– ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ಯೋಜನೆ
– 18 ವರ್ಷ ಪೂರ್ಣಗೊಂಡ ಭಾಗ್ಯಲಕ್ಷ್ಮಿ ಬಾಂಡ್ ಹಣ
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಗೆ ಈಗ 18 ವರ್ಷದ ತುಂಬಿದ್ದು, ಫಲಾನುಭವಿಗಳಿಗೆ ಮೊತ್ತ ಮಂಜೂರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೇಳಿದೆ.
Advertisement
ರಾಜ್ಯ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮಿ ಯೋಜನೆಯಡಿ 2006-07ನೇ ಸಾಲಿನಲ್ಲಿ ನೋಂದಣಿಯಾಗಿತ್ತು. ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್ಐಸಿ ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದೆ.
Advertisement
ಒಟ್ಟು ಒಂದು ಲಕ್ಷ ರೂಪಾಯಿ ಫಲಾನುಭವಿಗಳಿಗೆ ಸಿಗಲಿದೆ. ರಾಜ್ಯದಲ್ಲಿ ಒಟ್ಟು 34.50 ಲಕ್ಷ ಭಾಗ್ಯಲಕ್ಷ್ಮಿ ಫಲಾನುಭವಿಗಳಿದ್ದಾರೆ. ಹೆಣ್ಣುಮಕ್ಕಳ ಉನ್ನತ ವ್ಯಾಸಂಗ ಸೇರಿದಂತೆ ಇತರೆ ಕಾರ್ಯಗಳಿಗೆ ಆ ಹಣ ನೆರವಾಗುವ ಉದ್ದೇಶದಿಂದ ಭಾಗ್ಯಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ.