Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮದು ಪೇಪರ್‌ನಲ್ಲಿ ಇರೋ ಯೋಜನೆಯಲ್ಲ – ಕಿಸಾನ್ ಸಮ್ಮಾನ್ ಯೋಜನೆ ಪ್ರಧಾನಿ ಮೋದಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮ್ಮದು ಪೇಪರ್‌ನಲ್ಲಿ ಇರೋ ಯೋಜನೆಯಲ್ಲ – ಕಿಸಾನ್ ಸಮ್ಮಾನ್ ಯೋಜನೆ ಪ್ರಧಾನಿ ಮೋದಿ ಚಾಲನೆ

Latest

ನಮ್ಮದು ಪೇಪರ್‌ನಲ್ಲಿ ಇರೋ ಯೋಜನೆಯಲ್ಲ – ಕಿಸಾನ್ ಸಮ್ಮಾನ್ ಯೋಜನೆ ಪ್ರಧಾನಿ ಮೋದಿ ಚಾಲನೆ

Public TV
Last updated: February 24, 2019 2:41 pm
Public TV
Share
4 Min Read
PM Modi
SHARE

– ಮೊದಲ ಹಂತದಲ್ಲಿ 1 ಕೋಟಿ ರೈತರ ಖಾತೆಗೆ ತಲಾ 2 ಸಾವಿರ ಜಮೆ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗೋರಕ್‍ಪುರ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಹಿಂದಿನ ಸರ್ಕಾರದ ಯೋಜನೆಗಳು ಕೇವಲ ಪೇಪರ್‍ನಲ್ಲಿ ಮಾತ್ರ ಇತ್ತು. ಆದರೆ ನಮ್ಮ ಸರ್ಕಾರಲ್ಲಿ ಯಾವೆಲ್ಲ ಯೋಜನೆಗಳನ್ನು ಘೋಷಿಸಿದ್ದೇವೋ ಆ ಎಲ್ಲ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದೇವೆ ಎಂದು ಹೇಳಿದರು.

ಇದು ಕೇವಲ ಆರಂಭವಷ್ಟೇ. ಪ್ರತಿ ವರ್ಷ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು 75 ಸಾವಿರ ಕೋಟಿ ರೂ.ವನ್ನು ಮಿಸಲಿಡಲಾಗುತ್ತದೆ. ಇಲ್ಲಿ ಯಾವುದೇ ಮಧ್ಯವರ್ತಿಗಳ ಪಾತ್ರವಿರುವುದಿಲ್ಲ. ಇದು ನಿಮ್ಮ ಹಣ. ಇದನ್ನು ಯಾರಿಂದಲೂ ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

PM Narendra Modi in Gorakhpur on launch of #PMKisan Yojna: Desh ke 1.1 crore kisaano ke bank khaaton mein is yojna ki pehli kisht transfer karane ka saubhagya mujhe mila hai. Aaj etihaasik din hai pic.twitter.com/GQfQqZxlPf

— ANI UP/Uttarakhand (@ANINewsUP) February 24, 2019

ರೈತರ ಬಗ್ಗೆ ಹಗುರವಾಗಿ ಮಾತನಾಡುವವರು ರಾಜಕೀಯ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಾರೆ. ಯೋಜನೆಯಲ್ಲಿ ರಾಜಕೀಯ ತಂತ್ರವಿದೆ ಎನ್ನುವವರ ಮಾತಿಗೆ ಕಿವಿ ಕೊಡಬೇಡಿ ಎಂದು ರೈತರಿಗೆ ಮನವಿ ಮಾಡಿಕೊಂಡ ಮೋದಿ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ ವಿರುದ್ಧ ಮಾತನಾಡಿದ್ದ ನಾಯಕರಿಗೆ ಟಾಂಗ್ ಕೊಟ್ಟರು.

ಈ ಯೋಜನೆಯಿಂದಾಗಿ ದೇಶದ ಒಂದು ಕೋಟಿ ರೈತರ ಖಾತೆಗೆ ಇಂದು 2 ಸಾವಿರ ರೂ. ಪಾವತಿಯಾಗಲಿದೆ. ಜೊತೆಗೆ ಮುಂದಿನ ಎರಡು-ಮೂರು ದಿನಗಳಲ್ಲಿ ಮತ್ತೆ ಒಂದು ಕೋಟಿ ರೈತರ ಖಾತೆಗೆ ಹಣ ಪಾವತಿಯಾಗುತ್ತದೆ. ಈ ಮೂಲಕ ಒಟ್ಟು 12 ಕೋಟಿ ಸಣ್ಣ ಹಿಡುವಳಿದಾರ ರೈತರ ಖಾತೆಗೆ 2 ಸಾವಿರದಂತೆ ಮೂರು ಕಂತು (6,000 ರೂ.) ಪಾವತಿಯಾಗಲಿದೆ.

