ಬೆಂಗಳೂರು: ರಾಜ್ಯದಲ್ಲಿ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದವರಿಗೆ ರಾಜ್ಯ ಸರ್ಕಾರ Government of Karnataka) ಗುಡ್ ನ್ಯೂಸ್ ಕೊಟ್ಟಿದೆ. ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯಿತಿ ನೀಡಿ ದಂಡ ಕಟ್ಟಿ ಪರಿಷ್ಕೃತ ನಕ್ಷೆ ಪಡೆಯಲು ಸರ್ಕಾರ ಅವಕಾಶ ನೀಡಿದೆ.
ಆದರೆ ಶೇ.15%ರ ಮಿತಿಯೊಳಗೆ ನಿಯಮ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ಮಾತ್ರ ಅನ್ವಯ ಆಗುವಂತೆ ಆದೇಶ ಮಾಡಲಾಗಿದೆ. ಸೆಟ್ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿದವರಿಗೆ ಅವಕಾಶ ಕೊಡಲಾಗಿದೆ. ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಂಡ ನಿಗದಿ ಮಾಡಲಾಗಿದೆ.
* ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ..?
> 15%ರ ಮಿತಿಯೊಳಗೆ ನಿಯಮ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ಅನ್ವಯ
> ಸೆಟ್ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿದವರಿಗೆ ದಂಡಕ್ಕೆ ಅವಕಾಶ
> ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ ಪಾರ್ಕಿಂಗ್ ಉಲ್ಲಂಘನೆಗೆ 5,000 ರೂ. ದಂಡ
* ದಂಡದ ಪ್ರಮಾಣ ಹೇಗೆ..?
> ಪಟ್ಟಣಪಂಚಾಯಿತಿ ವ್ಯಾಪ್ತಿ
– ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,000 ರೂ. ದಂಡ
– ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,500 ರೂ. ದಂಡ ನಿಗದಿ
> ಪುರಸಭೆ ವ್ಯಾಪ್ತಿ
– ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,200 ರೂ. ದಂಡ
– ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,800 ರೂ. ದಂಡ
> ನಗರಪಾಲಿಕೆ ವ್ಯಾಪ್ತಿ
– ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,500 ರೂ. ದಂಡ
– ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 2,250 ರೂ. ದಂಡ
> ಮಹಾನಗರ ಪಾಲಿಕೆ ವ್ಯಾಪ್ತಿ
– ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 2,000 ರೂ. ದಂಡ ನಿಗದಿ
– ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 3,000 ರೂ. ದಂಡ
