Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಮುಂಗಾರು ಮಳೆ ಖುಷಿ: ಜುಲೈನಲ್ಲೇ ಬಹುತೇಕ ಜಲಾಶಯಗಳು ಭರ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ರಾಜ್ಯಕ್ಕೆ ಮುಂಗಾರು ಮಳೆ ಖುಷಿ: ಜುಲೈನಲ್ಲೇ ಬಹುತೇಕ ಜಲಾಶಯಗಳು ಭರ್ತಿ

Bagalkot

ರಾಜ್ಯಕ್ಕೆ ಮುಂಗಾರು ಮಳೆ ಖುಷಿ: ಜುಲೈನಲ್ಲೇ ಬಹುತೇಕ ಜಲಾಶಯಗಳು ಭರ್ತಿ

Public TV
Last updated: July 10, 2018 11:10 pm
Public TV
Share
3 Min Read
RAIN KLR
SHARE

ಬೆಂಗಳೂರು: ಮುಂಗಾರು ಮಳೆ ಈ ಬಾರಿ ರಾಜ್ಯಕ್ಕೆ ಖುಷಿ ತಂದಿದೆ. ಮುಂಗಾರು ಬಹುತೇಕ ಎಲ್ಲಾ ಜಿಲ್ಲೆಗಳನ್ನು ಆವರಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದು ಸಂತಸ ಅಂದರೆ ಸಾಮಾನ್ಯವಾಗಿ ಆಗಸ್ಟ್ ವೇಳೆಗೆ ಜಲಾಶಯಗಳು ಭರ್ತಿ ಆಗುತ್ತಿದ್ದವು. ಆದರೆ ಈ ಬಾರಿ ತಿಂಗಳ ಮುಂಚೆಯೇ ಜುಲೈನಲ್ಲಿ ಬಹುತೇಕ ಡ್ಯಾಮ್‍ಗಳು ಭರ್ತಿಯಾಗುತ್ತಿವೆ.

ಪ್ರತಿ ವರ್ಷವೂ ನೀರಿಗಾಗಿ ಕ್ಯಾತೆ ತೆಗೆಯುತ್ತಿದ್ದ ತಮಿಳುನಾಡು ಈಗ ಬಾಯಿ ಬಂದ್ ಮಾಡಿಕೊಂಡಿದೆ. ಕಾರಣ ಅಷ್ಟರ ಮಟ್ಟಿಗೆ ಕೆಆರ್‌ಎಸ್ ನಿಂದ ನೀರು ಹರಿದು ಹೋಗುತ್ತಿದೆ. ಇನ್ನೂ ಎರಡು ದಿನ ಮಳೆಯಾಗಲಿದ್ದು ಇವತ್ತು ಸಹ ರಾಜ್ಯದ ಹಲವೆಡೆ ಬಿಟ್ಟೂ ಬಿಡದೆ ಮಳೆಯಾಗಿದೆ.

RAIN MNG

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಕಳಸ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಭಾಗದಲ್ಲಿ ವರುಣ ರುದ್ರನರ್ತನ ಮಾಡುತ್ತಿದ್ದಾನೆ. 3 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಕಳೆದ 8-10 ವರ್ಷಗಳಿಂದ ತುಂಬದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಶೃಂಗೇರಿಯಲ್ಲಿ 15 ವರ್ಷಗಳಲ್ಲೇ ದಾಖಲೆ ಮಟ್ಟದ ಮಳೆಯಾಗಿದೆ. ತುಂಗಾ-ಭದ್ರ ನದಿಗಳು ಮೈದುಂಬಿ ಹರಿಯುತ್ತಿವೆ. ರೈತರು ಖುಷಿ ಜೊತೆಗೆ ಕಾಫಿ, ಮೆಣಸು, ಅಡಿಕೆಗೆ ಕೊಳೆ ರೋಗದ ಭೀತಿ ಶುರುವಾಗಿದ್ದರಿಂದ ಆತಂಕದಲ್ಲಿದ್ದಾರೆ. ಕಂಬಿಹಳ್ಳಿಯಲ್ಲಿ ಗೋಡೆ ಕುಸಿದು ವನಜಾ (48) ಎನ್ನುವವರು ಮೃತಪಟ್ಟಿದ್ದಾರೆ.