PM:Warn those state govts who are looking to play politics with #PMKisan Yojna, if you indulge in this then curse of farmers will destroy your politics.I appeal to farmers, don't be misled by anyone. 'Mahamilavti' logon ke moonh utre huye the Parliament mein jab scheme batayi gyi pic.twitter.com/zIyHCjj3Qb

— ANI UP/Uttarakhand (@ANINewsUP) February 24, 2019

ಏನಿದು ಯೋಜನೆ?:
ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಹೆಸರಿನಲ್ಲಿ ಯೋಜನೆಯನ್ನು ಆರಂಭಿಸಿದೆ. ವರ್ಷಕ್ಕೆ 6 ಸಾವಿರ ರೂ. ಹಣ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

ಅರ್ಹತೆಗಳು ಏನು?
2 ಹೆಕ್ಟೇರ್(4.94 ಎಕ್ರೆ) ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿಯನ್ನು ಹೊಂದಿರುವ ರೈತ ಕುಟುಂಬ ಈ ಯೋಜನೆಯ ಲಾಭವನ್ನು ಪಡೆಯಬಹುದು. 2019 ಫೆ.1ರ ಒಳಗಡೆ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಭೂ ದಾಖಲೆಗಳಲ್ಲಿ ನೊಂದಣಿಯಾದ ರೈತರು ಈ ಯೋಜನೆಗೆ ಅರ್ಹರಾಗುತ್ತಾರೆ. ಸರ್ಕಾರಿ ಉದ್ಯೋಗಿಗಳ ಪೈಕಿ ಗ್ರೂಪ್ ಡಿ/ ಬಹು ಕಾರ್ಯ ನಿರ್ವಹಿಸುವ ಸರ್ಕಾರಿ ನೌಕಕರು/ ನಾಲ್ಕನೇಯ ವರ್ಗದ ಸಿಬ್ಬಂದಿ ಸಹ ಈ ಯೋಜನೆಯ ಫಲಾನುಭವಿಗಳಾಗಬಹುದು.

kisan 1

ಎಲ್ಲಿ ಅರ್ಜಿ ಸಲ್ಲಿಸಬೇಕು?
ಪಿಎಂ-ಕಿಸಾನ್ ಯೋಜನೆಗೆಂದು ಕೇಂದ್ರ ಸರ್ಕಾರ pmkisan.nic.in ವೆಬ್‍ಸೈಟ್ ತೆರೆದಿದೆ. ಈ ಯೋಜನೆಗೆ ಅರ್ಹತೆ ಪಡೆದ ರೈತರು ಈ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಪಿಎಂ-ಕಿಸಾನ್ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ತಿಳಿಯಬಹುದು. ಆನ್‍ಲೈನ್ ಮೂಲಕ ಈ ವೆಬ್‍ಸೈಟ್ ನಲ್ಲಿ ರೈತರು ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ರೈತರು ತಮ್ಮ ಹೆಸರನ್ನು ಹಾಗೂ ವಿವರಗಳನ್ನು ನೊಂದಾಯಿಸಲು ಫೆಬ್ರವರಿ 25 ಕೊನೆಯ ದಿನಾಂಕವಾಗಿದೆ.

ಯಾವ ದಾಖಲೆಗಳು ಬೇಕು?:
ಸರ್ಕಾರದಿಂದ ಅನುಮೋದಿಸಿದ ಐಡಿ ಪುರಾವೆಗಳು, ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಮಾಹಿತಿ, ಕೃಷಿ ಭೂವಿಯ ದಾಖಲೆಗಳು ರೈತರ ಬಳಿ ಇರಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು.

kisan

ಈ ಯೋಜನೆಯಲ್ಲಿ ಗ್ರಾಮೀಣ ಕೃಷಿ ಭೂಮಿ ಅಥವಾ ನಗರ ಕೃಷಿ ಭೂಮಿಯೆಂದು ತಾರತಮ್ಯ ಮಾಡುವುದಿಲ್ಲ. ಗ್ರಾಮೀಣ ಹಾಗೂ ನಗರ ವ್ಯಾಪ್ತಿಗೆ ಬರುವ ಎರಡು ಕೃಷಿ ಭೂಮಿಗಳ ರೈತರು ಈ ಯೋಜನೆಗೆ ಅರ್ಹರು. ನಗರದಲ್ಲಿರುವ ಕೃಷಿ ಭೂಮಿಯನ್ನು ಪ್ರಸ್ತುತ ಈಗ ಕೃಷಿಗೆ ಚಟುವಟಿಕೆಗೆ ಬಳಸುತ್ತಿದ್ದರೆ ಮಾತ್ರ ಯೋಜನೆಯ ಫಲವನ್ನು ಪಡೆಯಬಹುದು.

