ರೋಹಿಣಿ ಸಿಂಧೂರಿ VS ರೂಪಾ – ಸರ್ಕಾರಕ್ಕೆ ಎಲ್ಲರ ಮೇಲೂ ಕ್ರಮ ಕೈಗೊಳ್ಳುವ ಶಕ್ತಿಯಿದೆ: ಗೋಪಾಲಯ್ಯ

Public TV
1 Min Read
gopalaiah

ಹಾಸನ: ನಮ್ಮ ಸರ್ಕಾರಕ್ಕೆ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳುವ ಶಕ್ತಿಯಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಏನು ನಿರ್ದೇಶನ ಕೊಡಬೇಕು ಅದನ್ನು ಕೊಡ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ (K Gopalaiah) ಎಂದು ತಿಳಿಸಿದರು.

ಅಧಿಕಾರಿಗಳಾದ ರೋಹಿಣಿ ಸಿಂಧೂರಿ (Rohini Sindhuri) ಹಾಗೂ ರೂಪಾ (D Roopa) ಕಿತ್ತಾಟ ವಿಚಾರ ಕುರಿತು ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಮಾತನಾಡಿದ ಅವರು, ಇಬ್ಬರು ಹೆಣ್ಣುಮಕ್ಕಳು ಆ ರೀತಿ ಮಾಡಬಾರದಿತ್ತು. ಮುಖ್ಯಮಂತ್ರಿಗಳ ಹಂತದಲ್ಲೇ ಏನು ಕ್ರಮ ತೆಗೆದುಕೊಳ್ಳಬೇಕೋ,‌ ಆ ಕ್ರಮ ತೆಗೆದುಕೊಳ್ಳುವ ಕೆಲಸವನ್ನು ಮಾಡುತ್ತಾರೆ. ನಾನು ಅದರ ಬಗ್ಗೆ ಬೇರೆ ಏನು ಹೇಳಲ್ಲ. ಮುಖ್ಯಮಂತ್ರಿಗಳು ಅದರ ಬಗ್ಗೆ ಕ್ರಮ ವಹಿಸುತ್ತಾರೆ ಎಂದು ಹೇಳಿದರು.

rohini sindhuri roopa

ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಘಟನೆಯಲ್ಲ. ಯಾರೋ ಇಬ್ಬರು ವ್ಯಕ್ತಿಗಳ ಕಿತ್ತಾಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರಲ್ಲ. ಅವರು ತಪ್ಪು ಎಸಗಿದ್ದರೆ ಇಬ್ಬರ ಮೇಲೂ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದರು. ಇದನ್ನೂ ಓದಿ: ಹಳೆಯ ಪೀಠೋಪಕರಣ ನೀಡಿದ್ದಕ್ಕೆ ಮದುವೆಯನ್ನು ರದ್ದುಪಡಿಸಿದ ವರ

bjp flag

ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರ್ಪಡೆ ಬಗ್ಗೆ ಸುಳಿವು ನೀಡಿದ ಅವರು, ಯಾರೇ ಒಬ್ಬರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಸಂದರ್ಭದಲ್ಲಿ ಗೌರವಯುತವಾಗಿ ಅವರನ್ನು ಕರೆದುಕೊಳ್ಳುವ ಕೆಲಸ ಮಾಡುತ್ತಾರೆ. ಯಾರೇ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ನಡೆಯುತ್ತಿದೆ. ಸೂಕ್ತ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಕಾರ್ಯಕ್ರಮ ಇರುತ್ತದೆ. 1999ರಲ್ಲಿ ಹಾಸನ ಜಿಲ್ಲೆಯ ಪುಣ್ಯಾತ್ಮರು ಬಿಜೆಪಿಗೆ 4 ಸ್ಥಾನ ಗೆಲ್ಲಿಸಿಕೊಟ್ಟಿದ್ದಾರೆ. ನಮಗೆ ವಿಶ್ವಾಸವಿದೆ ಮತ್ತೆ ಅದು ಪುನರಾವರ್ತನೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕಡಬದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article