ಕೊಡಗು: ಜಿಲ್ಲೆಯಲ್ಲಿ ಮಳೆಯ ಆರ್ಭಟ ನಿಲ್ಲುತ್ತಿಲ್ಲ. ಕಾವೇರಿ ನದಿಗೆ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿದೆ. ಮರಗಳು, ವಿದ್ಯುತ್ ಕಂಬಗಳು ಮತ್ತಷ್ಟು ನೆಲಕ್ಕೆ ಉರುಳುತ್ತಿವೆ. ಸೋಮವಾರಪೇಟೆ ತಾಲೂಕಿನ ಶುಂಠಿಕೊಪ್ಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಗುಡ್ಡ ಕುಸಿತ ಉಂಟಾಗಿ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಮಡಿಕೇರಿ-ಮಂಗಳೂರು ಹೆದ್ದಾರಿಯ ಕೊಯನಾಡು ಬಳಿ ಕೆಎಸ್‍ಆರ್ ಟಿಸಿ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಅದೃಷ್ಟವಶಾತ್ ವಿದ್ಯುತ್ ಇಲ್ಲದ ಕಾರಣ ಅನಾಹುತ ಸಂಭವಿಸಿಲ್ಲ.

RAIN BKD

ಮಂಗಳೂರು: ದಕ್ಷಿಣ ಕನ್ನಡದಲ್ಲಿ ವರ್ಷಧಾರೆ ಆಗುತ್ತಿದೆ. ಉಪ್ಪಿನಂಗಡಿ-ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಹೊಸ್ಮಠ ಸೇತುವೆ ಮತ್ತೆ ಮತ್ತೆ ಮುಳುಗಡೆ ಆಗುತ್ತಿದೆ. ಹಾಗಾಗಿ, ರಸ್ತೆ ಸಂಚಾರ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಮುಂದುವರಿದಿದೆ. ಮೂರು ದಿನಗಳಿಂದ ವ್ಯಾಪಕ ಮಳೆಯಾಗಿದ್ದು ಕೆರೆಕಟ್ಟೆಗಳು ನೀರು ತುಂಬಿ ತುಳುಕುತ್ತಿವೆ. ಶಿರಸಿ, ಸಿದ್ದಾಪುರ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕರಾವಳಿ ಭಾಗದ ಕಾರವಾರದಲ್ಲಿ ಮಳೆಯ ಆರ್ಭಟ ಅಲ್ಪಪ್ರಮಾಣದಲ್ಲಿ ಇಳಿಮುಖವಾಗಿದೆ.

ಬಾಗಲಕೋಟೆ: ಮಹಾರಾಷ್ಟ್ರ ಹಾಗೂ ಕೊಯ್ನಾ ದಡದಲ್ಲಿ ನಿರಂತರ ಮಳೆಯಿಂದಾಗಿ, ಕೃಷ್ಣಾ ನದಿ ಮೈದುಂಬಿದೆ. ನೀರಿನ ಹರಿವು ಹೆಚ್ಚಾಳದಿಂದ ನದಿ ತೀರದ ಜಮಖಂಡಿಯ ಮತ್ತೂರು, ಮೈಗೂರು, ಕಂಕನವಾಡಿ, ಶೂರ್ಪಾಲಿ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳು ಸಿಲುಕುವ ಸಾಧ್ಯತೆ ಇದೆ. ಜಮಖಂಡಿಯ ಹಿಪ್ಪರಿಗೆ ಬ್ಯಾರೇಜ್‍ನ ಒಳ ಹಾಗೂ ಹೊರ ಹರಿವು ಹೆಚ್ಚಾಗಿದೆ. ಕೃಷಿ, ಕೂಲಿ, ಸಂತೆ ಜಾನುವಾರುಗಳಿಗೆ ಮೇವು ಸಾಗಾಟಕ್ಕೆ ಜನ ಬೋಟ್ ಅವಲಂಬಿಸುತ್ತಿದ್ದಾರೆ.