ಎಷ್ಟು ಹಣ ಬರುತ್ತದೆ?
2 ಹೆಕ್ಟೇರ್ ಜಮೀನು ಹೊಂದಿರುವ ಸಣ್ಣ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಷಕ್ಕೆ 6 ಸಾವಿರ ರೂ. ಮೊತ್ತವನ್ನು 2 ಸಾವಿರ ರೂ. ನಂತೆ ಮೂರು ಕಂತುಗಳಲ್ಲಿ ಜಮೆ ಮಾಡುವ `ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಎಂದು ಕರೆಯಲಾಗುವ ಯೋಜನೆಯನ್ನು ಹಣಕಾಸು ಸಚಿವ ಪಿಯೂಶ್ ಗೋಯಲ್ ಈ ಬಾರಿಯ ಬಜೆಟ್ ನಲ್ಲಿ ಘೋಷಿಸಿದ್ದರು.

Farmer Kisan samman

ಈ ಯೋಜನೆಯಿಂದ 12 ಕೋಟಿಯಷ್ಟು ಸಣ್ಣ ಮತ್ತು ಬಡರೈತರಿಗೆ ಪ್ರಯೋಜನವಾಗಲಿದ್ದು, 2019-20ರ ಸಾಲಿನಲ್ಲಿ ಸರ್ಕಾರಕ್ಕೆ 75 ಸಾವಿರ ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. ಕೃಷಿ ಸಂಬಂಧಿ ಇತರ ಚಟುವಟಿಕೆಗಳಿಗೆ ಈ ಹಣ ನೆರವಾಗಲಿದೆ. ರೈತರು ಗೌರವಯುತ ಜೀವನ ಸಾಗಿಸಲು ಇದರಿಂದ ಸಾಧ್ಯವಾಗುತ್ತದೆ. 2018-19ರ ಸಾಲಿನಲ್ಲಿ ಪರಿಷ್ಕೃತ ಅಂದಾಜು ವಿಭಾಗದಲ್ಲಿ 20 ಸಾವಿರ ಕೋಟಿ ರೂ. ನೀಡಲಾಗಿದೆ. 2018ರ ಡಿಸೆಂಬರ್ ಪೂರ್ವಾನ್ವಯದಂತೆ ಈ ಯೋಜನೆ ಜಾರಿಯಾಗಲಿದೆ ಎಂದು ಗೋಯಲ್ ತಿಳಿಸಿದ್ದರು.

PM Modi: Jin kisaano ko aaj pehli kisht nahi mili hai, unhe bhi aane waale hafton mein pehli kisht ki raashi mil jayegi. Rajya sarkaron ko is yojna ke labh uthane wale kisaano ki list kendra sarkar ko bhejni hai #PMKisan https://t.co/CpS96Mkoez

— ANI UP/Uttarakhand (@ANINewsUP) February 24, 2019

ಚುನಾವಣೆಗೆ ಮೊದಲು ಬೀಳುತ್ತೆ ಹಣ:
ಲೋಕಸಭಾ ಚುನಾವಣೆಯ ಒಳಗಡೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರ ಖಾತೆಗಳಿಗೆ 4 ಸಾವಿರ ರೂ. ಜಮೆಯಾಗುವ ಸಾಧ್ಯತೆಯಿದೆ. ಈ ಯೋಜನೆ ಅನ್ವಯ ಮೊದಲ ಕಂತನ್ನು ಮಾರ್ಚ್ 31ರ ಒಳಗಡೆ ಹಾಕಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. ಇದರ ಜೊತೆಯಲ್ಲೇ ಎರಡನೇ ಕಂತಿನ ಹಣವನ್ನು ಲೋಕಸಭಾ ಚುನಾವಣೆಯ ಒಳಗಡೆ ಜಮೆ ಮಾಡಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಈ ಸಂಬಂಧ ವಿವಿಧ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಕೃಷಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದು, ಶೀಘ್ರವೇ ರೈತರ ಮಾಹಿತಿಯನ್ನು ನೀಡುವಂತೆ ಮನವಿ ಮಾಡಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:farmersGorakhpurkisan schemenarendra modiprime ministerPublic TVಉತ್ತರ ಪ್ರದೇಶಪಬ್ಲಿಕ್ ಟಿವಿಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಪ್ರಧಾನಿ ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿದ ಯುದ್ಧದ ಬಿಸಿ

Public TV
By Public TV
35 seconds ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
19 minutes ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
55 minutes ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
56 minutes ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
2 hours ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?