರಿಯಿಸಿ, ಎಲ್ಲಾ ಕ್ಷೇತ್ರದಲ್ಲಿ ರಾಜಕಾರಣ ಇದ್ದೇ ಇರುತ್ತೆ. ಪಾರ್ಲಿಮೆಂಟರಿ ಬೋರ್ಡ್ ಯಾರಿಗೆ ಟಿಕೆಟ್ ನೀಡಬೇಕು ಅಂತ ನಿರ್ಣಯ ಮಾಡುತ್ತೆ. ಪಕ್ಷದ ಮಾನದಂಡಗಳ ಆಧಾರದ ಮೇಲೆ ಟಿಕೆಟ್ ನೀಡುತ್ತಾರೆ ಎಂದರು. ಬಳಿಕ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಆಡಳಿತಕ್ಕೆ ಬಂದೇ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಲವೇ ಕೆಲವು ಜನರ ಆಧಾರದ ಮೇಲೆ ಸಮೀಕ್ಷೆ ನಡೆಸಲಾಗುತ್ತೆ. 2014ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇತ್ತು. ಆದ್ರೆ ಲೋಕಸಭೆಯಲ್ಲಿ ಕಡಿಮೆ ಸೀಟು ಬಂದಿದೆ. ಯಾರನ್ನು ಗೆಲ್ಲಿಸಬೇಕು ಅಂತ ಜನರಿಗೆ ಗೊತ್ತಿದೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯ ಸಮೀಕ್ಷೆಗಳಿಗೆ ಟಾಂಗ್ ನೀಡಿದ್ದಾರೆ.