ಧಾರವಾಡ: ಧಾರವಾಡದಲ್ಲಿ ಬೆಳಗ್ಗೆಯೇ ಮಳೆರಾಯ ಅಬ್ಬರಿಸಿದ್ದರಿಂದ ನಗರದ ಜನ ಜೀವನ ಅಸ್ತವ್ಯಸ್ತವಾಗಿ ಪರದಾಡಬೇಕಾಯಿತು.

RAIN MYSURU

ಯಾದಗಿರಿ: ಜಿಲ್ಲೆಯ ಶಹಾಪೂರ, ಸುರಪುರಗಳಲ್ಲಿ ಬೆಳಗ್ಗೆಯಿಂದಲೇ ಜಿಟಿ ಜಿಟಿ ಮಳೆ, ದಟ್ಟವಾದ ಮೋಡಗಳು ಆವರಿಸಿದ್ದವು.

ಕೋಲಾರ: ಕರಾವಳಿ, ಮಲೆನಾಡು ಮಾತ್ರವಲ್ಲ ಬರದ ನಾಡು ಕೋಲಾರದಲ್ಲೂ ವರ್ಷಧಾರೆ ಇದೆ. 3 ದಿನಗಳಿಂದ ಜಿಲ್ಲೆಯ ಹಲವೆಡೆ ಗಾಳಿ ಸಹಿತ ಮಳೆಯಾಯಿತು. ರೈತರು ಈಗಲೇ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ.

 

ಬೆಂಗಳೂರು: ಬೆಂಗಳೂರು ನಗರ, ಹೊಸಕೋಟೆ, ನೆಲಮಂಗಲ, ಆನೇಕಲ್ ಗಳಲ್ಲೂ ಮಳೆಯಾಯಿತು. ಮಧ್ಯಾಹ್ನವೇ ಮಳೆಯ ಅರ್ಭಟ ಶುರುವಾಗಿ ಅರ್ಧ ಗಂಟೆ ಬಿರುಗಾಳಿ ಸಹಿತ ಮಳೆಯಾಯಿತು. ನೆಲಮಂಗಲದ ನಿಡುವಂದ ಬಳಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಹೊಸಕೋಟೆ ತಾಲೂಕಿನ ಬಂಡಹಳ್ಳಿ ಹೊರವಲಯದಲ್ಲಿ ತಮಿಳುನಾಡಿನಿಂದ ಆಂಧ್ರ ಪ್ರದೇಶಕ್ಕೆ ರವಾನೆ ಆಗುತ್ತಿದ್ದ ಹೆಟೆನ್ಷನ್ ವಿದ್ಯುತ್ ಟವರ್ ಕಳಪೆ ಕಾಮಗಾರಿಯಿಂದಾಗಿ ಬಿರುಗಾಳಿಗೆ ಮುರಿದು ಬಿದ್ದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ವಿದ್ಯುತ್ ತಂತಿ ಅಳವಡಿಸದ ಕಾರಣ ಅನಾಹುತ ತಪ್ಪಿದೆ.

TAGGED:accidentdamdeathDistrictkrsPainPublic TVraintamil naduಅಪಘಾತಕೆಆರ್‍ಎಸ್ಜಿಲ್ಲೆಡ್ಯಾಮ್ತಮಿಳುನಾಡುನೋವುಪಬ್ಲಿಕ್ ಟಿವಿಮಳೆಸಾವು
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
20 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
36 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
44 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?