– ಮೋದಿ, ಶಾ ರಾಜೀನಾಮೆ ಕೊಟ್ರೆ ನಾವೂ ಕೊಡಿಸ್ತೇವೆ
– 50 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಾಸಕ ಆಗ್ರಹ
ಬೆಂಗಳೂರು: ಸಿಎಂ ರಾಜೀನಾಮೆ ಕೇಳುವ ಕುಮಾರಸ್ವಾಮಿ (HD Kumaraswamy) ಅವರಿಗೆ ನಾಚಿಕೆ ಆಗಬೇಕು. ಡಾ. ರಾಜ್ಕುಮಾರ್ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರಲ್ಲ, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ ಅಂತ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ (Gopala Krishna Beluru) ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ರಾಜೀನಾಮೆಗೆ ದೋಸ್ತಿ ನಾಯಕರ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ
ಡಾ. ರಾಜ್ಕುಮಾರ್ ತೀರಿಕೊಂಡಾಗ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು. ಕಂಠೀರವ ಸ್ಟುಡಿಯೋದಲ್ಲಿ ಆಗ ನಾನೂ ಇದ್ದೆ. ಆಗ ಕುಮಾರಸ್ವಾಮಿ ರಾಜೀನಾಮೆ ನೀಡಿದ್ರಾ..? ಹಾವೇರಿಯಲ್ಲಿ ರೈತರ ಮೇಲೆ ಬಿಎಸ್ವೈ ಗೋಲಿಬಾರ್ ಮಾಡಿಸಿದ್ರು, ರಾಜೀನಾಮೆ ನೀಡಿದ್ರಾ..? ಪಹಲ್ಗಾಮ್ ಉಗ್ರರ ದಾಳಿಯಲ್ಲಿ (Pahalgam Terror Attack) 26 ಮಂದಿ ಸತ್ರು, ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಆಗಿ ಹಲವರು ಸತ್ರು. ಪ್ರಧಾನಿ ಮೋದಿ (Narendra modi), ಅಮಿತ್ ಶಾ ರಾಜೀನಾಮೆ ನೀಡಿದ್ರಾ..? ಮೋದಿ, ಶಾ ರಾಜೀನಾಮೆ ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ ಅಂತ ಹೇಳಿದ್ದಾರೆ.
ಇಂತಹ ಘಟನೆ ಆಗಬಾರದಿತ್ತು, ಆದ್ರೆ ಆಗಿಹೋಗಿದೆ. ಅದಕ್ಕೆ ಪೊಲೀಸ್ ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಯ ನೇಮಕ ಹಿಂಪಡೆಯಲಾಗಿದೆ. ಸಿಎಂ, ಡಿಸಿಎಂ ಇಬ್ರೂ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ. ಇವೆಲ್ಲ ಆಕಸ್ಮಿಕ ಘಟನೆ, ನಾವೂ ಕೂಡ ನೋವಲ್ಲಿ ಇದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಹೇಳಿದರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಸಿಬ್ಬಂದಿಯಿಂದ ಅಭಿಮಾನಿಗಳ ಮೇಲೆ ಪೈಪ್ನಿಂದ ಹಲ್ಲೆ – ಬಹಳ ಭಯಾನಕವಾಗಿದೆ ಕಾಲ್ತುಳಿತದ ದೃಶ್ಯ
ಮುಂದುವರಿದು… 10 ಲಕ್ಷ ರೂ. ಪರಿಹಾರ ಸಾಕಾಗಲ್ಲ, ಕನಿಷ್ಠ 50 ಲಕ್ಷ ರೂ. ಕೊಡಬೇಕು. ನಾನೂ ಕೂಡ ಸರ್ಕಾರಕ್ಕೆ ಈ ಬಗ್ಗೆ ಒತ್ತಾಯ ಮಾಡ್ತೀನಿ. ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಮೋದಿ ರಾಜೀನಾಮೆ ಕೊಟ್ಟರೆ ನಾವೂ ರಾಜೀನಾಮೆ ಕೊಡಿಸುತ್ತೇವೆ. ಮೋದಿ, ಶಾ ರಾಜೀನಾಮೆ ಕೊಡಿಸಲು ತಾಕತ್ತು ಇದ್ಯಾ? ಕುಂಭಮೇಳದಲ್ಲಿ ಎಷ್ಟು ಜನ ಸತ್ತರು? ಬೆಂಕಿ ಹಚ್ಚೋ ಕೆಲಸ ಮಾಡಬಾರದು ಅಂತ ತಿಳಿವಳಿಕೆ ನೀಡಿದ್ದಾರೆ. ಇದನ್ನೂ ಓದಿ: Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